ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಗ್ರಂಥಾಲಯಗಳು ಬದುಕನ್ನ ಸುಂದರವಾಗಿ ರೂಪಿಸುತ್ತವೆ;ಡಾ.ಹನುಮಂತಪ್ಪ ಎಂ.

Advertisement
ಅಗಸ್ಟ್ 12.  ಸಿಂಧನೂರಿನ ಶ್ರೀ ಆದಿತ್ಯ ಪದವಿ ಪೂರ್ವ ಕಾಲೇಜಿನಲ್ಲಿ ಕದಂಬ KAS ಅಕಾಡಮಿ ಹಮ್ಮಿಕೊಂಡ ಸ್ಪರ್ಧಾತ್ಮಕ ಪರೀಕ್ಷೆಗಳ ಬಹುಮಾನ ವಿತರಣೆ ಹಾಗೂ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಹನುಮಂತಪ್ಪ.ಎಂ ಸಹಾಯಕ ಪ್ರಾಧ್ಯಾಪಕರು ಸ್ಪರ್ಧಾರ್ಥಿಗಳು ತಮ್ಮ ಬದುಕಿನ ಬವಣೆಯನ್ನು ತೀರಿಸಲು ಓದುವುದು ಅಗತ್ಯವಿದೆ,ಯುವ ಜನರು ಗ್ರಂಥಾಲಯಗಳಿಗೆ ಪ್ರವೇಶ ಮಾಡಬೇಕು ಹೆಚ್ಚಿನ ಜ್ಞಾನ ಸಂಪಾದಿಸಿ ಉದ್ಯೋಗ ಪಡೆದುಕೊಂಡು ತಂದೆ ತಾಯಿಗಳ ಗೌರವ ಹೆಚ್ಚಿಸಬೇಕು ಹಾಗೂ ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಬೇಕು.ಸ್ಪರ್ಧಾರ್ಥಿಗಳು ಯಾರಿಗಾದರೂ ಮೋಸ ಮಾಡಿದರೂ ಪರವಾಗಿಲ್ಲ ಆದರೆ ತಂದೆ ತಾಯಿಗಳಿಗೆ ಮೋಸ ಮಾಡಬಾರದು ಎಂದು ತಮ್ಮ ಉದ್ಘಾಟನಾ ನುಡಿಯಲ್ಲಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಸಾಧಕ ಶ್ರೀ ಪ್ರಶಸ್ತಿ ವಿಜೇತರು ಮತ್ತು ವಿಶೇಷ ಸನ್ಮಾನಿತರಾದ ಡಾ. ಹುಸೇನಪ್ಪ ಅಮರಾಪುರ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಓದಿನ ಹವ್ಯಾಸ ಹೆಚ್ಚಿಸಿ ಕೊಳ್ಳಬೇಕು,ಸತತವಾದ ಪ್ರಯತ್ನದ ಫಲದಿಂದ ಯಶಸ್ಸು ಪಡೆಯಲು ಸಾಧ್ಯವಿದೆ, ಸಾಧನೆ ಎನ್ನುವುದು ಸೋಮಾರಿಯ ಸ್ವತ್ತಲ್ಲ ಅದು ಸಾಧಕನ ಸ್ವತ್ತ.ನಮ್ಮ ಘರ್ಜನೆ ಪ್ರತಿಧ್ವನಿಸಲು ಶಿಕ್ಷಣದ ಹಾಲು ಕುಡಿಯುತ್ತಿರಬೇಕು ಆಗ ಮಾತ್ರ ಸಮಾಜದಲ್ಲಿ ನಮ್ಮ ಸ್ಥಾನವನ್ನು ಉನ್ನತಮಟ್ಟಕ್ಕೆ ಕೊಂಡೊಯ್ಯಲು ಸಾಧ್ಯವೆಂದು ಸ್ಪರ್ಧಾರ್ಥಿಗಳಿಗೆ ತಿಳಿಸಿದರು,ಕಾರ್ಯಕ್ರಮದಲ್ಲಿ ಸ್ಪರ್ಧಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕದಂಬ KAS ಅಕಾಡೆಮಿ ಪ್ರಧಾನ ನಿರ್ದೇಶಕರಾದ ಶಂಕರ್ ವಾಲಿಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ರಮೇಶ ಹಲಗಿ ಪ್ರಾಸ್ತಾವಿಕ ನುಡಿಗಳಾಡಿದರು ತಾಯಪ್ಪ ತಿಡಿಗೋಳ ನಿರೂಪಿಸಿದರು ಶರಣಕುಮಾರ ಹಲಗಿ ,ಮಾರುತಿ ಸೋಮಲಾಪುರ, ಶಿವರಾಜ ಜಿ. ಯು.ಎಸ್. ನಾಯಕ್ ಗೋನವಾರ ,ಜಡಿಸ್ಪಾಮಿ ಗುಡುದೂರು ಉಪಸ್ಥಿತರಿದ್ದರು, ಹಾಗೂ ನೂರಾರು ಸ್ಪರ್ಧಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್