ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬಹುತೇಕ ಅಧಿಕಾರಿಗಳು, ಸಿಬ್ಬಂದಿಯಲ್ಲಿ ಶಿಸ್ತು ಇಲ್ಲ: ಲೋಕಾಯುಕ್ತರ ಕಾರ್ಯದರ್ಶಿ ಅಸಮಾಧಾನ

Advertisement
ರಾಯಚೂರು, ಜನವರಿ 07 . ಜಿಲ್ಲೆಯ ಬಹುತೇಕ ಇಲಾಖೆಗಳಲ್ಲಿ ಕಡ್ಡಾಯವಾಗಿ ನಿರ್ವಹಣೆ ಆಗಲೇಬೇಕಾದ ನೌಕರರ ಹಾಜರಾತಿ ವಹಿ, ಚಲನವಹಿ, ನಗದು ವಹಿಗಳನ್ನು ಸರಿಯಾಗಿ ನಿರ್ವಹಿಸದೇ ಲೋಪ ಎಸಗುತ್ತಿರುವುದು ಲೋಕಾತಂಡದ ಕಾರ್ಯಾಚರಣೆ ವೇಳೆ ಕಂಡು ಬಂದಿದೆ ಎಂದು ಗೌರವಾನ್ವಿತ ಕರ್ನಾಟಕ ಲೋಕಾಯುಕ್ತರ ಕಾರ್ಯದರ್ಶಿಗಳಾದ ಶ್ರೀನಾಥ ಕೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ 7ರಂದು ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇವರಿಂದ ನಡೆದ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಲೋಕಾ ತಂಡವು ಕಾರ್ಯಾಚರಣೆ ವೇಳೆ ಗಮನಿಸಿದಂತೆ ಬಹುತೇಕ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಗುರುತಿನ ಚೀಟಿ ಧರಿಸದೇ ಕೆಲಸ ನಿರ್ವಹಣೆ ಮಾಡುತ್ತಿದ್ದಾರೆ. ಗ್ರೂಪ್ ಡಿ ಸೇರಿದಂತೆ ಬೇರೆ ಬೇರೆ ಸಿಬ್ಬಂದಿಗೆ ನಿಗದಿಪಡಿಸಿದ ಡ್ರೆಸ್ ಕೋಡ್ ಪಾಲನೆಯಾಗಿಲ್ಲ. ಕಚೇರಿಗೆ ಹೋದಾಗ ಯಾರು ಏನು ಎಂದು ಏನೂ ತಿಳಿಯುವುದಿಲ್ಲ. ಬಹುತೇಕ ಕಚೇರಿಗಳಲ್ಲಿ ನೇಮ್ ಪ್ಲೇಟ್ ಕಾಣಿಸಲಿಲ್ಲ. ಇದು ಕೂಡಲೇ ಸರಿಯಾಗಬೇಕು. ಈ ಬಗ್ಗೆ ಜಿಲ್ಲಾಮಟ್ಟದ ಅಧಿಕಾರಿಗಳು ಕೂಡಲೇ ಕ್ರಮವಹಿಸಬೇಕು ಎಂದು ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಎಲ್ಲ ಕಚೇರಿಗಳಿಗೆ ಸುತ್ತೋಲೆ ರವಾನಿಸಿ ತಿಳಿಸಿದಾಗ್ಯೂ ಲೋಕಾಯುಕ್ತ ಅಧಿಕಾರಿಗಳ ಮಾಹಿತಿಯ ಫಲಕಗಳನ್ನು ಬಹುತೇಕ ಕಚೇರಿಗಳಲ್ಲಿ ಅಳವಡಿಸಿಲ್ಲ. ಸರ್ಕಾರಿ ನೌಕರರಿಗೆ ಅನ್ವಿಯಿಸುವ ಎಲ್ಲ ನಿಯಮಗಳು ಹೊರಗುತ್ತಿಗೆ ನೌಕರರಿಗು ಸಹ ಅನ್ವಯಿಸುತ್ತವೆ. ಆದಾಗ್ಯೂ ಹೊರಗುತ್ತಿಗೆ ನೌಕರರ ಹಾಜರಾತಿ ವಹಿಯನ್ನು ಬಹುತೇಕ ಕಚೇರಿಗಳಲ್ಲಿ ನಿರ್ವಹಣೆ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ತಪ್ಪಿತಸ್ಥ ಸರ್ಕಾರಿ ನೌಕರರ ಮೇಲೆ ಮೇಲೆ ಕ್ರಮವಹಿಸುವುದಷ್ಟೇ ನಮ್ಮ ಕೆಲಸವಲ್ಲ; ಸರ್ಕಾರದ ಆಡಳಿತ ವ್ಯವಸ್ಥೆಯನ್ನು ಸುಧಾರಿಸುವುದು ಸಹ ನಮ್ಮ ಕಾರ್ಯವಾಗಿದೆ. ಈ ದಿಶೆಯಲ್ಲಿ ತಂಡವು ಭೇಟಿ ನೀಡಿದ ವೇಳೆ ತಿಳಿಸಿದ ಅಂಶಗಳ ಬಗ್ಗೆ ಅರಿತು ಅಧಿಕಾರಿಗಳು ಮತ್ತು ಸಿಬ್ಬಂದಿ ಮಾರ್ಗಸೂಚಿ ಅಂಶಗಳನ್ನು ಪಾಲನೆ ಮಾಡಬೇಕು ಎಂದು ತಿಳಿಸಿದರು.
ಜನವರಿ 2 ರಿಂದ ಜನವರಿ 7ರವರೆಗೆ ರಾಯಚೂರು ಜಿಲ್ಲೆಯ ವಿವಿಧೆಡೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಕಂಡುಬAದ ಲೋಪಗಳಿಗೆ ಸಂಬAಧಿಸಿದoತೆ ಪೊಲೀಸ್ ಹಾಗೂ ನ್ಯಾಯಾಂಗ ಇಲಾಖೆಯ ಅಧಿಕಾರಿಗಳಿಂದ ವರದಿ ಪಡೆದು ತಪ್ಪಿತಸ್ಥರ ಮೇಲೆ ವಿಚಾರಣೆಗೆ ಕ್ರಮವಹಿಸಲಾಗುವುದು. ಗಂಭೀರ ಪ್ರಕರಣ ಎಂದು ಕಂಡುಬAದಲ್ಲಿ ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು. ಈಗ ಆಗಿರುವ ಲೋಪಗಳಿಗೆ ಸಂಬAಧಿಸಿದAತೆ ಯಾರಾದರು ಅಧಿಕಾರಿಗಳು ಮತ್ತು ಸಿಬ್ಬಂದಿ ತಪ್ಪು ಮಾಹಿತಿ ನೀಡಿದಲ್ಲಿ ಮತ್ತೆ ಜಿಲ್ಲಾ ಲೋಕಾಯುಕ್ತ ಅಧೀಕ್ಷಕರಿಂದ ಪರಿಶೀಲಿಸಿ ವರದಿ ಪಡೆದು ದೂರು ದಾಖಲಿಸುತ್ತೇವೆ ಎಂದು ತಿಳಿಸಿದರು.
ಸೂಕ್ತ ಮಾರ್ಗದರ್ಶನಕ್ಕೆ ವರದಿ: ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವುದಕ್ಕಾಗಿ, ಲೋಕಾ ತಂಡ ಭೇಟಿ ನೀಡಿ ಪರಿಶೀಲಿಸಿ ಪಟ್ಟಿ ಮಾಡಿದ ಲೋಪದೋಷಗಳ ಅಂಶಗಳ ಸಮಗ್ರ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗುವುದು ಎಂದು ಕಾರ್ಯದರ್ಶಿಗಳು ತಿಳಿಸಿದರು.
[caption id="attachment_29150" align="alignnone" width="2560"] oplus_1048576[/caption]
ನಮ್ಮ ಹಂತದಲ್ಲೇ ಕ್ರಮ: ಬೇರೆ ಬೇರೆ ಇಲಾಖೆಗಳಲ್ಲಿನ ಲೋಪದ ಬಗ್ಗೆ ಲೋಕಾಯುಕ್ತರು ನೀಡಿದ ಪಟ್ಟಿಯ ಮೇಲೆ ತಾವು ತಮ್ಮ ಹಂತದಲ್ಲಿ ಆಗುವುದನ್ನು ತ್ವರಿತವಾಗಿ ಸರಿಪಡಿಸುವುದಾಗಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ತಿಳಿಸಿದರು. ಶುದ್ಧ ಕುಡಿವ ನೀರಿನ ಘಟಕಗಳ ದುರಸ್ಥಿಗೆ ಹೆಚ್ಚಿನ ಒತ್ತು ಕೊಡುವುದಾಗಿ ಅವರು ಹೇಳಿದರು. ಮುಂದಿನ ವಾರ ಎಲ್ಲ ಅಧಿಕಾರಿಗಳ ಸಭೆ ಕರೆದು ಪುನಃ ಚರ್ಚಿಸುವುದಾಗಿ ತಿಳಿಸಿದರು.
ಇಲ್ಲಿಗೆ ಮುಗಿಯುವುದಿಲ್ಲ: ಲೋಕಾಯುಕ್ತ ಭೇಟಿಯ ಬಿಸಿ ಇಲ್ಲಿಗೆ ಮುಗಿಯುವುದಿಲ್ಲ. ತಪ್ಪಿತಸ್ಥರಿಗೆ ಇನ್ಮುಂದೆ ನೊಟೀಸ್ ಬರುತ್ತವೆ. ಅಧಿಕಾರಿಗಳು ನೊಟೀಸಗಳನ್ನು ಹಗುರವಾಗಿ ಪರಿಗಣಿಸದೇ ಕೂಡಲೇ ಉತ್ತರ ನೀಡಬೇಕು. ಪ್ರಕರಣ ಗಂಭೀರ ಸ್ವರೂಪ ಹೊಂದಿದ್ದಲ್ಲಿ ಕ್ರಿಮಿನಲ್ ಪ್ರಕರಣ ಎದುರಿಸಬೇಕು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಎ.ವಿ.ಪಾಟೀಲ, ರಾಯಚೂರು ಜಿಲ್ಲಾ ಕರ್ನಾಟಕ ಲೋಕಾಯುಕ್ತದ ಅಧೀಕ್ಷಕರಾದ ಸತೀಶ್ ಎಸ್ ಚಿಟಗುಬ್ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಕ್ಷ ಗಿರಿ, ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಲೋಕಾಯುಕ್ತದ ಡಿವೈಎಸ್ಪಿ ರವಿ ಪುರುಷೋತ್ತಮ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಸ್ವಾಗತಿಸಿದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್