ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನಲಿನ್ ಅತುಲ್ ಕೊಪ್ಪಳ ಜಿಲ್ಲಾ ನೂತನ ಜಿಲ್ಲಾಧಿಕಾರಿ

ಕೊಪ್ಪಳ ಆಗಸ್ಟ್ .ಐಎಎಸ್ ಅಧಿಕಾರಿ ನಲಿನ್ ಅತುಲ್ ಅವರು ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಆಗಸ್ಟ್ 18ರಂದು ಅಧಿಕಾರ ಸ್ವೀಕರಿಸಿದರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನೆಯ ನಿರ್ದೇಶಕರಾಗಿದ್ದ ನಲಿನ್ ಅತುಲ್ ಅವರು ಅಲ್ಲಿಂದ ವರ್ಗಾವಣೆಯಾಗಿ ಇದೀಗ ಕೊಪ್ಪಳ ಜಿಲ್ಲೆಗೆ ಆಗಮಿಸಿದ್ದಾರೆ. ನಿರ್ಗಮಿತ ಕೊಪ್ಪಳ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು ನೂತನ ಜಿಲ್ಲಾಧಿಕಾರಿ ಅವರಿಗೆ ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

2014ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ನಲಿನ್ ಅತುಲ್ ಅವರು ಮೂಲತಃ ಬಿಹಾರ ರಾಜ್ಯದವರಾಗಿದ್ದಾರೆ. ಈ ಮೊದಲು ಕಲಬುರಗಿ ವಿಭಾಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾಗಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯಾಗಿ, ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿ ಸೇವೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಸೇರಿದಂತೆ ಮತ್ತಿತರರಿದ್ದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿಗೆ ಅಭಿನಯ ಚಕ್ರವರ್ತಿ ಸುದೀಪ್ ಆಗಮನಬಿಜೆಪಿ ಯುವ ಅಧ್ಯಕ್ಷ ಹತ್ಯೆ: ಆರು ಮಂದಿಗೆ ಗಲ್ಲು!MCH ಆಸ್ಪತ್ರೆಯಲ್ಲಿ ಡಾ. ಶೃತಿ ನಿರ್ಲಕ್ಷ್ಯ? ನವಜಾತ ಶಿಶು ಸಾವುಗಳ ನಡುವೆಯೇ ಗಂಭೀರ ಆರೋಪ ಸಿಂಧನೂರಿನ ಯುವಕ ಕಾಣೆಯಾದ ಪ್ರಕರಣ: ಪೋಷಕರ ಕಣ್ಣೀರಿನ ಮನವಿಸುಳ್ಳು ದೂರುಗಳಿಗೆ ಕಡಿವಾಣ: 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು“50 ವರ್ಷಗಳ ಬದುಕಿಗೆ 15 ದಿನಗಳ ಗಡುವು: ಗಾಂಧಿನಗರದ 80 ಬಡ ಕುಟುಂಬಗಳ ಮೇಲೆ ಜೆಸಿಬಿ ನೆರಳು!”ಪೊಲೀಸ್ ಪೇದೆ ಮದುವೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಮಾನವೀಯತೆಗೆ ಮಾದರಿ ಘಟನೆನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತ!ಬರುವ ದಿನಗಳು ಅಶಾಂತಿ ಸೂಚನೆ – ಅನ್ನ ನೀರಿಗೆ ಆಹಾಕಾರ: ಕೋಡಿಮಠ ಸ್ವಾಮೀಜಿ ಭವಿಷ್ಯಚಲಿಸುತ್ತಿದ್ದ ಬಸ್ ಏಕಾಏಕಿ ಜಮೀನಿಗೆ ನುಗ್ಗಿದ ಘಟನೆ – ನೂರಕ್ಕೂ ಹೆಚ್ಚು ಪ್ರಯಾಣಿಕರು ಪಾರು!ಕಲಮಂಗಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಭರ್ಜರಿ ಸಾಧನೆ“ಬಿಸಿಲಿನ ಅಬ್ಬರ: ಕರ್ನಾಟಕಲ್ಲಿ ಲಾಕ್‌ಡೌನ್ ಬರುತ್ತಾ..?”625ಕ್ಕೆ 625: ರಾಯಚೂರು ಸುಖದೇವ್ ಸಾಧನೆ