ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಡಾ.ಅಂಬೇಡ್ಕರ್ ಓದುವ ಅಭಿರುಚಿ ನಮಗೆಲ್ಲ ಮಾದರಿ ಶಂಕರ ದೇವರು ಹಿರೇಮಠ

Advertisement
ಮೇ 31. ಬಿಸಿಲು ನಾಡು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ದುಗ್ಗಮ್ಮನಗುಂಡ ಗ್ರಾಮದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಗ್ರಂಥಾಲಯವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯ ಗುರುಗಳಾದ ಶಂಕರ ದೇವರು ಹಿರೇಮಠ ಅವರು ಸಂವಿಧಾನ ಶಿಲ್ಪಿಗಳಾದ ಅಂಬೇಡ್ಕರ್ ಅವರು ಜ್ಞಾನದ ಕಣಜಗಳಾಗಿದ್ದಾರೆ. ಅವರು ಪಡೆದ ಪದವಿಗಳು ಹಾಗೂ ಅವರು ಓದಿನಲ್ಲಿ ಹೊಂದಿದ್ದ ಅಭಿರುಚಿ ನಮಗೆಲ್ಲ ಮಾದರಿಯಾಗಬೇಕು. ಶಿಕ್ಷಣವು ಅಮೂಲ್ಯವಾದದ್ದು ನೀವೆಲ್ಲಾ ತಪ್ಪದೇ ಶಾಲೆಗೆ ಬಂದು ಶಿಕ್ಷಣ ಪಡೆಯಬೇಕು ಎಂದು ಹೇಳಿದರು.

ಪ್ರಸ್ತಾವಿಕವಾಗಿ ಮಾತನಾಡಿದ ಸಹಶಿಕ್ಷಕರಾದ ವಿರೂಪಾಕ್ಷಪ್ಪ ಪಕೀರಪೂರ ಅವರು ಗ್ರಂಥಾಲಯಗಳು ವಿದ್ಯಾರ್ಥಿಗಳ ಜ್ಞಾನವನ್ನು ವಿಕಾಸಿಸುವಂತೆ ಮಾಡುತ್ತವೆ. ಗ್ರಂಥಾಲಯಗಳು ಮಕ್ಕಳಲ್ಲಿ ಜ್ಞಾನದ ಮಟ್ಟವನ್ನು ಹೆಚ್ಚಿಸಲು ಸಹಕಾರಿ ಅದಕ್ಕಾಗಿ ಗ್ರಂಥಾಲಯದ ಪುಸ್ತಕಗಳನ್ನು ಓದುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಶಾಲಾ ಪ್ರಾರಂಭೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಗುಡದಪ್ಪ ಅವರು ಶಾಲೆಯಲ್ಲಿ ಮಕ್ಕಳ ಗ್ರಂಥಾಲಯವನ್ನು ಪ್ರಾರಂಭ ಮಾಡಿದ್ದು ತುಂಬಾ ಸಂತೋಷವಾಗಿದೆ. ನಮ್ಮ ಗ್ರಾಮದ ವಿದ್ಯಾರ್ಥಿಗಳು ಗ್ರಂಥಾಲಯದ ಸದುಪಯೋಗವನ್ನು ಪಡಿಸಿಕೊಳ್ಳಬೇಕು ಎಂದು ಹೇಳಿದರು.



ಇದೇ ಸಂದರ್ಭದಲ್ಲಿ ಶಾಲೆಗೆ ದಾನಿಗಳು ನೀಡಿದ ಮೂರು ಟೇಬಲ್, ಎರಡು ಬೆಂಚ್, ಗ್ರಂಥಾಲಯ ಟೇಬಲ್, ಎರಡು ಕಪಾಟು ಗಳು ಸೇರಿದಂತೆ ಒಟ್ಟು ೨೫೦೦೦ ರೂಪಾಯಿ ಮೌಲ್ಯದ ಪೀಠೋಪಕರಣಗಳನ್ನು ಶಾಲೆಗೆ ಸ್ವೀಕಾರ ಮಾಡಿದರು. ಇದೇ ಸಂದರ್ಭದಲ್ಲಿ ಮಾಜಿ sdmc ಅಧ್ಯಕ್ಷರಾದ ಲಕ್ಷ್ಮಣ ಅವರು ಮಾತನಾಡಿ ದಾನಿಗಳು ನೀಡುವ ಸಹಕಾರದಿಂದ ಮಾತ್ರ ಸರಕಾರಿ ಶಾಲೆಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿಯರಾದ ಭಾಗ್ಯಮ್ಮ ಹಾಗೂ ಅಡುಗೆ ಸಿಬ್ಬಂದಿಗಳಾದ ರೇಣುಕಾ ಹಾಗೂ ನರಸಮ್ಮ, ಗ್ರಾಮಸ್ಥರು,ಪಾಲಕರು ಅವರು ಉಪಸ್ಥಿತರಿದ್ದರು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್