ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಪೋಕ್ಸೋ ಕಾಯ್ದೆಯಡಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ೧೫,೦೦೦/- ದಂಡ

Advertisement
ರಾಯಚೂರು ಜಿಲ್ಲೆ ಲಿಂಗಸೂಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನವರಿ ೨೦೨೧ ರಲ್ಲಿ ನಡೆದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ ೩ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕ್ಸೋ ನ್ಯಾಯಾಲಯ, ಪೀಠಾಸೀನ ಲಿಂಗಸೂಗೂರಿನ ನ್ಯಾಯಾಲಯವು ೨೦ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಶುಕ್ರವಾರ ಆದೇಶ ನೀಡಿರುತ್ತಾರೆ.

ಲಿಂಗಸೂಗೂರು ತಾಲೂಕಿನ ನೀರಲಕೇರಿ ಗ್ರಾಮದ ಹುಲ್ಲಪ್ಪ ತಂದೆ ರಾಮಣ್ಣ ವಯಸ್ಸು-೨೫ ಶಿಕ್ಷೆಗೆ ಗುರಿಯಾದ ಆರೋಪಿ.

https://youtu.be/Ya-ypFqVNkM?si=LlBoUUmIVTHBpjxK

ನೊಂದ ಅಪ್ರಾಪ್ತ ಬಾಧಿತಳು ನೀಡಿದ ದೂರಿನ ಮೇರೆಗೆ ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಕೊಂಡು ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕರಾದ ಶ್ರೀ ಮಹಾಂತೇಶ ಸಜ್ಜನ ಇವರು ಆರೋಪಿತನ ವಿರುದ್ಧ ಮಾನ್ಯ ನ್ಯಾಯಾಲಯದಲ್ಲಿ ದೋಷಾರೋಪಣೆ ಪತ್ರವನ್ನು ಸಲ್ಲಿಸಿದ್ದು ಇರುತ್ತದೆ.

ಮಾನ್ಯ ನ್ಯಾಯಾಲಯವು ಒಟ್ಟು ೨೦ ಸಾಕ್ಷಿಗಳ ಪೈಕಿ ೧೭ ಸಾಕ್ಷಿದಾರರ ವಿಚಾರಣೆ ನಡೆಸಿದ್ದು, ಸಾಕ್ಷಿ ಪುರಾವೆಗಳನ್ನು ಪರೀಶಿಲಿಸಿ ಆರೋಪಿಯ ಮೇಲಿನ ಅಪಾದನೆ ಸಾಬೀತಾಗಿದೆ ಎಂದು ೩ ನೇ ಅಧಿಕ ಜಿಲ್ಲಾ ಮತ್ತು ಸತ್ರ ಪೋಕೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಬಿ.ಬಿ. ಜಕಾತಿ ಯವರು ಆರೋಪಿತನ ವಿರುದ್ಧ ಅಪಾದನೆ ಸಾಬೀತಾಗಿದೆ ಎಂದು ಶಿಕ್ಷೆ ವಿಧಿಸಿ ತೀರ್ಪು ನೀಡಿರುತ್ತಾರೆ.

https://youtu.be/A83Dm5v1p1g?si=vbBPAbpBaV5BmF6x

ಅದರಂತೆ ಆರೋಪಿಗೆ ೨೦ ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ರೂ. ೧೫,೦೦೦/- ದಂಡವನ್ನು ವಿಧಿಸಲಾಗಿದೆ ಮತ್ತು ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ನೊಂದ ಬಾಲಕಿಗೆ ರೂ.೯.೦೦.೦೦೦/- (ರೂ. ಒಂಬತ್ತು ಲಕ್ಷಗಳ) ಪರಿಹಾರವನ್ನು ನೀಡಬೇಕೆಂದು ಮಾನ್ಯ ನ್ಯಾಯಾಲಯವು ಆದೇಶಿಸಿದೆ.

ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಎಂ. ಮಂಜುನಾಥ ರವರು ವಾದವನ್ನು ಸಮರ್ಥವಾಗಿ ಮಂಡಿಸಿರುತ್ತಾರೆ ಸಾಕ್ಷಿದಾರರನ್ನು ಮಾನ್ಯ ನ್ಯಾಯಾಲಯಕ್ಕೆ ಸಮಯಕ್ಕೆ ಸರಿಯಾಗಿ ಆಗಿನ ಪೇದೆಗಳಾದ ಶ್ರೀ ಬಸವರಾಜ, ಮಲ್ಲಪ್ಪ ಪೂಜಾರಿ ಮತ್ತು ವಿರೇಶ ರವರು ಕರೆತಂದು ಸಹಕರಿಸಿರುತ್ತಾರೆ .
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್