ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನರೇಗಾ ಕೂಲಿಕಾರರಿಗೆ ಮತದಾನ ಜಾಗೃತಿ, ಉಚಿತ ಆರೋಗ್ಯ ಶಿಬಿರ

Advertisement
ರಾಯಚೂರು,ಏ.24(ಕ.ವಾ):- ಮೇ.10 ರಂದು ವಿಧಾನಸಭಾ ಚುನಾವಣೆಯಂದು ಮಹಾತ್ಮಗಾಂಧಿ ನರೇಗಾ ಕೂಲಿಕಾರರು ತಪ್ಪದೇ ಮತದಾನದ ಚಲಾಯಿಸಿ, “ಶತಪ್ರತಿಶತ ಮತದಾನ ರಾಯಚೂರು ಜಿಲ್ಲೆಯ ವಾಗ್ದಾನ”ವನ್ನು ಪೂರೈಸೋಣ ಎಂದು ಐಇಸಿ ಸಂಯೋಜಕ ಧನರಾಜ ಅವರು ಹೇಳಿದರು.

ಅವರು ಏ.24ರ(ಸೋಮವಾರ) ತಾಲೂಕಿನ ಯಾಪಲದಿನ್ನಿ ಗ್ರಾಮ ಪಂಚಾಯತಿಯ ಅಪ್ಪನದೊಡ್ಡಿ ಕೆರೆ ಕಾಮಗಾರಿ ಸ್ಥಳದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ, ಕೂಲಿಕಾರರಿಗೆ ಕೆಲಸ ಒದಗಿಸಲಾಗುತ್ತಿದೆ, ಅಲ್ಲದೇ ಅವರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ, ಕಾಮಗಾರಿ ಸ್ಥಳಗಳಲ್ಲಿ ಆರೋಗ್ಯ ಶಿಬಿರಗಳನ್ನು ಪ್ರತಿ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆಸಲಾಗುತ್ತದೆ. ಈ ವೇಳೆ ಶಿಬಿರಗಳಲ್ಲಿ ಬಿಪಿ, ಶುಗರ್, ಕ್ಷಯರೋಗ, ಹೆಚ್.ಐ.ವಿ, ಕಣ್ಣಿನ ತಪಾಸಣೆ ಸೇರಿದಂತೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಚಿಕ್ಸಿತೆಯನ್ನು ವೈದ್ಯರು ನೀಡಲಿದ್ದಾರೆ. ಇದರ ಸೌಲಭ್ಯವನ್ನು ಪಡೆದುಕೊಳ್ಳಲು ಮತ್ತು ಏಪ್ರಿಲ್ ತಿಂಗಳಿನಿಂದ ಯೋಜನೆಯಡಿ ಕೂಲಿಕಾರರಿಗೆ 309 ರಿಂದ 316/- ಹೆಚ್ಚಿಸಲಾಗಿದೆ. ಪುರುಷ ಮತ್ತು ಮಹಿಳೆಯರಿಗೆ ಸಮಾನ ಕೆಲಸಕ್ಕೆ ಸಮಾನ ಕೂಲಿ ಹಣವನ್ನು ನೀಡಲಾಗುವುದರ ಜೊತೆಗೆ ವೈಯಕ್ತಿಕ ಕಾಮಗಾರಿಗಳ ಸೌಲಭ್ಯಗಳನ್ನು ಪಡೆದುಕೊಳ್ಳಲು ಮನವಿ ಮಾಡಿದರು.

ಮತದಾನ ಜಾಗೃತಿ: ಸಾರ್ವಜನಿಕರು, ಕೂಲಿಕಾರರು ಎಲ್ಲರೂ ಕಡ್ಡಾಯವಾಗಿ ಮೇ-10 ರಂದು ಮತದಾನ ಮಾಡಬೇಕು. ಮತದಾನ ನಮ್ಮಗೆ ಸಂವಿದಾನ ನೀಡಿರುವ ಒಂದು ವರ. ಹಾಗಾಗಿ ಯಾರು ಮತದಾನದಿಂದ ವಂಚಿತರಾಗದೇ ಶತಪ್ರತಿಶತ ಮತದಾನ ರಾಯಚೂರು ಜಿಲ್ಲೆಯ ವಾಗ್ದಾನವನ್ನು ಪೂರೈಸೋಣ ಎಂದು ಹೇಳಿದರು. ನಂತರ ಎಲ್ಲಾ ಕೂಲಿಕಾರರಿಗೆ ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಗೋಪಾಲ, ಐಸಿಟಿಸಿ ತಂತ್ರಜ್ಞ ರಾಮಕೃಷ್ಣ, ಮಾರೆಪ್ಪ ಕೆಹೆಚಟಿಪಿ, ಭುವನೇಶ ಸೇಂಟ್ ಲುಕ್ಸ್, ನರಸಪ್ಪ ಮ್ಯಾನೇಜರ್ ದೃಷ್ಟಿ ಆಸ್ಪತ್ರೆ ರಾಯಚೂರು, ಗ್ರಾ.ಪಂ ಕರವಸೂಲಿಗಾರ ಮಲ್ಲಿಕಾರ್ಜುನ ಡಿಇಒ ಗೋವಿಂದ,ಜಿಕೆಎಮ್ ಶ್ರೀದೇವಿ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಮತ್ತು ನರೇಗಾ ಮೇಟ್ ಕೂಲಿಕಾರರು ಹಾಜರಿದ್ದರು.

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್