ರಾಯಚೂರು ಜಿಲ್ಲೆ ಲಿಂಗಸೂಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನವರಿ ೨೦೨೧ ರಲ್ಲಿ ನಡೆದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ ೩ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕ್ಸೋ ನ್ಯಾಯಾಲಯ, ಪೀಠಾಸೀನ ಲಿಂಗಸೂಗೂರಿನ ನ್ಯಾಯಾಲಯವು ೨೦ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಶುಕ್ರವಾರ ಆದೇಶ ನೀಡಿರುತ್ತಾರೆ.
ಲಿಂಗಸೂಗೂರು ತಾಲೂಕಿನ ನೀರಲಕೇರಿ ಗ್ರಾಮದ ಹುಲ್ಲಪ್ಪ ತಂದೆ ರಾಮಣ್ಣ ವಯಸ್ಸು-೨೫ ಶಿಕ್ಷೆಗೆ ಗುರಿಯಾದ ಆರೋಪಿ.
https://youtu.be/Ya-ypFqVNkM?si=LlBoUUmIVTHBpjxK
ನೊಂದ ಅಪ್ರಾಪ್ತ ಬಾಧಿತಳು ನೀಡಿದ ದೂರಿನ ಮೇರೆಗೆ ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಕೊಂಡು ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕರಾದ ಶ್ರೀ ಮಹಾಂತೇಶ ಸಜ್ಜನ ಇವರು ಆರೋಪಿತನ ವಿರುದ್ಧ ಮಾನ್ಯ ನ್ಯಾಯಾಲಯದಲ್ಲಿ ದೋಷಾರೋಪಣೆ ಪತ್ರವನ್ನು ಸಲ್ಲಿಸಿದ್ದು ಇರುತ್ತದೆ.
ಮಾನ್ಯ ನ್ಯಾಯಾಲಯವು ಒಟ್ಟು ೨೦ ಸಾಕ್ಷಿಗಳ ಪೈಕಿ ೧೭ ಸಾಕ್ಷಿದಾರರ ವಿಚಾರಣೆ ನಡೆಸಿದ್ದು, ಸಾಕ್ಷಿ ಪುರಾವೆಗಳನ್ನು ಪರೀಶಿಲಿಸಿ ಆರೋಪಿಯ ಮೇಲಿನ ಅಪಾದನೆ ಸಾಬೀತಾಗಿದೆ ಎಂದು ೩ ನೇ ಅಧಿಕ ಜಿಲ್ಲಾ ಮತ್ತು ಸತ್ರ ಪೋಕೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಬಿ.ಬಿ. ಜಕಾತಿ ಯವರು ಆರೋಪಿತನ ವಿರುದ್ಧ ಅಪಾದನೆ ಸಾಬೀತಾಗಿದೆ ಎಂದು ಶಿಕ್ಷೆ ವಿಧಿಸಿ ತೀರ್ಪು ನೀಡಿರುತ್ತಾರೆ.
https://youtu.be/A83Dm5v1p1g?si=vbBPAbpBaV5BmF6x
ಅದರಂತೆ ಆರೋಪಿಗೆ ೨೦ ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ರೂ. ೧೫,೦೦೦/- ದಂಡವನ್ನು ವಿಧಿಸಲಾಗಿದೆ ಮತ್ತು ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ನೊಂದ ಬಾಲಕಿಗೆ ರೂ.೯.೦೦.೦೦೦/- (ರೂ. ಒಂಬತ್ತು ಲಕ್ಷಗಳ) ಪರಿಹಾರವನ್ನು ನೀಡಬೇಕೆಂದು ಮಾನ್ಯ ನ್ಯಾಯಾಲಯವು ಆದೇಶಿಸಿದೆ.
ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಎಂ. ಮಂಜುನಾಥ ರವರು ವಾದವನ್ನು ಸಮರ್ಥವಾಗಿ ಮಂಡಿಸಿರುತ್ತಾರೆ ಸಾಕ್ಷಿದಾರರನ್ನು ಮಾನ್ಯ ನ್ಯಾಯಾಲಯಕ್ಕೆ ಸಮಯಕ್ಕೆ ಸರಿಯಾಗಿ ಆಗಿನ ಪೇದೆಗಳಾದ ಶ್ರೀ ಬಸವರಾಜ, ಮಲ್ಲಪ್ಪ ಪೂಜಾರಿ ಮತ್ತು ವಿರೇಶ ರವರು ಕರೆತಂದು ಸಹಕರಿಸಿರುತ್ತಾರೆ .













