ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನಮ್ಮ ಸಮಾಜದ ನೂತನ ಶಾಸಕ ಸಚಿವರುಗಳಿಗೆ ಸನ್ಮಾನ. ವೀರಭದ್ರಪ್ಪ ಅಂಗಡಿ

Advertisement
ಮಸ್ಕಿ ಜುಲೈ.01 ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕಳೆದ ಆರು ವರ್ಷಗಳಿಂದ ನಮ್ಮ ಜನಾಂಗದ ಸಂಘಟನೆ ಹಾಗೂ ಶ್ರೇಯೋಭಿವೃದ್ದಿಗಾಗಿ ಶ್ರಮಿಸುವುದರೊಂದಿಗೆ ನಮ್ಮ ಆಚಾರ,ವಿಚಾರಗಳ ಉಳಿಸುವ ಸಂಕಲ್ಪದೊಂದಿಗೆ ಹಲವು ಹೋರಾಟ ನಡೆಸುತ್ತಿದೆ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ತಾಲ್ಲೂಕು ಅಧ್ಯಕ್ಷರಾದ ವೀರಭದ್ರಪ್ಪ ಅಂಗಡಿ ಹೇಳಿದರು.

ಭಾರತೀಯ ಸಂಸ್ಕೃತಿ,ನಾಡು ನುಡಿ ರಕ್ಷಣೆಯೊಂದಿಗೆ ನಮ್ಮ ಜನಾಂಗದ ಉನ್ನತಿಯೂ ಮುಖ್ಯವಾಗಿದೆ. ರಾಜಕೀಯ ಕ್ಷೇತ್ರದಲ್ಲಿ ಈ ಹಿಂದಿನಿಂದಲೂ ನಮ್ಮ ಸಮುದಾಯದ ಕೊಡುಗೆ ಅಪಾರ ಹಾಗೂ ಗಮನಾರ್ಹವಾದದ್ದು.ಈ ಬಾರಿಯ ಚುನಾವಣೆಯಲ್ಲೂ ವಿವಿಧ ಪಕ್ಷಗಳಿಂದ ನಮ್ಮ ಸಮುದಾಯದ ಬಂದುಗಳು ಜಯಗಳಿಸಿ ಶಾಸಕರಾಗಿದ್ದಾರೆ,ಸಚಿವರಾಗಿದ್ದಾರೆ.ಪ್ರಸ್ತುತ ಇರುವ ಲೋಕಸಭೆಯಲ್ಲಿ ಹಲವು ಮಂದಿ ಸಂಸದರಾಗಿದ್ದಾರೆ,ಕೇಂದ್ರ ಸಚಿವರಾಗಿರುವ ಹೆಮ್ಮೆಯ ಸಂಗತಿ ಹಾಗೂ ಇವರುಗಳನ್ನು ಅಭಿನಂದಿಸುವ,ಗೌರವಿಸುವ ಜವಾಬ್ದಾರಿ ನಮ್ಮದು ಆ ಹಿನ್ನಲೆಯಲ್ಲಿ ದಿನಾಂಕ 5/7/23ರ ಬುಧವಾರ ಸಂಜೆ 5 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವೀರಶೈವ ಲಿಂಗಾಯತ ಶಾಸಕ,ಸಂಸದ,ಸಚಿವರ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.



ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರುಗಳಾದ ಪರಮ ಪೂಜ್ಯ ಶ್ರೀ. ಶ್ರೀ. ಶ್ರೀ.ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ವಹಿಸಿಕೊಂಡು ಆಶೀರ್ವದಿಸಲಿದ್ದಾರೆ.

ನಾಡಿನ ವಿವಿಧ ಮಠಗಳ ಪೂಜ್ಯರುಗಳು,ಗಣ್ಯರು ಭಾಗವಹಿಸುವ ಈ ಕಾರ್ಯಕ್ರಮಕ್ಕೆ ವೀರಶೈವ ಲಿಂಗಾಯತ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿ ಕೊಡಬೇಕಾಗಿ ಪ್ರಾರ್ಥನೆ. ಮಾನ್ಯ ಮಾದ್ಯಮ ಮಿತ್ರರುಗಳು ಈ ಕಾರ್ಯಕ್ರಮಕ್ಕೆ ಆಗಮಿಸಿ ಪ್ರಚಾರ ನೀಡುವುದರೊಂದಿಗೆ ಸಮುದಾಯದ ಬೆಳವಣಿಗೆಗೆ ಸಹಕರಿಸಬೇಕಾಗಿ ಕೇಳಿಕೊಳ್ಳುತ್ತೇವೆ ಎಂದು ವೀರಭದ್ರಪ್ಪ ಅಂಗಡಿ ತಾಲ್ಲೂಕು ಅಧ್ಯಕ್ಷರು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಮಸ್ಕಿ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್