ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬಿ.ಎಮ್.ನಾಗರಾಜಗೆ ಗೆಲುವಿನ ನಾಗಲೋಟ ಕಾರ್ಯಕರ್ತರ ವಿಜಯೋತ್ಸವ

Advertisement
ಮೇ 13.ಸಿರುಗುಪ್ಪ ವಿಧಾನಸಭೆ ಚುನಾವಣೆಯ ೯೨ ಕ್ಷೇತ್ರದ ಫಲಿತಾಂಶದಲ್ಲಿ ೩೭೦೩೩ ಸಾವಿರಕ್ಕೂ ಅಧಿಕ ಅಂತರ ಮತಗಳಿಂದ ವಿಜೇತರಾದ ಕಾಂಗ್ರೇಸ್ ಅಭ್ಯರ್ಥಿ ಬಿ.ಎಮ್.ನಾಗರಾಜ್ ಅವರ ನಿವಾಸದೆದುರು ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕಾಂಗ್ರೇಸ್ ಭದ್ರಕೋಟೆಯಾಗಿದ್ದ ಸಿರುಗುಪ್ಪ ವಿಧಾನಸಭಾ ಕ್ಷೇತ್ರವನ್ನು ಶಾಸಕ ಎಮ್.ಎಸ್.ಸೋಮಲಿಂಗಪ್ಪ ಅವರು ೨೦೦೪ರಲ್ಲಿ ಕಾಂಗ್ರೇಸ್ ಮತ್ತು ಜೆ.ಡಿ.ಎಸ್ ಪಕ್ಷದ ಅಭ್ಯರ್ಥಿಗಳಾಗಿದ್ದ ಮಾಜಿ ಶಾಸಕರಾದ ಎಂ.ಶಂಕರರೆಡ್ಡಿ, ಟಿ.ಎಂ.ಚಂದ್ರಶೇಖರಯ್ಯ ಸ್ವಾಮಿ ಅವರ ವಿರುದ್ದ ಗೆದ್ದು ಕಮಲ ಅರಳಿಸಿ ಅಸೆಂಬ್ಲಿ ಪ್ರವೇಶ ಪಡೆದರಲ್ಲದೇ ಎರಡನೇ ಸಲವೂ ಪರಿಶಿಷ್ಟ ಪಂಗಡ ಮೀಸಲಾತಿ ಕ್ಷೇತ್ರವಾದ ನಂತರವೂ ೨೦೦೮ರ ವಿಧಾನಸಭಾ ಚುನಾವಣೆಯಲ್ಲಿ ಬಿ.ಎಮ್. ನಾಗರಾಜರ ವಿರುದ್ದ ಗೆಲುವಿನ ನಗೆ ಬೀರಿದ್ದರು.

ನಂತರದ ೨೦೧೩ರ ಚುನಾವಣೆ ವೇಳೆ ವಿಜೇತರಾದ ಬಿ.ಎಮ್.ನಾಗರಾಜರು ಕ್ಷೇತ್ರದ ಅಭಿವೃದ್ದಿ ಜೊತೆಗೆ ತಾಲೂಕಿನ ಜನರ ವಿಶ್ವಾಸ ಗಳಿಸಿದ್ದರು. ೨೦೧೮ರ ವೇಳೆ ಕಾರಣಾಂತರಗಳಿAದ ಅಭ್ಯರ್ಥಿ ಸ್ಥಾನದಿಂದ ಹಿಂದೆ ಸರಿದು ದೂರ ಉಳಿದಿದ್ದರಿಂದ ಪಕ್ಷವು ಬಿ.ಮುರುಳಿಕೃಷ್ಣ ಅವರನ್ನು ಸ್ಪರ್ಧೆಗಿಳಿಸಿತ್ತು. ಸ್ಥಳೀಯ ಅನುಭವದ ಕೊರತೆಯಿದ್ದರಿಂದ ಸೋಲುಂಟಾಗಿತ್ತು.

 

ಈ ಸಲ ಟಿಕೆಟ್ ಹಂಚಿಕೆಯಲ್ಲಿ ನಡೆದ ಕಸರತ್ತಿನ ಕೊನೆ ಘಳಿಗೆಯಲ್ಲಿ ಮುರುಳಿಕೃಷ್ಣರಿಗೆ ಹೈಕಮಾಂಡ್ ಕಣದಿಂದ ಹಿಂದೆ ಸರಿಸಿ ಟಿಕೆಟ್ ನೀಡಿದ್ದು ಸ್ಥಳೀಯರಾದ ಬಿ.ಎಮ್.ನಾಗರಾಜ್ ಅವರಿಗೆ ಶತಾಗತಾಯ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿತ್ತು.

ಗೆಲುವು ದೊರೆಯುವ ಬಗ್ಗೆ ಪಕ್ಷದಿಂದಲೇ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯಂತೆ ಮತ ಎಣಿಕೆಯ ಪ್ರಾರಂಭದಿಂದ ಕೊನೆಯವರೆಗೂ ಗೆಲುವಿನ ಮುನ್ನಡೆ ಕಾಯ್ದುಕೊಂಡಿದ್ದು ಸುಲಭದ ಗೆಲುವು ತಂದುಕೊಟ್ಟಿದ್ದರಿಂದ ಅಭಿಮಾನಿಗಳಲ್ಲಿ ಮತ್ತು ಕಾರ್ಯಕರ್ತರಲ್ಲಿ ಸಂಭ್ರಮದ ವಾತಾವರಣವುಂಟಾಗಿದ್ದು ಪರಸ್ಪರ ಬಣ್ಣ ಎರಚಿಕೊಂಡು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್