ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಗಮನಸೆಳೆದ ಪೋಲೀಸ್ ಮತ್ತು ಅರೆಸೇನಾ ಪಡೆಯ ಪಥಸಂಚಲನ

Advertisement
ಏಪ್ರಿಲ್ ೦7.ಸಿರುಗುಪ್ಪ ನಗರದ ತಾಲೂಕು ಕ್ರೀಡಾಂಗಣದಿಂದ ಪೋಲೀಸ್ ಠಾಣೆಯವರೆಗೂ ಪೋಲೀಸ್ ಇಲಾಖೆ ಮತ್ತು ಅರೆಸೇನಾ ಪಡೆಯಿಂದ ಗುರುವಾರ ಸಾಯಂಕಾಲ ಪಥಸಂಚಲನ ನಡೆಸುವುದರೊಂದಿಗೆ ಚುನಾವಣೆ ಭದ್ರತೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.

ನಗರದ ಪ್ರಮುಖ ಬೀದಿಗಳಲ್ಲಿ ಶಿಸ್ತುಬದ್ದವಾಗಿ ಪಥಸಂಚಲನದಲ್ಲಿ ಸಾಗುತ್ತಿರುವ ಯೋದರಿಗೆ ಹಾಗೂ ಪೋಲೀಸ್ ಸಿಬ್ಬಂದಿಗಳಿಗೆ ಶ್ರೀ ಕನಕದಾಸ ವೃತ್ತ, ಶ್ರೀ ವಾಲ್ಮೀಕಿ ವೃತ್ತ, ಮಹಾತ್ಮ ಗಾಂಧೀಜಿ ವೃತ್ತ, ಶ್ರೀ ಸಿದ್ದರಾಮೇಶ್ವರ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ವೃತ್ತ, ಶ್ರೀ ವಾಸವಿ ಕನ್ನಿಕಾಪರಮೇಶ್ವರಿ ವೃತ್ತ, ಟಿಪ್ಪು ಸುಲ್ತಾನ್ ವೃತ್ತ, ಹಾಗೂ ಬಾಬು ಜಗಜೀವನ್ ರಾಂ ವೃತ್ತಗಳ ಬಳಿ ನೆರೆದಿದ್ದ ಸಾರ್ವಜನಿಕರು ಪುಷ್ಪಗಳ ಸುರಿಮಳೆಗೈದು ಸ್ವಾಗತಿಸಿದರು.

ಸಿರುಗುಪ್ಪ ವಿಭಾಗದ ಉಪಾಧೀಕ್ಷಕ ವೆಂಕಟೇಶ್ ಅವರು ಮಾತನಾಡಿ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರಾಮಾಣಿಕ ಮತ್ತು ನ್ಯಾಯಸಮ್ಮತವಾಗಿ ಮಾದರಿ ನೀತಿಸಂಹಿತೆಯೊಂದಿಗೆ ಮೇ.೧೦ರಂದು ರಾಜ್ಯಾದ್ಯಂತ ಏಕಕಾಲಕ್ಕೆ ಮತದಾನ ಕಾರ್ಯ ನಡೆಯಲ್ಲಿದ್ದು, ಮತದಾರರು ಯಾವುದೇ ಪಕ್ಷಗಳ ಆಮಿಷಕ್ಕೊಳಗಾಗದೇ ನಿರ್ಭೀತಿಯಿಂದ ಕಡ್ಡಾಯವಾಗಿ ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ.

ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಪೋಲೀಸ್ ಹಾಗೂ ಅರೆಸೇನಾ ಪಡೆಯ ಭದ್ತತೆಯನ್ನು ಒದಗಿಸಲಾಗಿದ್ದು, ಮತದಾರರು ಶಿಸ್ತು ಮತ್ತು ಶಾಂತಿಪಾಲನೆಯೊಂದಿಗೆ ಕಡ್ಡಾಯವಾಗಿ ಮತದಾನ ಮಾಡುವುದರೊಂದಿಗೆ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕೆಂದು ತಿಳಿಸಿದರು.

ಇದೇ ವೇಳೆ ಅರೆಸೇನಾ ಪಡೆಯ ಮುಖ್ಯಸ್ಥ ಹರೀಶ್ ಪಾ¯ಣ್ಣ, ಸಿ.ಪಿ.ಐ ಯಶವಂತ ಬಿಸ್ನಳ್ಳಿ, ಸುಂದ್ರೇಶ್ ಹೊಳೆಣ್ಣನವರ್, ಪಿ.ಎಸ್.ಐಗಳಾದ ಕೆ.ರಂಗಯ್ಯ, ಹುಸೇನಪ್ಪನಾಯಕ, ವೆಂಕಟೇಶನಾಯಕ, ಅರುಣ್, ಇನ್ನಿತರ ಸಿಬ್ಬಂದಿಗಳು ಇದ್ದರು

ವರದಿ.ಸಿ.ಖಾಜಾಮೋಹಿದ್ದೀನ್. ಸಿರುಗುಪ್ಪ

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ