ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪದಾಧಿಕಾರಿಗಳ ತಾಲೂಕು ಮಟ್ಟದ ಸಮಾವೇಶ

Advertisement
ಬಡವರ ಬಾರುಕೋಲು ಸುದ್ದಿ
ಮಸ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಮಸ್ಕಿ ತಾಲ್ಲೂಕು ಇವರ ಆಶ್ರಯದಲ್ಲಿ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮವು ತಾಲ್ಲೂಕಿನ ಭ್ರಮರಂಭಾ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ನಡೆಯಿತು.

ಈ ತಾಲ್ಲೂಕು ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಎಮ್ ಅಮರೇಶ ರವರು ಉದ್ಘಾಟಿಸಿ ಶುಭ ಹಾರೈಸಿ ನಂತರ ಮಾತನಾಡಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಹಿಳೆಯರನ್ನು ಸ್ವಾವಲಂಭಿಯನ್ನಾಗಿಸಲು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.ನಾಡಿನಾದ್ಯಂತ ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಿರುವುದನ್ನು ಕಂಡು ಸಹಿಸದ ಕೆಲವು ಪಟ್ಟಭದ್ರರು. ಯೂಟೂಬ್‍ನಲ್ಲಿ ಧರ್ಮಾಧಿಕಾರಿ ಡಿ.ವೀರೇಂದ್ರಹೆಗಡೆರವರ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಹೋರಾಟದ ಮೂಲಕ ಅಂತಹವರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ಅಂಗವಿಕಲರಿಗೆ ಮಾಶಾಸನ, ವಿದ್ಯಾರ್ಥಿವೇತನ, ನಿರಾಶ್ರಿತರಿಗೆ ವಾತ್ಸಲ್ಯ ಮನೆ ಕಟ್ಟಿಸಿಕೊಡುವುದು, ವಯೋವೃದ್ದರಿಗೆ ವಾಟರ್‍ಬೆಡ್ ಇನ್ನಿತರೆ ಅನೇಕ ಸವಲತ್ತುಗಳನ್ನು ನೀಡಲಾಗುತ್ತಿದೆ.ಸ್ವಸಹಾಯ ಸಂಘಗಳ ಮಹಿಳೆಯರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸದುಪಯೋಗಪಡಿಸಿಕೊಂಡು ಜೀವನ ಮಟ್ಟ ಸುಧಾರಿಸಿಕೊಂಡಿದ್ದಾರೆಂದು ಹೇಳಿದರು.


ನಂತರ ಮಾನ್ಯ ಜಿಲ್ಲಾ ನಿರ್ದೇಶಕರಾದ ಮೋಹನ್ ನಾಯಕ್ ರವರು ಮಾತನಾಡಿ ಸ್ವ ಸಹಾಯ ಸಂಘಗಳ ಬಲವರ್ಧನೆ ಶಿಸ್ತು ಬದ್ಧ ವ್ಯವಹಾರ ಬಡ್ಡಿ ದರ,PRK ‌ಬಗ್ಗೆ, ಮಾಸಿಕ ವರದಿ ಮರುಪಾವತಿ ಚೀಟಿ ಬಗ್ಗೆ,ಲಾಭಾಂಶ ಹಂಚಿಕೆ,ವಾರದ ಕಂತಿನ ಪ್ರಯೋಜನ,ಸಮುದಾಯ ಕಾರ್ಯಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.https://youtu.be/1hmwmlsk2XA?si=8pj5zT4IS_FggggT

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಅಮರೇಶ ಮತ್ತು ತಾಲೂಕ ಯೋಜನಾಧಿಕಾರಿ ಶಾಲಿನಿ ಹಾಗೂ ಐ.ಡಿ.ಬಿ.ಐ ಸಿಬ್ಬಂದಿಗಳಾದ ಬಶೀರ್,ಸುದೀಪ್ ಹಾಗೂ ತಾಲೂಕಿನ 8 ವಲಯದ 71 ಒಕ್ಕೂಟಗಳು 355 ಮಂದಿ ಪದಾಧಿಕಾರಿಗಳು ಮತ್ತು ಎಲ್ಲಾ ಮೇಲ್ವಿಚಾರಕ ಶ್ರೇಣಿಯ ಕಾರ್ಯಕರ್ತರು,ಸೇವಾಪ್ರತಿನಿಧಿಗಳು,ಸಿ.ಎಸ್.ಸಿ ಸೇವಾದಾರರು ಉಪಸ್ಥಿತರಿದ್ದರು.







ವರದಿ : ಎಚ್.ಕೆ.ಬಡಿಗೇರ್

Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್