ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕಾಂಗ್ರೆಸ್ ನಲ್ಲಿ ಹೊಂದಾಣಿಕೆ ರಾಜಕೀಯ ಆಗುತ್ತಾ ಅಥವಾ ಬಂಡಾಯದ ಬಿಸಿ ಏರುತ್ತಾ....??

Advertisement
ಏಪ್ರಿಲ್ 09. ರಾಜ್ಯದಲ್ಲಿ 2023 ನೇ ಸಾಲಿನ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಮೇ ಹತ್ತರಂದು ಮುಹೂರ್ತ ಫಿಕ್ಸ್ ಮಾಡಲಾಗಿದೆ ಮತ್ತು ಏಪ್ರಿಲ್ 13 ಇನ್ನು ನಾಲ್ಕು ದಿನದಲ್ಲಿ ಚುನಾವಣೆ ಅಧಿಸೂಚನೆ ಬಿಡುಗಡೆ ಮಾಡಲಿದ್ದು ಇದೇ ತಿಂಗಳು ಅಂದರೆ ಏಪ್ರಿಲ್ 20ರಂದು ನಾಮಪತ್ರ ಕೊನೆಯ ದಿನವಾಗಿದೆ.

ದಿನದಿಂದ ದಿನಕ್ಕೆ ರಾಜಕೀಯ ರಣರಂಗವಾಗುತ್ತಿದೆ ಪ್ರತಿಯೊಂದು ಕ್ಷೇತ್ರದಲ್ಲಿ ಕೂಡ ಆಕಾಂಕ್ಷಿಗಳು ಅತಿ ಹೆಚ್ಚು ಇದ್ದು ಟಿಕೆಟ್ ಪಡೆದವರು ಸಂತೋಷದಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ ಟಿಕೆಟ್ ಸಿಗದವರು ಅತಂತ್ರ ಸ್ಥಿತಿಯಲ್ಲಿ ಪಕ್ಷದಲ್ಲಿದ್ದು ಬೆಂಬಲ ನೀಡಬೇಕಾ ಅಥವಾ ಬೇರೆ ಪಕ್ಷಕ್ಕೆ ಹೋಗೋಣವೆಂದರೆ ಕೇವಲ ಕೆಲವೇ ದಿನಗಳು ಮಾತ್ರ ಚುನಾವಣೆ ಬಾಕಿ ಇದೆ ಏನು ಮಾಡಬೇಕು ಎಂಬುದು ತಿಳಿಯದೆ ಆತಂಕದಲ್ಲಿದ್ದಾರೆ



ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ಮೂರು ಜನ ಆಕಾಂಕ್ಷಿಗಳಿದ್ದರು ಹಂಪನಗೌಡ ಬಾದರ್ಲಿ ಬಸನಗೌಡ ಬಾದರ್ಲಿ ಹಾಗೂ ಕೆ ಕರಿಯಪ್ಪ. ಆದರೆ ಇತ್ತೀಚಿಗಷ್ಟೇ ಕಾಂಗ್ರೆಸ್ ಪಕ್ಷದಲ್ಲಿ ನನಗೆ ಟಿಕೆಟ್ ಸಿಗುವುದಿಲ್ಲ ಅಂದುಕೊಂಡು ಕೆ ಕರಿಯಪ್ಪ ಅವರು ನನಗೆ ಬಿಜೆಪಿಯಲ್ಲಿ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ ಎಂದು ತಮ್ಮ ಕಾರ್ಯಕರ್ತರ ಜೊತೆಗೆ ರಾಜಧಾನಿ ಬೆಂಗಳೂರಿನಲ್ಲಿ ಬಿಜೆಪಿ ಸೇರ್ಪಡೆಗೊಂಡರು.

ಹಾಗಾದರೆ ಭತ್ತದ ನಾಡು ಸಿಂಧನೂರು ವಿಧಾನಸಭಾ ಕ್ಷೇತ್ರದ ಅಖಾಡದಲ್ಲಿರುವರು ತಾತ ಹಂಪನಗೌಡ ಬಾದರ್ಲಿ ಮೊಮ್ಮಗ ಬಸನಗೌಡ ಬಾದರ್ಲಿ ಇವರಿಬ್ಬರು ಮಾತ್ರ ಇವರಿಬ್ಬರೂ ಕೂಡ ತಮ್ಮದೇ ಆದಂತ ಶಕ್ತಿಯನ್ನು ಪ್ರದೇಶಿಸುತ್ತಾ ಹಿರಿಯ ಮುಖಂಡರು ಜೊತೆ ಸೇರಿ ಹೈಕಮಾಂಡ್ ಮೇಲೆ ಒತ್ತಡ ಹಾಕುತ್ತಾ ನನಗೆ ಟಿಕೆಟ್ ಸಿಗುತ್ತೆ ಎಂದು ಬಿಂಬಿಸುತ್ತಾ ರಾಜಧಾನಿಯಲ್ಲಿ ಟಿಕಾಣೆ ಹೂಡಿದ್ದಾರೆ

ಆದರೆ ಕ್ಷೇತ್ರದಲ್ಲಿ ಮಾತ್ರ ಇವರಿಬ್ಬರ ಸಂಬಂಧಿಗಳು ಹಾಗೂ ಕಾರ್ಯಕರ್ತರು ನಮ್ಮ ಗೌಡರಿಗೆ ಟಿಕೆಟ್ ಸಿಕ್ಕಿದೆ ನಮ್ಮ ಗೌಡರಿಗೆ ಟಿಕೆಟ್ ಸಿಕ್ಕಿದೆ ಎಂದು ನಗರ ಸೇರಿದಂತೆ ಹಳ್ಳಿಗಳಲ್ಲಿ ತಮ್ಮ ತಮ್ಮ ಅಭ್ಯರ್ಥಿಗಳ ಪರ ಮತಯಾಚನೆಯಲ್ಲಿ ತೊಡಗಿದ್ದಾರೆ 



ಆದರೆ ಕಾಂಗ್ರೆಸ್ ಹೈಕಮಾಂಡ್ ಮಾತ್ರ ಗೊತ್ತಿದ್ದೂ ಗೊತ್ತಿಲ್ಲದು ಅಭ್ಯರ್ಥಿ ಯಾರು ಎಂದು ಹೇಳುತ್ತಿಲ್ಲವ ಅಥವಾ ಮುಚ್ಚಿ ಇಟ್ಟಿದೆಯಾ ಎಂಬುವುದು ಮತದಾರ ಪ್ರಭುವಿಗೆ ಅರ್ಥವಾಗುತ್ತಿಲ್ಲ ನಾಮಪತ್ರ ಸಲ್ಲಿಸಲು ಇನ್ನೇನು ಕೇವಲ 10 ರಿಂದ 11 ದಿನಗಳ ಮಾತ್ರ ಬಾಕಿ ಇದೆ ಹಾಗಾದರೆ ಟಿಕೆಟ್ ಘೋಷಣೆ ಯಾವಾಗ ಎಂಬುದು ವಿಷಯ ಮಾತ್ರ ಗುಪ್ತವಾಗಿದೆ.

ಒಟ್ಟರೆಯಾಗೆ ಹೇಳುವುದಾದರೆ ಇವರಿಬ್ಬರೂಗಳ ಕಾರ್ಯ ವೈಖರಿ ನೋಡಿದರೆ ತಮ್ಮದಾದಂತಹ ಸ್ವಂತ ವರ್ಚಸ್ಸಿನಲ್ಲಿ ಓಡಾಡುತ್ತಿರುವುದನ್ನು ನೋಡಿದರೆ ಟಿಕೆಟ್ ಸಿಗದವರು ಕಾಂಗ್ರೆಸ್ ಹೈಕಮಾಂಡಿಗೆ ಬಂಡಾಯದ ಬಿಸಿ ಮುಟ್ಟಿಸುವವರ ಅಥವಾ ಟಿಕೆಟ್ ಸಿಕ್ಕವರ ಜೊತೆ ಹೊಂದಾಣಿಕೆ ಮಾಡಿಕೊಂಡು ಮತ್ತು ಪಕ್ಷಕ್ಕೆ ಬೆಂಬಲ ನೀಡುತ್ತಾರಾ ಎಂದು ಕಾದುನೋಡಬೇಕಾಗಿದೆ.

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್