ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಇಸ್ರೇಲ್ ಸಂಘರ್ಷದ ಹಿನ್ನೆಲೆ: ವಿಜಯರತ್ನ ಸಾಧಕರು ಸುರಕ್ಷಿತ

Advertisement
BB NEWS KANNADA

ಇಸ್ರೇಲ್ ಸಂಘರ್ಷ ವಿಜಯರತ್ನ ಸಾಧಕರು ಸುರಕ್ಷಿತ

ಮಾಹಿತಿ ಹಂಚಿಕೊಂಡ ಡಾ. ಶಿವರಾಜ್ ಪಾಟೀಲ್

ಮಾರ್ಚ್ 01. ದುಬೈ: ಇರಾನ್–ಇಸ್ರೇಲ್ ಸಂಘರ್ಷದ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ Dubai International Airportನಲ್ಲಿ ವಿಮಾನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಸಂದರ್ಭದಲ್ಲೂ, ಕರ್ನಾಟಕದ ವಿಜಯರತ್ನ ಇಂಟರ್ನ್ಯಾಷನಲ್ ಅವಾರ್ಡ್ ಸಮಾರಂಭಕ್ಕೆ ತೆರಳಿದ್ದ ಎಲ್ಲ ಸಾಧಕರು ಸುರಕ್ಷಿತವಾಗಿದ್ದಾರೆ ಎಂಬ ಮಹತ್ವದ ಮಾಹಿತಿಯನ್ನು ವಿಜಯ ರತ್ನ ಪ್ರಶಸ್ತಿ ಪುರಸ್ಕೃತರಾದ ಹಾಗೂ ಸಿಂಧನೂರಿನ ಸಹನಾ ಮಕ್ಕಳ ಆಸ್ಪತ್ರೆಯ ವೈದ್ಯರಾದ Dr. Shivaraj Patil ಅವರು ಸ್ವತಃ ಹಂಚಿಕೊಂಡಿದ್ದಾರೆ.

Dubaiನಲ್ಲಿ ವಿಜಯವಾಣಿ ವತಿಯಿಂದ ಆಯೋಜಿಸಲಾದ ‘ವಿಜಯ ರತ್ನ ಇಂಟರ್ನ್ಯಾಷನಲ್ ಅವಾರ್ಡ್–2026’ ಕಾರ್ಯಕ್ರಮದಲ್ಲಿ ಕನ್ನಡ ನಾಡಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 27 ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

ಸಮಾರಂಭಕ್ಕೆ ತೆರಳಿದ್ದ 27 ಸಾಧಕರು, ಅವರ ಕುಟುಂಬಸ್ಥರು ಹಾಗೂ ವಿಜಯವಾಣಿ ಸಿಬ್ಬಂದಿ ಸೇರಿ ಒಟ್ಟು 64 ಜನರು ದುಬೈನಲ್ಲಿ ತಂಗಿದ್ದಾರೆ.

“ನಾವು ಎಲ್ಲರೂ ಸುರಕ್ಷಿತವಾಗಿದ್ದೇವೆ”

ಈ ಕುರಿತು ಪ್ರತಿಕ್ರಿಯಿಸಿದ ಡಾ. ಶಿವರಾಜ್ ಪಾಟೀಲ್ ಅವರು,

“ಫ್ಲೈಟ್ಸ್ ಕ್ಯಾನ್ಸಲ್ ಆಗಿದ್ದು ಹಾಗೂ ಏರ್ಪೋರ್ಟ್ ಕ್ಲೋಸ್ ಆಗಿರುವುದನ್ನು ಬಿಟ್ಟರೆ ಇಲ್ಲಿ ಯಾವುದೇ ಸಮಸ್ಯೆ ಇಲ್ಲ. ಪೂರ್ತಿ ರಾತ್ರಿ ಸೆಕ್ಯೂರಿಟಿ ಅಲರ್ಟ್ ಇತ್ತು. ಆದರೆ ನಾವು ಎಲ್ಲರೂ ಚೆನ್ನಾಗಿದ್ದೇವೆ ಮತ್ತು ಸುರಕ್ಷಿತವಾಗಿದ್ದೇವೆ. ನಮ್ಮ ಜೊತೆ ಡಾ. ಆನಂದ್ ಸಂಕೇಶ್ವರರು ಇದ್ದಾರೆ,” ಎಂದು ತಿಳಿಸಿದ್ದಾರೆ.

ಡಾ. ಆನಂದ್ ಸಂಕೇಶ್ವರರ ಮೇಲ್ವಿಚಾರಣೆ

ವಿ ಆರ್ ಎಲ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ Dr. Anand Sankeshwar ಅವರು ಖುದ್ದಾಗಿ ಎಲ್ಲಾ ವ್ಯವಸ್ಥೆಗಳ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಪ್ರತಿಷ್ಠಿತ ಹೋಟೆಲ್‌ನಲ್ಲಿ ಊಟ, ಉಪಹಾರ ಹಾಗೂ ವಾಸ್ತವ್ಯದ ಸಕಲ ವ್ಯವಸ್ಥೆ ಮಾಡಲಾಗಿದೆ.

ಕುಟುಂಬಸ್ಥರಿಗೆ ನಿಟ್ಟುಸಿರು

ಸಾಧಕರ ಸುರಕ್ಷತೆ ಬಗ್ಗೆ ಡಾ. ಶಿವರಾಜ್ ಪಾಟೀಲ್ ಅವರು ನೀಡಿದ ಮಾಹಿತಿ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ನಿಟ್ಟುಸಿರು ತಂದಿದೆ. ವಿಜಯರತ್ನ ಇಂಟರ್ನ್ಯಾಷನಲ್ ಅವಾರ್ಡ್ ಸಮಾರಂಭಕ್ಕೆ ತೆರಳಿದ್ದ ಎಲ್ಲಾ ಕನ್ನಡಿಗರು ಕ್ಷೇಮವಾಗಿರುವುದು ಸಮಾಧಾನಕರ ಸಂಗತಿಯಾಗಿದೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಕೆಲ ಕಪ್ಪು ಕುರಿಗಳಿಂದ ಪೊಲೀಸ್ ಇಲಾಖೆಗೆ ಕಳಂಕ!ತುಂಗಭದ್ರಾ ನೂತನ ಗೇಟ್‌ಗಳ ಉದ್ಘಾಟನೆ: ಆಂಧ್ರ-ತೆಲಂಗಾಣ ಮುಖ್ಯಮಂತ್ರಿಗಳಿಗೆ ಖುದ್ದು ಆಹ್ವಾನ ನೀಡಲು ಶಾಸಕರ ನಿಯೋಗ ರಚನೆಕುಡಿಯುವ ನೀರಿನ ಸಮಸ್ಯೆ ಎದುರಾಗುವ ಪ್ರದೇಶಗಳ ಮಾಹಿತಿ ನೀಡಿ DC ಪೂವಿತಾ ಎಸ್. ಸೂಚನೆಮ.ಕ.ಸಂಸ್ಥೆಗಳ ಪರಿಶೀಲನೆ ನಡೆಸಿದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಸತ್ಯ ನಾರಾಯಣ ಶೆಟ್ಟಿನವಲಿ ಸಮಾನಾಂತರ ಜಲಾಶಯಕ್ಕೆ ಡಿಕೆಶಿ ಗ್ರೀನ್ ಸಿಗ್ನಲ್..! ಬಸನಗೌಡ ಬಾದರ್ಲಿರಾಯಚೂರಿನಲ್ಲಿ ಲೋಕಾಯುಕ್ತ ದಿಡೀರ್ ದಾಳಿ: DDPI ಕಚೇರಿಯಲ್ಲಿ ಪರಿಶೀಲನೆ12 ವರ್ಷದ ಬಾಲಕನನ್ನು ಕಸಿದ ರೇಬೀಸ್: ಆರೋಗ್ಯ ಇಲಾಖೆಗೆ ನಾಚಿಕೆ ಆಗಬೇಕು!ಮೊಹರಂ ಹಬ್ಬ: ಜಿಲ್ಲೆಯ 29 ಗ್ರಾಮಗಳಲ್ಲಿ ಸಾರ್ವಜನಿಕ ಆಚರಣೆ, ಮೆರವಣಿಗೆ ನಿಷೇಧ‘ಕರ್ತವ್ಯ’ ಎಐ ವ್ಯವಸ್ಥೆಗೆ ಭಾರಿ ಸ್ಪಂದನೆ: ವಾರದಲ್ಲೇ 55 ಸಾವಿರಕ್ಕೂ ಹೆಚ್ಚು ಹೊಸ ನೋಂದಣಿರಕ್ತದಾನದ ಮಹತ್ವ ತಿಳಿಸುವ ಕಾರ್ಯವಾಗಲಿ: ಎಸ್ಪಿ ಅರುಣಾಂಗ್ಷು ಗಿರಿಮಾನ್ಯ ಜಿಲ್ಲಾಧಿಕಾರಿಗಳೇ... ಅಧಿಕಾರಿಗಳ ವರದಿಗಿಂತ ರೋಗಿಗಳ ಕಣ್ಣೀರು ಹೆಚ್ಚು ಸತ್ಯ ಹೇಳುತ್ತದೆ!ಮಹತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಗ್ರಾ.ಪಂ.ಲಕ್ಷಾಂತರ ರೂಪಾಯಿ ದುಬ್ಬಳಕ್ಕೆ ಆರೋಪ ಸಮಗ್ರ ತನಿಖೆಗೆ ದಲಿತ ಸಂಘಟನೆ ಆಗ್ರಹ ಮನೆಯೊಳಗೇ ಮರಣದ ನರ್ತನ!"ರೆಫರಲ್ ರಾಜಕಾರಣಕ್ಕೆ ಬಲಿಯಾಗುತ್ತಿವೆಯೇ ನವಜಾತ ಶಿಶುಗಳ ಜೀವಗಳು?"