ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕೃಷಿಹೊಂಡದ ನರೇಗಾ ಕೂಲಿಕಾರರಿಗೆ ಮತದಾನ ಜಾಗೃತಿ ಮೇ 10 ರಂದು ಮರೆಯದೇ ಮತದಾನ ಮಾಡಲು ಮನವಿ

Advertisement
ರಾಯಚೂರು,ಏ.24(ಕ.ವಾ):- ಮುಂದೆ ಬರುವ ಮೇ 10 ರಂದು ವಿಧಾನ ಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಮಹಾತ್ಮಗಾಂಧಿ ನರೇಗಾ ಕೂಲಿಕಾರರು ತಪ್ಪದೇ ಮತದಾನದ ಚಲಾಯಿಸಿ, ಶತಪ್ರತಿಶತ ಮತದಾನ ರಾಯಚೂರು ಜಿಲ್ಲೆಯ ವಾಗ್ದಾನವನ್ನು ಪೂರೈಸೋಣ ಎಂದು ಐಇಸಿ ಸಂಯೋಜಕ ಧನರಾಜ ಅವರು ಹೇಳಿದರು.

ಅವರುಏ.26 ರಂದು (ಬುಧುವಾರ)ರಂದು ರಾಯಚೂರು ಜಿಲ್ಲೆಯ, ರಾಯಚೂರು ತಾಲೂಕಿನ ಕಾಡ್ಲೂರು ಗ್ರಾಮ ಪಂಚಾಯತಿಯ ಕೃಷಿಹೊಂಡ ಕಾಮಗಾರಿ ಸ್ಥಳದಲ್ಲಿ ಮಾತನಾಡಿದರು.



ಮತದಾನ ಜಾಗೃತಿ: ಸಾರ್ವಜನಿಕರು, ಕೂಲಿಕಾರರು ಎಲ್ಲಾರೂ ಕಡ್ಡಾಯವಾಗಿ ಮೇ-10 ರಂದು ಮತದಾನ ಮಾಡಬೇಕು. ಮತದಾನ ಸಂವಿಧಾನ ನೀಡಿರುವ ಒಂದು ವರ, ಹಾಗಾಗಿ ಯಾರು ಮತದಾನದಿಂದ ವಂಚಿತರಾಗದೇ, ಶತಪ್ರತಿಶತ ಮತದಾನ ರಾಯಚೂರು ಜಿಲ್ಲೆಯ ವಾಗ್ದಾನವನ್ನು ಪೂರೈಸೋಣ ಎಂದು ಮನವಿ ಮಾಡಿದರು. ನಂತರ ಎಲ್ಲಾ ಕೂಲಿಕಾರರಿಗೆ ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ, ಕೂಲಿಕಾರರಿಗೆ ಕೆಲಸ ಒದಗಿಸಲಾಗುತ್ತಿದೆ, ಪ್ರಸಕ್ತ ಅರ್ಥಿಕ ವರ್ಷ ಆರಂಭದ ಏಪ್ರಿಲ್ ತಿಂಗಳಿನಿಂದ ಯೋಜನೆಯಡಿ ಕೂಲಿಕಾರರಿಗೆ 309 ರಿಂದ ₹316/- ಕೂಲಿ ದರ ಹೆಚ್ಚಿಸಲಾಗಿದೆ. ಪುರುಷ ಮತ್ತು ಮಹಿಳೆಯರಿಗೆ ಸಮಾನ ಕೆಲಸಕ್ಕೆ ಸಮಾನ ಕೂಲಿ ಹಣವನ್ನು ನೀಡಲಾಗತ್ತದೆ. ಕಲ್ಬುರ್ಗಿ ಮತ್ತ ಬೆಳಗಾವಿ ವಿಭಾಗದ ಜಿಲ್ಲೆಗಳಿಗೆ ಅನ್ವಯಿಸುವಂತೆ, ಬೆಸಿಗೆ ತಾಪಮಾನದ ಪರಿಣಾಮವಾಗಿ, ಕೂಲಿಕಾರರ ಹಿತದೃಷ್ಟಯಿಂದ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಕೆಲಸ ಪರಿಮಾಣದಲ್ಲಿ ಶೇ 30% ರಷ್ಟು ರಿಯಾಯ್ತಿ ನೀಡಿದೆ. ಜೊತೆಗೆ ವೈಯಕ್ತಿಕ ಕಾಮಗಾರಿಗಳ ಸೌಲಭ್ಯಗಳನ್ನು ಪಡೆದುಕೊಳ್ಳಲು ಮನವಿ ಮಾಡಿದರು.



ಕೃಷಿಹೊಂಡ ನಿರ್ಮಾಣ ಮಾಡಿಕೊಳ್ಳುವುದರಿಂದ ರೈತನ ಹೊಲದಲ್ಲಿ ಬಿದ್ದ ಮಳೆ ನೀರುಪಾಲಾಗಿ ಹರಿದು ಹೋಗದೆ,ಹೊಂಡದಲ್ಲಿ ನೀರು ಸಂಗ್ರಹ ಮಾಡಲು ಹಾಗೂ ಬೆಳೆ ಸಂದಿಗ್ಧ ಪರಿಸ್ಥಿತಿಯಲ್ಲಿ ಬೆಳೆಗೆ ನೀರು ಉಣಿಸಲು ಮತ್ತು ಅರ್ಥಿಕವಾಗಿ ಸಬಲರಾಗಲು ಕೃಷಿಹೊಂಡ ಅನುಕೂಲವಾಗುತ್ತದೆ ಎಂದು ಜಗದೀಶ್ ಜಿಐಎಸ್ ಪರಿಣಿತರು ತಿಳಿಸಿದರು.

ಈ ಸಂದರ್ಭದಲ್ಲಿ ರವಿಚಂದ್ರ ಕರ ವಸೂಲಿಗಾರ, ಬಿ.ಎಪ್.ಟಿ ಹನುಮಂತರಾಯ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಹಾಗೂ ನರೇಗಾ ಮೇಟ್ ಮತ್ತು ಕೂಲಿಕಾರರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್