ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯ ಅಡಿಯಲ್ಲಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Advertisement
ರಾಯಚೂರು,ಅ.೨೦(ಕ.ವಾ):- ಭಾರತ ಸರ್ಕಾರದ ಎಂ.ಎಸ್.ಎಂ.ಇ. ಯೋಜನೆಯಡಿ ೨೦೨೩-೨೪ನೇ ಸಾಲಿನ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ರಾಯಚೂರು ಇವರಿಂದ ವಿದ್ಯಾವಂತ ಯುವಕ/ಯುವತಿಯರಿಗೆ/ಕಸಬುದಾರರಿಗೆ ಅತೀ ಸಣ್ಣ ಕೈಗಾರಿಕಾ ಘಟಕಗಳನ್ನು ಹಾಗೂ ಸೇವಾ ಚಟುವಟಿಕೆಗಳನ್ನು ಪ್ರಾರಂಭ ಮಾಡುವ ಸಲುವಾಗಿ ಈ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ ಎಂದು ಸಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಈ ಯೋಜನೆಯಡಿ ನಿರಂತರವಾಗಿ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವೆಬ್‌ಸೈಟ್ ವಿಳಾಸ:www.kvic.gov.in /pmegp online application registration.ವಿರುತ್ತದೆ. ಅಭ್ಯರ್ಥಿಗಳು ಈ ಷರತ್ತುಗಳಿಗೆ ಅನುಗುಣವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೆ ಸ್ವಯಂ ಉದ್ಯೋಗವನ್ನು ಪ್ರಾರಂಭ ಮಾಡಿ ಉದ್ಯೋಗ ಕಲ್ಪಿಸುವುದು ಮುಖ್ಯ ಉದ್ದೇಶವಾಗಿರುತ್ತದೆ.

ಕೈಗಾರಿಕೆಗಳನ್ನು ಪ್ರಾರಂಭ ಮಾಡುವಂತಹ ಭಾವಿ ಉದ್ದಿಮೆದಾರರಿಗೆ ಸಾಮಾನ್ಯ ವರ್ಗದವರಿಗೆ ನಗರ ಪ್ರದೇಶದಲ್ಲಿ ಶೇ:೧೫% ರಂತೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶೇ:೨೫% ರಂತೆ ಸಹಾಯಧನದ ಸೌಲಭ್ಯವಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಹಿಂದುಳಿದ ವರ್ಗ/ಅಲ್ಪಸಂಖ್ಯಾತರರು/ಮಾಜಿ ಸೈನಿಕರು/ಅಂಗವಿಕಲರು ಹಾಗೂ ಮಹಿಳಾ ಉದ್ದಿಮೆದಾರರಿಗೆ ನಗರ ಪ್ರದೇಶದವರಿಗೆ ಶೇ:೨೫% ರಂತೆ ಹಾಗೂ ಗ್ರಾಮೀಣ ಪ್ರದೇಶದವರಿಗೆ ಶೇ:೩೫% ರಂತೆ ಸಹಾಯಧನವನ್ನು ಕಲ್ಪಿಸಲಾಗುತ್ತದೆ. ಈ ಯೋಜನೆಯಡಿ ಸಂಯುಕ್ತವಾಗಿ ಯಂತ್ರೋಪಕರಣಗಳ ಖರೀದಿಗಾಗಿ ಹಾಗೂ ದುಡಿಮೆ ಬಂಡವಾಳದ ಸಲುವಾಗಿ ಸಾಲ ಸೌಲಭ್ಯವನ್ನು ಬ್ಯಾಂಕ್ ಮುಖಾಂತರ ಕಲ್ಪಿಸಲಾಗುತ್ತದೆ. ಆನ್‌ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಆನ್‌ಲೈನ್ ಮುಖಾಂತರ ಸರ್ವಿಸ್ ಏರಿಯಾ ಪ್ರಕಾರ ಆಯಾ ಬ್ಯಾಂಕುಗಳಿಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಶಿಫಾರಸ್ಸು ಮಾಡಲಾಗುತ್ತದೆ. ಬ್ಯಾಂಕಿನಿಂದ ಸಾಲ ಮಂಜೂರಾತಿ ಪತ್ರ ನೀಡಿದ ಬಳಿಕೆ ಅಭ್ಯರ್ಥಿಗಳಿಗೆ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಈ ಮೊದಲು ಉದ್ಯಮಶೀಲತಾ ತರಬೇತಿ ಕಾರ್ಯಕ್ರಮವನ್ನು ಪಡೆದಿದ್ದಲ್ಲಿ ಅವರಿಗೆ ವಿನಾಯಿತಿ ನೀಡಲಾಗುತ್ತದೆ. ಕನಿಷ್ಠ ೧೮ ವರ್ಷ ಮೇಲ್ಪಟ್ಟವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಕನಿಷ್ಠ ೮ನೇ ತರಗತಿ ಪಾಸಾಗಿರಬೇಕು, ಯಾವುದೇ ಆದಾಯ ಮಿತಿ ಇರುವುದಿಲ್ಲ.

ದಾಖಲಾತಿಗಳು: ಜಾತಿ ಪ್ರಮಾಣ ಪತ್ರ, ಗ್ರಾಮೀಣ ಪ್ರಮಾಣ ಪತ್ರ, ಯೋಜನಾ ವರದಿ, ಉದ್ಯಮಶೀಲತಾಭಿವೃದ್ಧಿ ತರಬೇತಿ ಪ್ರಮಾಣ ಪತ್ರ (ತರಬೇತಿ ಪಡೆದಿದ್ದಲ್ಲಿ), ಆಧಾರ ಕಾರ್ಡ್, ಪ್ಯಾನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಛಾಯ ಪ್ರತಿ, ಪಾಸ್ಪೋರ್ಟ್ ಸೈಜ್ ಫೋಟೋ, ಗ್ರಾಮೀಣ ಪ್ರದೇಶ ಅಭ್ಯರ್ಥಿಗಳು ಇದ್ದಲ್ಲಿ ವಾಸಸ್ಥಳ ಪ್ರಮಾಣ ಪತ್ರ, ಜನಸಂಖ್ಯೆ ಪ್ರಮಾಣ ಪತ್ರ ಹಾಗೂ ಸಿಬಿಲ್ ರಿಪೋರ್ಟ್, ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಹೈದ್ರಾಬಾದ ರಸ್ತೆ ರಾಯಚೂರು ಇವರನ್ನು ಕಛೇರಿ ಸಮಯದಲ್ಲಿ ಮೊ. ಸಂ: ೮೮೬೧೨೪೧೦೯೩ ಹಾಗೂ ೯೯೦೧೧೭೬೭೯೭ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್