ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಡಿ.22 ರಂದು ಮೆದಿಕಿನಾಳ ಚೆನ್ನಮಲ್ಲ ಶಿವಯೋಗಿಗಳವರ 69ನೇ ಜಾತ್ರಾ ಮಹೋತ್ಸವ

Advertisement
ವರದಿ : ಎಚ್.ಕೆ.ಬಡಿಗೇರ್

ಬಡವರ ಬಾರುಕೋಲು ಸುದ್ದಿ
ಮಸ್ಕಿ
: ತಾಲೂಕಿನ ಮೆದಿಕಿನಾಳ ಗ್ರಾಮದಲ್ಲಿ ಡಿಸೆಂಬರ್ 22 ರಂದು ಲಿಂ.ಚೆನ್ನಮಲ್ಲ ಶಿವಯೋಗಿಗಳವರ 69ನೇ ಜಾತ್ರಾ ಮಹೋತ್ಸವ ಜರುಗಲಿದೆ ಎಂದು ಶ್ರೀ ಶ್ರೀ ಶ್ರೀ ಚನ್ನಮಲ್ಲ ಶಿವಯೋಗಿಗಳ ಮಠ ಮದಿಕಿನಾಳ ಸಮಿತಿಯ ರಾಜಣ್ಣ ಪರಡ್ಡಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಡಿಸೆಂಬರ್ 21 ರಂದು ಹುಡಿ ತುಂಬುವ ಜರುಗುವುದು.
ಈ ಕಾರ್ಯಕ್ರಮದಲ್ಲಿ ಸಂತೆಕೆಲ್ಲೂರಿನ ಗುರುಬಸವ ಸ್ವಾಮೀಜಿ,ಮಸ್ಕಿಯ ವರರುದ್ರಮುನಿ ಸ್ವಾಮೀಜಿ ಸೇರಿದಂತೆ 15 ರಿಂದ 20 ಮಠಗಳ ಮಠಾಧೀಶರು ಪಾಲ್ಗೊಳ್ಳುವ ಸಂಭವ ಇದೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಮೆದಿಕಿನಾಳ ಗ್ರಾಮಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಜಾತ್ರಾ ಮಹೋತ್ಸವದ ಯಶಸ್ಸಿಗೆ ಗ್ರಾಮಸ್ಥರು ಸಿದ್ಧತೆ ನಡೆಸಿದ್ದಾರೆ.

ಈಗಾಗಲೇ ಡಿ.12 ರಿಂದ 21 ರ ವರೆಗೆ ಪ್ರತಿನಿತ್ಯ ಸಂಜೆ ಪ್ರವಚನದ ಮಂಗಲ ಕಾರ್ಯಕ್ರಮ ನಡೆಯುತ್ತಿದ್ದು.
ಡಿ.22 ರಂದು ಬೆಳಿಗ್ಗೆ ಚೆನ್ನ ಮಲ್ಲ
ಶಿವಯೋಗಿಗಳ ಗದ್ದುಗೆಗೆ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆಯುವವು ಗಂಗಾಸ್ಥಳದಿಂದ ಕುಂಭ ಹಾಗೂ ಚೆನ್ನಮಲ್ಲ ಶಿವಯೋಗಿಗಳ ಭಾವಚಿತ್ರದ ಮೆರವಣಿಗೆ ನಡೆಯಲಿದೆ.ಬೆಳಿಗ್ಗೆ
501 ಮಹಿಳೆಯರಿಗೆ ಹುಡಿ ತುಂಬುವ ಕಾರ್ಯಕ್ರಮ ನಡೆಯಲಿದೆ.ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸುವವು. ಸಂಜೆ ರಥೋತ್ಸವ ನಡೆಯಲಿದೆ ವಿವಿಧ ಮಠಾಧೀಶರು,ಸಾಹಿತಿಗಳು,ವಿಧಾನ ಪರಿಷತ್ತಿನ ಸದಸ್ಯರು,ಸಚಿವರು,ಹಾಲಿ ಶಾಸಕರು,ಮಾಜಿ ಶಾಸಕರು ನಡೆಯುವ ಕಾರ್ಯಕ್ರಮದಲ್ಲಿ
ಪಾಲ್ಗೊಳ್ಳಲಿದ್ದಾರೆ ಆದ್ದರಿಂದ ಸಕಲ ಸದ್ಭಕ್ತರು ಜಿಲ್ಲೆ ಜಿಲ್ಲೆಯಿಂದ,ತಾಲೂಕ ತಾಲೂಕಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಯಶಸ್ವಿ ಗೊಳಿಸಬೇಕು ಎಂದು ರಾಜಣ್ಣ ಪರಡ್ಡಿ ಹಾಗೂ ಸಮಿತಿಯ ಸದಸ್ಯರುಗಳು ತಿಳಿಸಿದರು.ಇದೆ ವೇಳೆಯಲ್ಲಿ ಜಾತ್ರಾ ಮಹೋತ್ಸವದ ಪೋಸ್ಟರ್ ಬಿಡುಗಡೆ ಮಾಡಿದರು.
ಇದೇ ಸಂದರ್ಭದಲ್ಲಿ ಬಸವರಾಜ ಗುಂಡಳ್ಳಿ,ಮಲಕನಗೌಡ,ಪಂಪಣ್ಣ ಗೌಡೂರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್