ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕೆ ಕರಿಯಪ್ಪಗೆ ಒಲಿದ ಬಿಜೆಪಿ ಟಿಕೆಟ್ ಒಗ್ಗಟ್ಟಾಗಿ ಚುನಾವಣೆ ಎದುರಿಸುವವರ ಆಕಾಂಕ್ಷಿಗಳು....?

ಏಪ್ರಿಲ್ 11. ಸಿಂಧನೂರು ಇನ್ನೇನು ಕೆಲವೇ ದಿನಗಳು ಮಾತ್ರ ಚುನಾವಣೆ ಬಾಕಿ ಇದ್ದು ಏಪ್ರಿಲ್ 13ರಂದು ನಾಮಪತ್ರ ಸಲ್ಲಿಸಲು ಪ್ರಾರಂಭವಾಗಲಿದೆ ಮತ್ತು ಏಪ್ರಿಲ್ 20 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಬರುವ ತಿಂಗಳು ಅಂದರೆ ಮೇ ಹತ್ತಕ್ಕೆ ಚುನಾವಣೆ ನಡೆಯಲಿದ್ದು ಈ ಹಿನ್ನಲೆ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡಿದೆ ಅದರಲ್ಲಿ ವಿಶೇಷವಾಗಿ ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ಅತಿ ಹೆಚ್ಚು ಆಕಾಂಕ್ಷಿಗಳಿದ್ದು ಕೆಲವು ದಿನಗಳ ಹಿಂದೆ ಕಾಂಗ್ರೆಸ್ಸಿನ ಬಿಟ್ಟು ಬಿಜೆಪಿ ಸೇರ್ಪಡೆಗೊಂಡಿದ್ದ ಕೆ.ಕರಿಯಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ

 

ನಮ್ಮ ಬಡವರ ಬಾರಕೋಲು ಡಿಜಿಟಲ್ ಸುದ್ದಿಯು ಕೆಲವು ದಿನಗಳ ಹಿಂದೆ ಕೆ ಕರಿಯಪ್ಪ ಅವರಿಗೆ ಟಿಕೆಟ್ ನೀಡಬಹುದು ಎಂದು ಸುದ್ದಿಯನ್ನು ಮಾಡಿತ್ತು ಅದೇ ರೀತಿ ಈ ದಿನ ಕೆ ಕರಿಯಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ

ಆದರೆ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಆರರಿಂದ ಎಂಟು ಆಕಾಂಕ್ಷಿಗಳಿದ್ದು ಕಾಡ ಅಧ್ಯಕ್ಷ ಕೊಲ್ಲ ಶೇಷಗಿರಿ ರಾವ್ ಕೆಫೆಕ ಅಧ್ಯಕ್ಷ ಕೆ ವಿರುಪಾಕ್ಷಪ್ಪ ಉದ್ಯಮಿಗಳಾದ ರಾಜೇಶ್ ಹಿರೇಮಠ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಿವನಗೌಡ ಗೋರೆಬಾಳ ವಿರುಪಾಪುರ ಅಮರೆಗೌಡ ಕೆ ಮರಿಯಪ್ಪ ಮತ್ತು ಇತರ ಹೆಸರು ಕೇಳಿ ಬರುತ್ತಿತ್ತು ಆದರೆ ಇದೀಗ ತಾನೇ ಕೆ ಕರಿಯಪ್ಪ ಅವರಿಗೆ ಬಿಜೆಪಿ ಘೋಷಣೆ ಮಾಡಿದೆ



ಕೆ ಕರಿಯಪ್ಪ ಅವರ ಸಂಬಂಧಿ ಹಾಗೂ ಕೆಫೆಕ ಅಧ್ಯಕ್ಷರಾದ ಕೆ ವಿರುಪಾಕ್ಷಪ್ಪ ಅವರು ಸೇರಿದಂತೆ ಆಕಾಂಕ್ಷಿಗಳೆಲ್ಲರೂ ಒಗ್ಗಟ್ಟಾಗಿ ಚುನಾವಣೆ ಮಾಡಿದರೆ ಕೆ ಕರಿಯಪ್ಪ ಅವರು ಗೆಲ್ಲುವುದರಲ್ಲಿ ಎರಡನೆಯ ಮಾತಿಲ್ಲ ಎಂದು ಕೆಲವು ಕಾರ್ಯಕರ್ತರು ಮಾತನಾಡುತ್ತಿದ್ದಾರೆ ಆದರೆ ಸಾಕಷ್ಟು ಆಕಾಂಕ್ಷಿಗಳು ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿದ್ದು ಅವರೆಲ್ಲರೂ ಕೂಡ ನನಗೆ ಟಿಕೆಟ್ ನೀಡಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಕೆಲವು ಕಾರ್ಯಕರ್ತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಾಗಾದರೆ ಆಕಾಂಕ್ಷಿಗಳೆಲ್ಲರೂ ಒಗ್ಗಟ್ಟಾಗಿ ಚುನಾವಣೆ ಮಾಡುತ್ತಾರ....? ಕೆ ಕರಿಯಪ್ಪ ಅವರು ಆಕಾಂಕ್ಷಿಗಳಲ್ಲರನ್ನೂ ಒಗ್ಗೂಡಿಸಿಕೊಂಡು ಕ್ಷೇತ್ರದಾದ್ಯಂತ ಪ್ರಚಾರ ಮಾಡಿ ಕೈಗೆ ಕೈ ಕೊಟ್ಟ ಕರಿಯಪ್ಪ ಕಮಲ ಅರಳಿಸುತ್ತಾರ ಗೆಲುವಿನ ನಗೆ ಬೀರಲಿದ್ದಾರಾ ಎಂದು ಕಾದುನೋಡಬೇಕಾಗಿದೆ
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಬಿಜೆಪಿ ಯುವ ಅಧ್ಯಕ್ಷ ಹತ್ಯೆ: ಆರು ಮಂದಿಗೆ ಗಲ್ಲು!MCH ಆಸ್ಪತ್ರೆಯಲ್ಲಿ ಡಾ. ಶೃತಿ ನಿರ್ಲಕ್ಷ್ಯ? ನವಜಾತ ಶಿಶು ಸಾವುಗಳ ನಡುವೆಯೇ ಗಂಭೀರ ಆರೋಪ ಸಿಂಧನೂರಿನ ಯುವಕ ಕಾಣೆಯಾದ ಪ್ರಕರಣ: ಪೋಷಕರ ಕಣ್ಣೀರಿನ ಮನವಿಸುಳ್ಳು ದೂರುಗಳಿಗೆ ಕಡಿವಾಣ: 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು“50 ವರ್ಷಗಳ ಬದುಕಿಗೆ 15 ದಿನಗಳ ಗಡುವು: ಗಾಂಧಿನಗರದ 80 ಬಡ ಕುಟುಂಬಗಳ ಮೇಲೆ ಜೆಸಿಬಿ ನೆರಳು!”ಪೊಲೀಸ್ ಪೇದೆ ಮದುವೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಮಾನವೀಯತೆಗೆ ಮಾದರಿ ಘಟನೆನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತ!ಬರುವ ದಿನಗಳು ಅಶಾಂತಿ ಸೂಚನೆ – ಅನ್ನ ನೀರಿಗೆ ಆಹಾಕಾರ: ಕೋಡಿಮಠ ಸ್ವಾಮೀಜಿ ಭವಿಷ್ಯಚಲಿಸುತ್ತಿದ್ದ ಬಸ್ ಏಕಾಏಕಿ ಜಮೀನಿಗೆ ನುಗ್ಗಿದ ಘಟನೆ – ನೂರಕ್ಕೂ ಹೆಚ್ಚು ಪ್ರಯಾಣಿಕರು ಪಾರು!ಕಲಮಂಗಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಭರ್ಜರಿ ಸಾಧನೆ“ಬಿಸಿಲಿನ ಅಬ್ಬರ: ಕರ್ನಾಟಕಲ್ಲಿ ಲಾಕ್‌ಡೌನ್ ಬರುತ್ತಾ..?”625ಕ್ಕೆ 625: ರಾಯಚೂರು ಸುಖದೇವ್ ಸಾಧನೆಲೋಕಾಯುಕ್ತ ಬಲೆಗೆ ಬಿದ್ದ ಕೆರೂರ ಪಿ.ಎಸ್.ಐ. ಭೀಮಪ್ಪ ರಬಕವಿ