ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನಗರಸಭೆ ಮತ್ತು ತಾಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಜಾಥಾ

Advertisement
ಸಿರುಗುಪ್ಪ : ನಗರದ ತಾಲೂಕು ಕ್ರೀಡಾಂಗಣದಿಂದ ಮಹಾತ್ಮ ಗಾಂಧೀಜಿ ವೃತ್ತದವರೆಗೂ ನಗರಸಭೆ ಮತ್ತು ತಾಲೂಕು ಸ್ವೀಪ್ ಸಮಿತಿಯಿಂದ ನಡೆದ ಮತದಾನ ಜಾಗೃತಿ ಜಾಥಾಕ್ಕೆ ಚುನಾವಣಾಧಿಕಾರಿ ಆರ್.ಸತೀಶ್ ಅವರು ಹಸಿರು ನಿಶಾನೆ ತೋರಿದರು.

ನಂತರ ಮಾತನಾಡಿದ ಅವರು ಸದೃಡ ದೇಶದ ಪ್ರಜಾಪ್ರಭುತ್ವವನ್ನು ನಡೆಸುವ ಅಧಿಕಾರ ಪ್ರಜೆಗಳಿದ್ದು, ಪ್ರಜ್ಞಾವಂತ ನಾಗರೀಕರು, ವಿದ್ಯಾರ್ಥಿಗಳು ಪ್ರತಿಯೊಬ್ಬರಲ್ಲಿ ಮತದಾನದ ಮಹತ್ವವನ್ನು ಎಲ್ಲಾ ಮತದಾರ ಭಾಂದವರಿಗೆ ತಿಳಿಸುವುದರೊಂದಿಗೆ ಕಡ್ಡಾಯ ಮತದಾನಕ್ಕೆ ಸಹಕರಿಸಬೇಕು.

ಈ ಮತದಾನವು ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯವಾಗಿದೆ. ನಾವೆಲ್ಲಾ ಉತ್ಸುಕರಾಗಿ ದೇಶದ ಸಮಗ್ರ ಅಭಿವೃದ್ದಿಗಾಗಿ, ದೇಶದಲ್ಲಿ ಅಧಿಕಾರದ ಚುಕ್ಕಾಣಿ ಯಾರು ಹಿಡಿಯಬೇಕೆಂದು ನಿರ್ಧರಿಸುವ ಶಕ್ತಿ ಹಾಗೂ ಉತ್ತಮ ಪ್ರಜಾ ಪ್ರತಿನಿಧಿಗಳನ್ನು ಆಯ್ಕೆ ಮತದಾರರ ಕೈಯಲ್ಲಿದೆಂದು ತಿಳಿಸಿದರು.

ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮಡಗಿನ ಬಸಪ್ಪ ಮಾತನಾಡಿ ಮತದಾನವು ನಮ್ಮ ರಾಷ್ಟçದ ಮೂಲಭೂತ ಹಕ್ಕುಗಳಲ್ಲೊಂದಾಗಿದೆ. ಬಲಿಷ್ಟ ಭಾರತದ ನಿರ್ಮಾಣಕ್ಕಾಗಿ ನಮ್ಮ ಪೂರ್ವಜರು ಬ್ರಿಟಿಷರ ವಿರುದ್ದ ಹೋರಾಡಿ ತಮ್ಮ ತ್ಯಾಗ ಬಲಿದಾನದ ಮೂಲಕ ನಮಗೆ ಸ್ವಾತ್ಯಂತ್ರವನ್ನು ದೊರೆಕಿಸಿಕೊಟ್ಟಿದ್ದಾರೆ.

ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವುದರೊಂದಿಗೆ ಸ್ವಾತ್ಯಂತ್ರ ಹೋರಾಟಗಾರರ ಬಲಿಷ್ಟ ಭಾರತದ ಕನಸನ್ನು ನನಸು ಮಾಡೋಣವೆಂದು ತಿಳಿಸಿದರು.

ಇದೇ ವೇಳೆ ಪೌರಾಯುಕ್ತ ಜೀವನ್, ತಾಲೂಕು ಆರೋಗ್ಯಾಧಿಕಾರಿ ಡಾ.ಈರಣ್ಣ, ಸಿ.ಡಿ.ಪಿ.ಓ ಎ.ಕೆ.ಜಲಾಲಪ್ಪ, ತೋಟಗಾರಿಕೆ ಇಲಾಖೆಯ ಸಹಾಯಕ ಹಿರಿಯ ನಿರ್ದೇಶಕ ಮಹೇಶ್, ಜಿ.ಪಂ. ಕಾರ್ಯನಿರ್ವಾಹಕ ಅಭಿಯಂತರ ತಿಪ್ಪೆಸ್ವಾಮಿ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ತಮ್ಮನಗೌಡ ಪಾಟೀಲ್, ನಗರಸಭೆ ಬಡತನ ನಿರ್ಮೂಲನೆ ಕೋಶಾಧಿಕಾರಿ ಅಮರೇಶ, ಹಾಗೂ ಪೌರ ಕಾರ್ಮಿಕರು, ವಿಶೇಷ ಚೇತನರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಇಲಾಖೆಗಳ ಸಿಬ್ಬಂದಿಗಳು ಇದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್