ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕಿಶೋರ ಕಾರ್ಮಿಕರ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ; ತಹಶೀಲ್ದಾರ್ ಸುರೇಶ ವರ್ಮ

Advertisement
 

https://youtu.be/EXHZCzNyWsg?si=RMfcW4VqU_xZeuys

ರಾಯಚೂರು,ಆ.20,(ಕರ್ನಾಟಕ ವಾರ್ತೆ):- ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ವ್ಯಾಪಕ ಪ್ರಚಾರ ಮತ್ತು ಜನರಲ್ಲಿ ತಿಳುವಳಿಕೆಯನ್ನು ಮೂಡಿಸಬೇಕು. ನಂತರ ಹಠಾತ್ ದಾಳಿಗಳನ್ನುಕೈಗೊಂಡು, ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಿರುವ ಮಾಲೀಕರ ವಿರುದ್ಧ ಸಂಬAಧಪಟ್ಟ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕೆಂದು ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ ಅವರು ಹೇಳಿದರು.



ಅವರು ಆ.19ರ ಸೋಮವರ ದಂದು ನಗರದ ತಹಶೀಲ್ದಾರರ ಕಚೇರಿಯಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ತಾಲೂಕ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ, ಮಾತನಾಡಿದರು. ಇನ್ನುಮುಂದೆ ಯಾವುದೇ ಕಾರಣಕ್ಕೂ ಮಕ್ಕಳನ್ನು ಕೆಲಸಕ್ಕೆ ಕಳುಹಿಸಬಾರದೆಂದು ಎಚ್ಚರಿಕೆ ನೀಡಿ, ಮಕ್ಕಳನ್ನು ಪ್ರತಿ ನಿತ್ಯ ಕಡ್ಡಾಯವಾಗಿ ಶಾಲೆಗೆ ಕಳುಹಿಸುವಂತೆ ತಾಕೀತು ಮಾಡಿದರು. ಸ್ಟಿರ‍್ಸ್ ಮತ್ತು ಕರಪತ್ರಗಳನ್ನು ಅಂಟಿಸುವ ಅಥವಾ ಹಂಚುವುದರ ಮುಖಾಂತರ ಜಾಗೃತಿಯನ್ನು ಮೂಡಿಸಬೇಕೆಂದರು. ನಗರದ ವಿವಿದ ಕಡೆ ತಪಾಸಣೆ: ರಾಯಚೂರು ತಾಲೂಕು ಟಾಸ್ಕ್ ಪೋರ್ಸ್ ತಂಡವು ರಾಯಚೂರು ನಗರದಾದ್ಯಂತ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್, ಕಿರಾಣಿ ಅಂಗಡಿ, ಗ್ಯಾರೇಜ್ ಮತ್ತು ಇನ್ನಿತರ ಉದ್ದಿಮೆಗಳನ್ನು ತಪಾಸಣೆ ಕೈಗೊಂಡಾಗ ಮೆ|| ಮಹಾಲಕ್ಷಿö್ಮÃ ಎಲೆಕ್ಟಾçನಿಕ್ಸ್ &ಚಿmಠಿ; ಹೋಮ್ ಅಪ್ಲಾಯನ್ಸಸ್ ರಾಯಚೂರುನಲ್ಲಿ ಒಬ್ಬ ಕಿಶೋರ ಕಾರ್ಮಿಕ ಮತ್ತು ಮೆ|| ಅಮಿತ್ ಡಿಜಿಟಲ್ ಎಲೆಕ್ಟಾçನಿಕ್ಸ್, ಮಾತಾ ವೈನ್ಸ್ ಎದುರುಗಡೆ, ಗಂಜ್ ರಸ್ತೆ, ರಾಯಚೂರುನಲ್ಲಿ ಒಬ್ಬ ಕಿಶೋರ ಕಾರ್ಮಿಕನು ಕೆಲಸ ಮಾಡುತ್ತಿರುವುದು ಕಂಡುಬAದಿದ್ದು, ಆ ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಿ, ರಾಯಚೂರಿನ ಸರಕಾರಿ ಬಾಲಕರ ಬಾಲ ಮಂದಿರವರಿಗೆ ಒಪ್ಪಿಸಲಾಯಿತು. ಮಕ್ಕಳನ್ನು ಕೆಲಸಕ್ಕೆ ನೇಮಕಮಾಡಿಕೊಂಡಿದ್ದ ಮೆ|| ಮಹಾಲಕ್ಷಿö್ಮÃ ಎಲೆಕ್ಟಾçನಿಕ್ಸ್ &ಚಿmಠಿ; ಹೋಮ್ ಅಪ್ಲಾಯನ್ಸಸ್ ಮಾಲೀಕರಾದ ರಾಜೇಶ್ ತಂದೆ ಗರ‍್ರಪ್ಪ, ಮತ್ತು ಮೆ|| ಅಮಿತ್ ಡಿಜಿಟಲ್ ಎಲೆಕ್ಟಾçನಿಕ್ಸ್ನ ಮಾಲೀಕರಾದ ನವೀನ್‌ಕುಮಾರ ತಂದೆ ಹೀರಾಲಾಲ್ ಅವರÀ ವಿರುದ್ಧ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ
ರಾಯಚೂರಿನ ನೇತಾಜಿನಗರ ಪೊಲೀಸ್ ಠಾಣೆ ಪ್ರಕರಣ ದಾಖಲು ಮಾಡಲಾಯಿತು. ಈ ವೇಳೆ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮಂಜುನಾಥ ರೆಡ್ಡಿ ಅವರು ಮಾತನಾಡಿ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016ರಂತೆ 14ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಾಗೂ 15ರಿಂದ 18ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಒಂದು ವೇಳೆ ದುಡಿಸಿಕೊಂಡಲ್ಲಿ 50,000/-ರೂ.ಗಳ ದಂಡ ಹಾಗೂ 2ವರ್ಷ ಜೈಲು ಶಿಕ್ಷೆ ಇರುತ್ತದೆ ಎಂದರು.



ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಾಣಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ದುಡಿಯುವ ಮಕ್ಕಳು ಕಂಡುಬAದಲ್ಲಿ ಮಕ್ಕಳ ಸಹಾಯವಾಣಿ-1098ಗೆ ಮಾಹಿತಿ ನೀಡಬಹುದಾಗಿದೆಂದರು. ಇದೇ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಮುದುಕಪ್ಪ, ರಾಯಚೂರಿನ 1ನೇ ವೃತ್ತ ಕಾರ್ಮಿಕ ನಿರೀಕ್ಷಕರಾದ ಮಹ್ಮದ್ ಉಮರ್ ಅಬ್ದುಲ್ ಘನಿ, 2ನೇ ವೃತ್ತ ಕಾರ್ಮಿಕ ನಿರೀಕ್ಷಕರಾದ ಪ್ರಿಯಾಂಕ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಜುನಾಥ, ಕಾರ್ಖಾನೆ ಮತ್ತು ಬಾಯ್ಲರ್‌ಗಳ ಇಲಾಖೆಯ ಸೂಪರಿಡೆಂಟ್ ರಮೇಶ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಇಸಿಒ ಮಂಜುನಾಥ ಸೇರಿದಂತೆಇತರರು ಇದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್