ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕೌಶಲ್ಯಾಭಿವೃದ್ಧಿ, ವೃತ್ತಿ ಮಾರ್ಗದರ್ಶನದ ಕುರಿತು ತರಬೇತಿ ಕಾರ್ಯಗಾರ

Advertisement
ರಾಯಚೂರು,ಏ.24(ಕ.ವಾ):- ಕೌಶಲ್ಯಾಭಿವೃದ್ಧಿ ಮತ್ತು ವೃತ್ತಿ ಮಾರ್ಗದರ್ಶನದ ಕುರಿತು ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಎನ್.ಎಸ್.ಎಸ್ ಅಧಿಕಾರಿಗಳು, ಉಪನ್ಯಾಸಕರು ಈ ತರಬೇತಿ ಕಾರ್ಯಗಾರದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ ಅವರು ಹೇಳಿದರು.

ಅವರು ಏ.24ರಂದು ನಗರದ ಖಾಸಗಿ ಹೊಟೆಲ್‍ವೊಂದರಲ್ಲಿ ಎಸ್.ಎ.ಪಿ, ಕೌಶಲ್ಯ ಕರ್ನಾಟಕ, ಎನ್.ಎಸ್.ಎಸ್, ವಿಶ್ವಸಂಸ್ಥೆ ಅಭಿವೃದ್ಧಿ ಕಾರ್ಯಕ್ರಮ(ಯುಎನ್.ಡಿ.ಪಿ) ಹಾಗೂ ಹೆಡ್,ಹೆಲ್ಡ್,ಹೈ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕೌಶಲ್ಯಾಭಿವೃದ್ಧಿ ಮತ್ತು ವೃತ್ತಿ ಮಾರ್ಗದರ್ಶನಕುರಿತು ತರಬೇತಿ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದರು.



ಇದಕ್ಕೂ ಮೊದಲು ಹೆಡ್‍ಹೆಲ್ಡ್‍ಹೈ ವ್ಯವಸ್ಥಾಪಕ ರಾಘವೇಂದ್ರ ಅವರು ಮಾತನಾಡಿ, ಕೋಡ್ ಉನ್ನತಿ ಯೋಜನೆಯು ಪ್ರಥಮ ಹಂತದಲ್ಲಿ ಬೆಂಗಳೂರು ಗ್ರಾಮಾಂತರ, ರಾಮನಗರ, ದಕ್ಷಿಣ ಕನ್ನಡ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಜಾರಿಗೆ ಬಂದಿದ್ದು, 2020ರಿಂದ 23ರವರೆಗೆ ಒಟ್ಟು ಮೂರು ವರ್ಷಗಳ ವರೆಗೆ ಈ ಯೋಜನೆ ನಡೆದು ಬಂದು ಇದೀಗ ಮುಕ್ತಾಯದ ಹಂತದಲ್ಲಿದೆ ಎಂದರು.

ಯೋಜನೆಯಡಿ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ಎನ್.ಎಸ್.ಎಸ್ ಅಧಿಕಾರಿಗಳಿಗೆ ಉದ್ಯಮಶೀಲತೆ ಮತ್ತು ವೃತ್ತಿ ಮಾರ್ಗದರ್ಶನದ ಕುರಿತು ತರಬೇತಿ ನೀಡಲಾಗುತ್ತಿದೆ ಎಂದರು.

https://youtu.be/BKCJdUVIaZ8

ಈ ಸಂದರ್ಭದಲ್ಲಿ ರಾಯಚೂರು ವಿವಿಯ ರಿಜಿಸ್ಟ್ರಾರ್ ಹಾಗೂ ಎನ್.ಎಸ್,ಎಸ್ ಘಟಕದ ಸಂಯೋಜಕ ಡಾ.ಡಿಎಸ್ ಬಿರಾದಾರ, ಸಿಡಾಕ್‍ನ ಜಂಟಿ ನಿರ್ದೇಶಕ ಜಿ.ಎಸ್ ಹುಡೇದ್, ಯುಎನ್‍ಡಿಪಿ ಜಿಲ್ಲಾ ಸಹಾಯಕ ಶಶಿ ಕಾಂಬ್ಲೇಕರ್, ಸಮುದಾಯ ಸಂಯೋಜಕರಾದ ನರಸರೆಡ್ಡಿ, ಗಿರಿಜಾರಾಮ್, ವಿವಿಧ ಸರಕಾರಿ ಕಾಲೇಜುಗಳ ಪ್ರಾಂಶುಪಾಲರಾದ ಸವಿತಾ ನಾಯಕ, ಸುಮಂಗಲ, ಪಿ.ದೊರಸಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್