
ಈ ಬಾರಿ ಹೊಸ ಮತದಾರರು ಮತ್ತು ಅಂಗವಿಕಲ ಮತದಾರರಿಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 147 ವಲಯ ಮಟ್ಟದ ಅಧಿಕಾರಿಗಳು, 68 ಫ್ಲೈಯಿಂಗ್ ಸ್ಕ್ವಾಡ್ಗಳು, ಸ್ಥಾಯಿ ಕಣ್ಗಾವಲು ತಂಡದ ಅಧಿಕಾರಿಗಳು, 23 ದೃಶ್ಯ ಕಣ್ಗಾವಲು ಸಿಬ್ಬಂಧಿಗಳು, 14 ಲೆಕ್ಕ ವಿಭಾಗದ ಅಧಿಕಾರಿಗಳು ಸೇರಿದಂತೆ 14 ನೀತಿ ಸಂಹಿತೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು

ನೀತಿ ಸಂಹಿತೆ ಉಲ್ಲಂಘನೆ ಕಂಡುಬಂದಲ್ಲಿ ಸಾರ್ವಜನಿಕರು ದೂರನ್ನು ದಾಖಲಿಸಬಹುದಾಗಿದ್ದು, ಶುಲ್ಕ ರಹಿತ ಸಹಾಯವಾಣಿ ಸಂಖ್ಯೆ 1950 ಅಥವಾ 9743892080, 9964449192 ಸಂಖ್ಯೆಗೆ ಕರೆ ಮಾಡಿ ದೂರನ್ನು ಸಲ್ಲಿಸಬಹುದಾಗಿದೆ. ಅಥವಾ ಸಿ.ವಿಜಿನ್ ಆ್ಯಪ್ ಬಳಸಿ ದೂರನ್ನು ಸಲ್ಲಿಸಬಹುದಾಗಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಅಪರ ಜಿಲ್ಲಾಧಿಕಾರಿ ರವೀಂದ್ರ ಕರಲಿಂಗಣ್ಣವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.













