ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಗೊರೇಬಾಳ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಮನವಿ

Advertisement
ಸಿಂಧನೂರು ಜೂಲೈ 13.ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಂಧನೂರು ಘಟಕದ ವತಿಯಿಂದ ತಾಲೂಕಾದ್ಯಂತ ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ಸೌಲಭ್ಯ ಇಲ್ಲ, ಅದರಲ್ಲೂ ದಿನ ನಿತ್ಯ ಬಸ್ ಗಳ ಸಂಪರ್ಕ ಸಮಸ್ಯೆಯಿಂದ ವಿದ್ಯಾರ್ಥಿಗಳಿಗೆ ,ಪ್ರಯಾಣಿಕರಿಗೆ,ಜನ ಸಾಮಾನ್ಯರಿಗೆ ಬಹಳಷ್ಟು ಅನಾನುಕೂಲ ಆಗುತ್ತಿದ್ದು ಅದರಲ್ಲೂ ಗೋರೆಬಾಳ ಗ್ರಾಮದ ವಿದ್ಯಾರ್ಥಿಗಳಿಗೆ ದಿನನಿತ್ಯ ಬಸ್ ಗಾಗಿ ಕಾಯುವಂತ , ಶಾಲಾ ಕಾಲೇಜುಗಳ ಎರಡು ಮೂರು ತರಗತಿಗಳು ತಪ್ಪಿಸುವ ಪರಿಸ್ಥಿಸಿ ನಿರ್ಮಾಣ ಆಗುತ್ತಿದ್ದು ಈಗಾಗಲೇ ಸಂಭಂದಪಟ್ಟ ಸಾರಿಗೆ ಸಂಸ್ಥೆಯ ಇಲಾಖೆಗೆ ಮಾಹಿತಿ ನೀಡಿದರು ಯಾವುದೇ ಪ್ರಯೋಜನವಾಗಿಲ್ಲ.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪರವಾಗಿ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ಜಿಲ್ಲಾಧ್ಯಕ್ಷ ನಿರುಪಾದಿ ಕೆ ಗೊಮರ್ಸಿ ರಾಜ್ಯ ಸರ್ಕಾರದ ಸ್ತ್ರೀಶಕ್ತಿ ಯೋಜನೆಯಿಂದ ಬೆಳಗಿನ ಸಮಯದಲ್ಲಿ ಸರ್ಕಾರಿ ಬಸ್ ಗಳು ತುಂಬಿ ತುಳುಕುತಿದ್ದೂ ವಿದ್ಯಾರ್ಥಿಗಳು ತಮ್ಮ ಕಲಿಕೆಗೆ ನಗರ ಪ್ರದೇಶಕ್ಕೆ ಹೋಗಿ ತಮ್ಮ ಶೈಕ್ಷಣಿಕ ಮಟ್ಟವನ್ನು ಹೆಚ್ಚಿಸಿಕೊಳ್ಳುವ ಅವಕಾಶದಿಂದ ವಂಚಿತಾರಾಗುತ್ತಾರೆ .ರಾಜ್ಯ ಸರ್ಕಾರ ಹಾಗೂ ಸಾರಿಗೆ ಇಲಾಖೆ ಸೇರಿ ರಾಜ್ಯದ ಬೋಕ್ಕಸವನ್ನು ಯಾವುದು ಯಾವುದೋ ಕೆಲಸಕ್ಕೆ ಉಪಯೋಗಿಸುತ್ತಿದ್ದು ಅದರಿಂದ ಯಶಸ್ಸು ಕಾಣದೆ ಇದ್ದು ರಾಜ್ಯ ಸರ್ಕಾರ ಹಾಗೂ ಇಲಾಖೆಗೆ ವಿದ್ಯಾರ್ಥಿಗಳ ಮೇಲೆ ಪ್ರೀತಿ ,ಕಾಳಜಿ ವಿಶ್ವಾಸ ಇದ್ದರೆ ಮಕ್ಕಳ ಉನ್ನತ ಶೈಕ್ಷಣಿಕ ಭವಿಷ್ಯಕ್ಕಾಗಿ ಸಾರಿಗೆ ಇಲಾಖೆಯಿಂದ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿದರು . ನಮ್ಮ ಮನವಿಗೆ ಆದಷ್ಟು ಬೇಗ ಪರಿಹಾರ ನೀಡದಿದ್ದರೆ ವಿದ್ಯಾರ್ಥಿಗಳು,ಮತ್ತು ಅವರ ಪಾಲಕರ ಜೊತೆ ಸೇರಿ ಸಿಂಧನೂರು ಟು ಗಂಗಾವತಿ ಮುಖ್ಯ ರಸ್ತೆ ತಡೆಗಟ್ಟವುದು ಅನಿವಾರ್ಯ ಆಗುತ್ತದೆ ಎಂದು ತಿಳಿಸಿದರು

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ಶರಣಬಸವ,ಅಯ್ಯಪ್ಪ,ಕನಕ್ಕಪ್ಪ,ವೀರೇಶ್ ,ಅಭಿಷೇಕ್ ,ರಾಜೇಶ್ವರಿ,ಕಲ್ಪನಾ,ಲಕ್ಷಿ ,ಜ್ಯೋತಿ ಇದ್ದರು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್