ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಚುನಾವಣೆ, ಮತದಾನ ಒಂದೇ ನಾಣ್ಯದ ಎರಡು ಮುಖಗಳು: ಧನರಾಜ್

Advertisement
ರಾಯಚೂರು,ಏ.13(ಕವಾ):- ಭಾರತ ದೇಶವು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಈ ದೇಶದಲ್ಲಿ ಪ್ರತಿಯೊಬ್ಬರಿಗೂ ಮತದಾನ ಮಾಡುವ ವಿಶೇಷವಾದ ಹಕ್ಕನ್ನು ನೀಡಲಾಗಿದೆ. ದೇಶವನ್ನು ಉತ್ತಮವಾಗಿ ಹಾಗೂ ಸಧೃಡವಾಗಿ ನಿರ್ಮಾಣ ಮಾಡಲು ಪ್ರತಿಯೊಬ್ಬರು ಮತ ಚಲಾಯಿಸುವುದು ಅಗತ್ಯವೆಂದು ಐಇಸಿ ಸಂಯೋಜಕ ಧನರಾಜ್ ಅವರು ನರೇಗಾ ಕೂಲಿಕಾರರಿಗೆ ತಿಳಿಸಿದರು.

ಅವರು ಏ.13ರಿ(ಗುರುವಾರ) ತಾಲೂಕಿನ ಮಟಮಾರಿ ಗ್ರಾಮ ಪಂಚಾಯತಿಯಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸ್ವಿಪ್ ಚಟುವಟಿಕೆಯ ಅಂಗವಾಗಿ, ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೆರೆ ಕೆಲಸ ನಿರ್ವಹಿಸುವ ಕೂಲಿಕಾರರಿಗೆ, ಮತದಾನದ ಮಹತ್ವವನ್ನು ಅರಿಯಲು ಸ್ವಿಪ್ ಚಟುವಟಿಕೆಯನ್ನು ಉದ್ದೇಶಿಸಿ ಮಾತನಾಡಿದರು.



18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಭಾರತದ ಪ್ರಜೆಗೆ ಮತ ಚಲಾಯಿಸುವ ನೀಡಲಾಗಿದ್ದು, ಸಾಮಾನ್ಯವಾಗಿ ಚುನಾವಣೆ ಗುಪ್ತ ಮತದಾನ ಪದ್ಧತಿ ಮೂಲಕ ನಡೆಯುವಂತಹದ್ದು, ಜನ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ರೂಪಿಸಿರುವ ವ್ಯವಸ್ಥೆ ಇದಾಗಿದೆ. ಇಂತಹ ಅತ್ಯುತಮ ವ್ಯವಸ್ಥೆಯಲ್ಲಿ ಭಾರತಿಯ ಪ್ರಜೆಗಳು ಪ್ರಭುದ್ಧತೆಯಿಂದ ಅಮೂಲ್ಯವಾದ ಮತವನ್ನು ಮೇ.10 ರಂದು ತಪ್ಪದೇ ಮತ ಚಲಾಯಿಸಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಾರದಾ ಕಾರ್ಯದರ್ಶಿ, ಬಿ.ಎಪ್.ಟಿ, ಗ್ರಾ.ಪಂ ಸಿಬ್ಬಂದಿ ಮತ್ತು ಕೂಲಿಕಾರರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್