ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕೃಷಿಹೊಂಡದ ನರೇಗಾ ಕೂಲಿಕಾರರಿಗೆ ಮತದಾನ ಜಾಗೃತಿ ಮೇ 10 ರಂದು ಮರೆಯದೇ ಮತದಾನ ಮಾಡಲು ಮನವಿ

ರಾಯಚೂರು,ಏ.24(ಕ.ವಾ):- ಮುಂದೆ ಬರುವ ಮೇ 10 ರಂದು ವಿಧಾನ ಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಮಹಾತ್ಮಗಾಂಧಿ ನರೇಗಾ ಕೂಲಿಕಾರರು ತಪ್ಪದೇ ಮತದಾನದ ಚಲಾಯಿಸಿ, ಶತಪ್ರತಿಶತ ಮತದಾನ ರಾಯಚೂರು ಜಿಲ್ಲೆಯ ವಾಗ್ದಾನವನ್ನು ಪೂರೈಸೋಣ ಎಂದು ಐಇಸಿ ಸಂಯೋಜಕ ಧನರಾಜ ಅವರು ಹೇಳಿದರು.

ಅವರುಏ.26 ರಂದು (ಬುಧುವಾರ)ರಂದು ರಾಯಚೂರು ಜಿಲ್ಲೆಯ, ರಾಯಚೂರು ತಾಲೂಕಿನ ಕಾಡ್ಲೂರು ಗ್ರಾಮ ಪಂಚಾಯತಿಯ ಕೃಷಿಹೊಂಡ ಕಾಮಗಾರಿ ಸ್ಥಳದಲ್ಲಿ ಮಾತನಾಡಿದರು.



ಮತದಾನ ಜಾಗೃತಿ: ಸಾರ್ವಜನಿಕರು, ಕೂಲಿಕಾರರು ಎಲ್ಲಾರೂ ಕಡ್ಡಾಯವಾಗಿ ಮೇ-10 ರಂದು ಮತದಾನ ಮಾಡಬೇಕು. ಮತದಾನ ಸಂವಿಧಾನ ನೀಡಿರುವ ಒಂದು ವರ, ಹಾಗಾಗಿ ಯಾರು ಮತದಾನದಿಂದ ವಂಚಿತರಾಗದೇ, ಶತಪ್ರತಿಶತ ಮತದಾನ ರಾಯಚೂರು ಜಿಲ್ಲೆಯ ವಾಗ್ದಾನವನ್ನು ಪೂರೈಸೋಣ ಎಂದು ಮನವಿ ಮಾಡಿದರು. ನಂತರ ಎಲ್ಲಾ ಕೂಲಿಕಾರರಿಗೆ ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ, ಕೂಲಿಕಾರರಿಗೆ ಕೆಲಸ ಒದಗಿಸಲಾಗುತ್ತಿದೆ, ಪ್ರಸಕ್ತ ಅರ್ಥಿಕ ವರ್ಷ ಆರಂಭದ ಏಪ್ರಿಲ್ ತಿಂಗಳಿನಿಂದ ಯೋಜನೆಯಡಿ ಕೂಲಿಕಾರರಿಗೆ 309 ರಿಂದ ₹316/- ಕೂಲಿ ದರ ಹೆಚ್ಚಿಸಲಾಗಿದೆ. ಪುರುಷ ಮತ್ತು ಮಹಿಳೆಯರಿಗೆ ಸಮಾನ ಕೆಲಸಕ್ಕೆ ಸಮಾನ ಕೂಲಿ ಹಣವನ್ನು ನೀಡಲಾಗತ್ತದೆ. ಕಲ್ಬುರ್ಗಿ ಮತ್ತ ಬೆಳಗಾವಿ ವಿಭಾಗದ ಜಿಲ್ಲೆಗಳಿಗೆ ಅನ್ವಯಿಸುವಂತೆ, ಬೆಸಿಗೆ ತಾಪಮಾನದ ಪರಿಣಾಮವಾಗಿ, ಕೂಲಿಕಾರರ ಹಿತದೃಷ್ಟಯಿಂದ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಕೆಲಸ ಪರಿಮಾಣದಲ್ಲಿ ಶೇ 30% ರಷ್ಟು ರಿಯಾಯ್ತಿ ನೀಡಿದೆ. ಜೊತೆಗೆ ವೈಯಕ್ತಿಕ ಕಾಮಗಾರಿಗಳ ಸೌಲಭ್ಯಗಳನ್ನು ಪಡೆದುಕೊಳ್ಳಲು ಮನವಿ ಮಾಡಿದರು.



ಕೃಷಿಹೊಂಡ ನಿರ್ಮಾಣ ಮಾಡಿಕೊಳ್ಳುವುದರಿಂದ ರೈತನ ಹೊಲದಲ್ಲಿ ಬಿದ್ದ ಮಳೆ ನೀರುಪಾಲಾಗಿ ಹರಿದು ಹೋಗದೆ,ಹೊಂಡದಲ್ಲಿ ನೀರು ಸಂಗ್ರಹ ಮಾಡಲು ಹಾಗೂ ಬೆಳೆ ಸಂದಿಗ್ಧ ಪರಿಸ್ಥಿತಿಯಲ್ಲಿ ಬೆಳೆಗೆ ನೀರು ಉಣಿಸಲು ಮತ್ತು ಅರ್ಥಿಕವಾಗಿ ಸಬಲರಾಗಲು ಕೃಷಿಹೊಂಡ ಅನುಕೂಲವಾಗುತ್ತದೆ ಎಂದು ಜಗದೀಶ್ ಜಿಐಎಸ್ ಪರಿಣಿತರು ತಿಳಿಸಿದರು.

ಈ ಸಂದರ್ಭದಲ್ಲಿ ರವಿಚಂದ್ರ ಕರ ವಸೂಲಿಗಾರ, ಬಿ.ಎಪ್.ಟಿ ಹನುಮಂತರಾಯ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಹಾಗೂ ನರೇಗಾ ಮೇಟ್ ಮತ್ತು ಕೂಲಿಕಾರರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿಗೆ ಅಭಿನಯ ಚಕ್ರವರ್ತಿ ಸುದೀಪ್ ಆಗಮನಬಿಜೆಪಿ ಯುವ ಅಧ್ಯಕ್ಷ ಹತ್ಯೆ: ಆರು ಮಂದಿಗೆ ಗಲ್ಲು!MCH ಆಸ್ಪತ್ರೆಯಲ್ಲಿ ಡಾ. ಶೃತಿ ನಿರ್ಲಕ್ಷ್ಯ? ನವಜಾತ ಶಿಶು ಸಾವುಗಳ ನಡುವೆಯೇ ಗಂಭೀರ ಆರೋಪ ಸಿಂಧನೂರಿನ ಯುವಕ ಕಾಣೆಯಾದ ಪ್ರಕರಣ: ಪೋಷಕರ ಕಣ್ಣೀರಿನ ಮನವಿಸುಳ್ಳು ದೂರುಗಳಿಗೆ ಕಡಿವಾಣ: 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು“50 ವರ್ಷಗಳ ಬದುಕಿಗೆ 15 ದಿನಗಳ ಗಡುವು: ಗಾಂಧಿನಗರದ 80 ಬಡ ಕುಟುಂಬಗಳ ಮೇಲೆ ಜೆಸಿಬಿ ನೆರಳು!”ಪೊಲೀಸ್ ಪೇದೆ ಮದುವೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಮಾನವೀಯತೆಗೆ ಮಾದರಿ ಘಟನೆನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತ!ಬರುವ ದಿನಗಳು ಅಶಾಂತಿ ಸೂಚನೆ – ಅನ್ನ ನೀರಿಗೆ ಆಹಾಕಾರ: ಕೋಡಿಮಠ ಸ್ವಾಮೀಜಿ ಭವಿಷ್ಯಚಲಿಸುತ್ತಿದ್ದ ಬಸ್ ಏಕಾಏಕಿ ಜಮೀನಿಗೆ ನುಗ್ಗಿದ ಘಟನೆ – ನೂರಕ್ಕೂ ಹೆಚ್ಚು ಪ್ರಯಾಣಿಕರು ಪಾರು!ಕಲಮಂಗಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಭರ್ಜರಿ ಸಾಧನೆ“ಬಿಸಿಲಿನ ಅಬ್ಬರ: ಕರ್ನಾಟಕಲ್ಲಿ ಲಾಕ್‌ಡೌನ್ ಬರುತ್ತಾ..?”625ಕ್ಕೆ 625: ರಾಯಚೂರು ಸುಖದೇವ್ ಸಾಧನೆ