ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಿ-ಗುರುಲಿಂಗಪ್ಪ

Advertisement
ರಾಯಚೂರು,ಮೇ.07 ವಿಧಾನಸಭೆ ಚುನಾವಣೆ-2023ರ ಹಿನ್ನಲೆಯಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ಹಾಗೂ ಮತದಾರರನ್ನು ಆಕರ್ಷಿಸಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಮಮತೆಯ ಕರೆಯೋಲೆ ಎಂಬ ಶೀರ್ಷಿಕೆಯಡಿಯಲ್ಲಿ ಮತದಾನ ಜಾಗೃತಿ ಜಾಥ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಮೇ.07ರ(ಭಾನುವಾರ) ನಗರಸಭೆ ಆವರಣದಲ್ಲಿ ಮತದಾನ ಮಮತೆಯ ಕರೆಯೋಲೆ ಎಂಬ ವಿನೂತನ ಜಾಗೃತಿ ಜಾಥ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ನಗರಸಭೆ ಪೌರಾಯುಕ್ತ ಕೆ.ಗುರುಲಿಂಗಪ್ಪ ಅವರು ಮಾತನಾಡಿ, ಮತದಾನ ಮಮತೆಯ ಕರೆಯೋಲೆ ಎಂಬ ವಿನೂತನ ಕಾರ್ಯಕ್ರಮದ ಮೂಲಕ ಮದುವೆಗೆ ಬಂಧು ಬಳಗವನ್ನು ಕರೆಯುವ ಹಾಗೆ ಮತದಾನದ ದಿನದಂದು ಮತವನ್ನು ಹಾಕಲು ಜನರನ್ನು ಕರೆತರಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾದೆ ಎಂದರು.

ಮೇ 10ಕ್ಕೆ ಮತದಾನ ಇರುವುದರಿಂದ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕಾಗಿದ್ದು, ದೇಶದ ಸುಭದ್ರತೆ ಮತದಾನದಲ್ಲಿ ಅಡಗಿದೆ. ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ನಮ್ಮ ಮತದಾನ ಅತ್ಯಂತ ಅವಶ್ಯಕತೆಯಿದೆ .ಯಾವುದೇ ಆಸೆ. ಆಮಿಷಗಳಿಗೆ. ಒಳಗಾಗದೆ ಪ್ರತಿಯೊಬ್ಬರು ಮೇ 10ರಂದು ಮತಗಟ್ಟೆಗೆ ಹೋಗಿ ಮತ ಚಲಾಯಿಸುವುದರಿಂದ ನಮ್ಮಹಕ್ಕನು ಉಳಿಸಿ ಕೊಳ್ಳಲು ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

ಈ ಜಾಥಾವು ನಗರಸಭೆಯ ಕಾರ್ಯಾಲಯದಿಂದ ತಾಲೂಕ್ ಪಂಚಾಯತ್. ಬಸ್ ಸ್ಟ್ಯಾಂಡ್ ಮೂಲಕ. ಡಾ ಬಿ .ಆರ್ ಅಂಬೇಡ್ಕರ್ ವೃತ್ತದವರೆಗೂ ನಡೆಯಿತು. ನಂತರ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರ್ಪಳಿಯನ್ನು ನಿರ್ಮಾಣ ಮಾಡಿ ಮತದಾನ ಜಾಗೃತಿಯ ಘೋಷಣೆಗಳನ್ನು ಹೇಳಲಾಯಿತು.

ಈ ಸಂದರ್ಭದಲ್ಲಿ ಮತದಾರ ಸಾಕ್ಷರತಾ ಕ್ಲಬ್ಬಿನ ಜಿಲ್ಲಾ ಸಂಪನ್ಮೂಲ ವ್ಯಕ್ತಿ ದಂಡಪ್ಪ ಬಿರಾದಾರ, ನಗರಸಭೆ ವ್ಯವಸ್ಥಾಪಕ ರಾಜು, ಕೃಷ್ಣ ಕಟ್ಟಿಮನಿ, ಶಕೀಲ್ ಸೇರಿದಂತೆ ನಗರಸಭೆಯ ವಿವಿಧ ಹಂತದ ಅಧಿಕಾರಿಗಳು ಸಿಬ್ಬಂದಿಯವರು ಭಾಗವಹಿಸಿದ್ದರು.

 

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ