ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಗಸ್ತು ವೇಳೆ ಸಿಕ್ಕ ವಾಹನಗಳನ್ನು ಹಿಂಪಡೆಯಲು ಮಾಲಿಕರಿಗೆ ಸೂಚನೆ: ಹಿಂಪಡೆಯದಿದ್ದಲ್ಲಿ ವಾಹನಗಳ ಹರಾಜು

Advertisement
ರಾಯಚೂರು,ಏ.01,(ಕ.ವಾ):- ನಗರದ ಸದರ ಬಜಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಮತ್ತು ಹಗಲು ಗಸ್ತು ವೇಳೆಯಲ್ಲಿ ಸಿಬ್ಬಂದಿಯರು ಗಸ್ತು ಮಾಡುವ ಕಾಲಕ್ಕೆ ಮಾಲೀಕರಿಲ್ಲದೇ ರಸ್ತೆಯ ಮೇಲೆ ಬಿಟ್ಟು ಹೋಗಿದ್ದ ಒಟ್ಟು 38 ದ್ವಿಚಕ್ರ ಹಾಗೂ ಇತರೆ ವಾಹನಗಳನ್ನು ಮಾಲಿಕರು ಹಿಂಪಡೆದುಕೊಳ್ಳಬಹುದು ಇಲ್ಲವಾದಲ್ಲಿ ವಾಹನಗಳನ್ನು ಹರಾಜು ಪ್ರಕ್ರಿಯೆ ಮೂಲಕ ವಿಲೇವಾರಿ ಮಾಡಲಾಗುವುದು ಎಂದು ಸದರ ಬಜಾರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕ್ರಿಮಿನಲ್ ಮಿಸಿಲೇನ್ಸ್ ನಂ 26/2019, ಕಲಂ 75 ಕೆ.ಪಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ಠಾಣಾ ಪಿ ಎಫ್ ನಂ 60/2019 2019ರ ಅ.22 ಮತ್ತು ಪಿಎಫ್ ನಂ 11/2013 2013ರ ಫೆ.23 ರಂದು ಮಾನ್ಯ ನ್ಯಾಯಾಲಯಕ್ಕೆ ನಿವೇದಿಸಿಕೊಂಡಿದ್ದು ಇರುತ್ತದೆ. ಈ ಕೆಳಕಂಡ ಜಪ್ತಿ ಮಾಡಿಕೊಂಡು ಮೋಟಾರ್ ಸೈಕಲ್/ಕಾರು ವಿಲೇವಾರಿಗಾಗಿ ಸಿಬ್ಬಂದಿಯವರನ್ನು ಬೇರೆ ಬೇರೆ ಊರುಗಳಿಗೆ ನೇಮಿಸಿ ಕಳುಹಿಸಿಕೊಟ್ಟಿದ್ದು ವಾಹನನಗಳ ಮಾಲೀಕರನ್ನು ಭೇಟಿ ಮಾಡಿ ಮತ್ತು ಅಂಚೆ ಮುಖಾಂತರವಾಗಿ ವಾಹನಗಳನ್ನು ತೆಗೆದುಕೊಂಡು ಹೋಗುವಂತೆ ಪತ್ರ ವ್ಯವಹಾರ ಮಾಡಿದ್ದರು ಸಹ ಅವರು ವಾಹನಗಳನ್ನು ತೆಗೆದುಕೊಂಡು ಹೋಗಿರುವುದಿಲ್ಲ. ಈ ವಾಹನಗಳನ್ನು ಸಾರ್ವಜನಿಕ ಹರಾಜು ಮೂಲಕ ಸ್ವತ್ತು ವಿಲೇವಾರಿ ಮಾಡಲು ಮಾನ್ಯ ನ್ಯಾಯಾಲಯದ ಆದೇಶ ಸಂಖ್ಯೆ ಕ್ರಿ.ಮಿ ನಂ 1111/2021 ರ ದಿ: 24/03/2023 ರ ಪ್ರಕಾರ ಮಾಲೀಕರಿಗೆ ತಮ್ಮ ಸ್ವತ್ತುಗಳನ್ನು ತೆಗೆದುಕೊಂಡು ಹೋಗಬಹುದೆಂದು ಇಲ್ಲವಾದಲ್ಲಿ ವಾಹನಗಳನ್ನು ಸಾರ್ವಜನಿಕ ಹರಾಜಿನ ಮೂಲಕ ವಿಲೇವಾರಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸದರ ಬಜಾರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದೆಂದು ಸದರ ಬಜಾರ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್