ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅಕ್ರಮ, ಪರವಾನಿಗೆ ಇಲ್ಲದೆ ಕೂಡಿಟ್ಟ ಪಟಾಕಿಗಳು ಜಪ್ತಿ

Advertisement
ರಾಯಚೂರು ಅ 13.ಜಿಲ್ಲೆಯಲ್ಲಿ ಅಕ್ರಮವಾಗಿ, ಪರವಾನಿಗೆ ಇಲ್ಲದೇ ಕೂಡಿಟ್ಟ ಪಟಾಕಿಗಳ ಬಗ್ಗೆ ಪ್ರಕರಣಗಳನ್ನು ದಾಖಲಿಸಿಕೊಳ್ಳಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

ಸಿಂಧನೂರು ತಾಲೂಕಿನ ತುರ್ವಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಗುಂಜಳ್ಳಿ ಕ್ಯಾಂಪಿನ ಸತ್ಯನಾರಾಯಣ ಶೆಟ್ಟಿ ಇವರ ಮನೆಯನ್ನು ನಾಗರಾಜ್ ಕೆ. ಎಂಬಾತನು ಬಾಡಿಗೆ ಪಡೆದುಕೊಂಡು, ಅದರಲ್ಲಿ ಅನಧಿಕೃತವಾಗಿ ಯಾವುದೇ ಪರವಾನಿಗೆ ಇಲ್ಲದೇ ಪಟಾಕಿಗಳನ್ನು ದಾಸ್ತಾನು ಮಾಡಿರುವ ಬಗ್ಗೆ ಅ.೧೨ ರಂದು ಸಂಜೆ ೦೬:೦೦ ಗಂಟೆಗೆ ಮಾಹಿತಿ ಬಂದ ಮೇರೆಗೆ ತುರುವಿಹಾಳ ಪೊಲೀಸ್ ಠಾಣೆ ಗುನ್ನೆ ನಂ. ೧೪೩/೨೦೨೩ ಕಲಂ ೨೮೬, ೩೩೬ ಐ.ಪಿ.ಸಿ, ಮತ್ತು ೯(ಬಿ) ಸ್ಫೋಟಕ ಕಾಯ್ದೆ ೧೮೮೪ ರ ಪ್ರಕಾರ ಪ್ರಕರಣ ದಾಖಲಿಸಿಕೊಂಡು, ಜಿಲ್ಲಾ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕರು, ರಾಯಚೂರು ರವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪಾಧೀಕ್ಷಕರು ಸಿಂಧನೂರು ರವರು ಸಿ.ಪಿ.ಐ. ಸಿಂಧನೂರು ಗ್ರಾಮೀಣ ವೃತ್ತ, ಪಿ.ಎಸ್.ಐ. ತುರ್ವಿಹಾಳ, ಸಿಬ್ಬಂದಿಯವರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳೊಂದಿಗೆ ದಾಳಿ ಮಾಡಿ, ಪಾಟಾಕಿಗಳನ್ನು ದಾಸ್ತಾನು ಮಾಡಿದ ನಾಗರಾಜ್ ಕೆ. ಈತನನ್ನು ವಶಕ್ಕೆ ಪಡೆದು ಆತನು ದಾಸ್ತಾನು ಮಾಡಿದ ೧,೧೪೧ ಕೆ.ಜಿ. ೬೭೦ ಗ್ರಾಂಗಳು ತೂಕದ ಅಂಕಿ, ರೂ ೨೪,೪೦,೦೪೩/- ಬೆಲೆ ಬಾಳುವ ಪಟಾಕಿಗಳನ್ನು ವಶಕ್ಕೆ ತೆಗೆದುಕೊಂಡಿದ್ದು ಇರುತ್ತದೆ.

ಅದೇ ರೀತಿ ರಾಯಚೂರು ನಗರದ ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬೇಸ್ತವಾರ ಪೇಟೆ ಏರಿಯಾದಲ್ಲಿರುವ ಗೀತಾ ಮಂದಿರ ಹತ್ತಿರದ ಮನೆಯಲ್ಲಿ ಪಿ. ರಮೇಶ ತಂದೆ ಪಿ.ಜೇಬಣ್ಣ ಈತನು ಪಟಾಕಿಗಳನ್ನು ಆಕ್ರಮವಾಗಿ ದಾಸ್ತಾನು ಮಾಡಿದ್ದಾರೆ ಅಂತಾ ಮಾಹಿತಿ ಬಂದ ಮೇರೆಗೆ ಸದರ್ ಬಜಾರ್ ಪೊಲೀಸ್ ಠಾಣೆ ಗುನ್ನೆ ನಂ. ೧೩೦/೨೦೨೩ ಕಲಂ ೨೮೬, ೩೩೬ ಐ.ಪಿ.ಸಿ, ಮತ್ತು ೯(ಬಿ) ಸ್ಫೋಟಕ ಕಾಯ್ದೆ ೧೮೮೪ ರ ಪ್ರಕಾರ ಪ್ರಕರಣ ದಾಖಲಿಸಿಕೊಂಡು ಪಿ.ಐ. ಸದರ್ ಬಜಾರ್ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಯವರು ಸ್ಥಳಕ್ಕೆ ಹೋಗಿ ಅಕ್ರಮವಾಗಿ ದಾಸ್ತಾನು ಮಾಡಿದ ಪಿ. ರಮೇಶ ತಂದೆ ಪಿ.ಜೇಬಣ್ಣ ಇವರನ್ನು ವಶಕ್ಕೆ ಪಡೆದು, ಆತನು ಆಕ್ರಮವಾಗಿ ದಾಸ್ತಾನು ಮಾಡಿದ ೩೦ ಕೆ.ಜಿ. ಅಂ.ಕಿ. ರೂ ೫೦,೦೦೦/- ಬೆಲೆ ಬಾಳುವ ವಿವಿಧ ಬಗೆಯ ಪಟಾಕಿಗಳನ್ನು ಜಪ್ತಿಪಡಿಸಿಕೊಳ್ಳಲಾಗಿದೆ.

ಈ ಪ್ರಕರಣಗಳ ಮೂಲವನ್ನು ಪತ್ತೆ ಹಚ್ಚಿ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ. ದಾಳಿಯಲ್ಲಿ ಪಾಲ್ಗೊಂಡ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯ ವೈಖರಿಯನ್ನು ಶ್ಲಾಘಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್