ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬಸ್ಸಿಗಾಗಿ ಪೊಲೀಸ್ ಹಾಗೂ ವಿದ್ಯಾರ್ಥಿಗಳ ಮಧ್ಯೆ ಮಾತಿನ ಚಕಮುಕಿ

Advertisement
ಜೂನ್ 12. ಸಿಂಧನೂರು ಕುಷ್ಟಗಿ ಮುಖ್ಯ ರಸ್ತೆಯ ವಿರುಪಾಪುರ ಅರಳಹಳ್ಳಿ ಕ್ರಾಸ್ ಹತ್ತಿರ ವಿದ್ಯಾರ್ಥಿಗಳು ರಸ್ತೆ ಬಂದ್ ಮಾಡುವ ಮೂಲಕ ಸಾರಿಗೆ ಇಲಾಖೆಯ ಸಿಂಧನೂರು ಡಿಪೋ ಮ್ಯಾನೇಜರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರಸ್ತೆ ಬಂದ್ ಮಾಡಲಾಯಿತು ಸ್ಥಳಕ್ಕೆ ಆಗಮಿಸಿದ ಸಿಂಧನೂರು ಹಾಗೂ ತುರವಿಹಾಳ ಪೊಲೀಸ್ ಠಾಣೆ ಅಧಿಕಾರಿಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಿ ದಯವಿಟ್ಟು ರಸ್ತೆ ಬಂದ ಮಾಡಬೇಡಿ ನಿಮ್ಮ ಸಮಸ್ಯೆ ಬಗ್ಗೆ ಹರಿಸುತ್ತೇವೆ ಎಂದು ಪೊಲೀಸ್ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳ ಮಧ್ಯ ಮಾತಿನ ಚಕಮುಕಿ ನಡೆಯಿತು

ಕುಷ್ಟಗಿಯಿಂದ ಸಿಂಧನೂರು ಸಿಂಧನೂರಿನಿಂದ ಕುಷ್ಟಗಿ ಹೋಗುವಂತ ಬಸ್ಸುಗಳು ಹಲವು ವರ್ಷಗಳಿಂದ ಇಲ್ಲಿ ಬಸ್ಗಳನ್ನ ನಿಲ್ಲಿಸದೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಪ್ರತಿನಿತ್ಯ ತಮ್ಮ ವಿದ್ಯಾಭ್ಯಾಸಕ್ಕಾಗಿ ಸಿಂಧನೂರು ಪಟ್ಟಣಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ನಿಲ್ಲಿಸಬೇಕು ಎಂಬ ಆದೇಶವಿದ್ದರೂ ಬಸ್ಸುಗಳನ್ನು ನಿಲ್ಲಿಸದೆ ಸಮಯಕ್ಕೆ ಸರಿಯಾಗಿ ಹೋಗದೆ ಖಾಸಗಿ ವಾಹನಗಳಲ್ಲಿ ದುಡ್ಡು ಕೊಟ್ಟು ಹೋಗಿ ಅರ್ಧಮರ್ಧ ವಿದ್ಯಾಭ್ಯಾಸ ಮಾಡುವಂತಹ ಪರಿಸ್ಥಿತಿ ಎದುರಾಗಿದೆ ಹೀಗಾದರೆ ನಮಗೆ ಸಾರಿಗೆ ಇಲಾಖೆ ಯಾಕೆ ಬೇಕು ಸಾರಿಗೆ ಇಲಾಖೆಯ ಬಸ್ಸುಗಳು ನಮಗೆ ಯಾಕೆ ಬೇಕು ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಈ ಮುಂಚೆ ಕೂಡ ಹಲವು ಬಾರಿ ಸಂಬಂಧ ಪಟ್ಟ ಜನಪ್ರತಿನಿಧಿಗಳ ಗಮನಕ್ಕೂ ತಂದಿದ್ದೇವೆ ಡಿಪೋ ಮ್ಯಾನೇಜರ್ ಗಮನಕ್ಕೂ ತಂದಿದ್ದೇವೆ ಹಲವು ಬಾರಿ ರಸ್ತೆಗಳನ್ನು ಬಂದು ಮಾಡಿ ಮನವಿ ಪತ್ರಗಳನ್ನು ಕೊಟ್ಟಿದ್ದೇವೆ ಅಧಿಕಾರಿಗಳು ಮಾತ್ರ ಮನವಿ ಪತ್ರ ಕೊಟ್ಟಾಗ ರಸ್ತೆ ಬಂದು ಮಾಡಿದಾಗ ಎರಡು ಮೂರು ದಿನ ಮಾತ್ರ ಬಸ್ಸುಗಳನ್ನು ನಿಲ್ಲಿಸುತ್ತಾರೆ ಆನಂತರ ಮತ್ತೆ ಅದೇ ಕೆಲಸ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ