ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬುಕ್ಕನಹಟ್ಟಿ ಗ್ರಾಮಕ್ಕೆ ಬಸ್ ಸಂಚಾರ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಕರವೇ ಮನವಿ

Advertisement
ರಾಯಚೂರು, ಜುಲೈ 16. ಸಿಂಧನೂರು ತಾಲೂಕಿನ ಗಡಿಗ್ರಾಮ ಬುಕ್ಕನಹಟ್ಟಿಗೆ ಸಾರಿಗೆ ಬಸ್ ಸಂಚಾರ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ವಿದ್ಯಾರ್ಥಿಗಳೊಂದಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸ್ಥಳೀಯ ಘಟಕ ವ್ಯವಸ್ಥಾಪಕ ಹೊನ್ನಪ್ಪ ಅವರಿಗೆ ಬುಧವಾರ ಮನವಿ ಸಲ್ಲಿಸಿ ಆಗ್ರಹಿಸಲಾಯಿತು.

ಬುಕ್ಕನಹಟ್ಟಿ ಮಾರ್ಗದಲ್ಲಿ ಬಸ್ ಓಡಿಸಿ ಮಂಜುನಾಥ ಗಾಣಗೇರ
ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಗಾಣಗೇರ ಮಾತನಾಡಿ, “ಸಿಂಧನೂರು ತಾಲೂಕಿನ ಬುಕ್ಕನಹಟ್ಟಿ ಗ್ರಾಮವು ತಾಲೂಕು ಕೇಂದ್ರದಿAದ 30 ಕಿ.ಮೀ ಅಂತರದಲ್ಲಿದ್ದು, ಗಡಿ ಗ್ರಾಮವಾಗಿದೆ. ಇಲ್ಲಿಗೆ ಸಾರಿಗೆ ಬಸ್ ಸಂಚಾರ ಸೌಕರ್ಯ ಇರುವುದಿಲ್ಲ. ಇದರಿಂದಾಗಿ ಶಾಲಾ-ಕಾಲೇಜಿಗೆ ಹೋಗುವ 50 ರಿಂದ 60 ವಿದ್ಯಾರ್ಥಿಗಳು ದಿನವೂ ಬೆಳಿಗ್ಗೆ ಬುಕ್ಕನಹಟ್ಟಿಯಿಂದ 2 ಕಿ.ಮೀ ಅಂತರದಲ್ಲಿರುವ ಉಮಲೂಟಿಗೆ ನಡೆದುಕೊಂಡು ಬಂದು, ಅಲ್ಲಿಂದ ಸಿಂಧನೂರು ನಗರಕ್ಕೆ ಹೋಗುತ್ತಿದ್ದಾರೆ. ಮಳೆಗಾಲದಲ್ಲಿ ಈ ವಿದ್ಯಾರ್ಥಿಗಳು ಅನಿವಾರ್ಯವಾಗಿ ಶಾಲಾ-ಕಾಲೇಜಿಗೆ ಗೈರಾಗುವಂತಾಗಿದೆ. ಇದು ಇವರ ಶಿಕ್ಷಣದ ಮೇಲೆ ಪ್ರತಿಕೂಲ ಪರಿಣಾಮ ಉಂಟುಮಾಡಿದೆ. ಹಾಗಾಗಿ ಕೂಡಲೇ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.

ಆಸ್ಪತ್ರೆಗೆ ಹೋಗಲು ಬಸ್ ಇಲ್ಲದಂತಾಗಿದೆ ಅಯ್ಯಪ್ಪ ಮೇಟಿ
ಪ್ರಧಾನ ಕಾರ್ಯದರ್ಶಿ ಅಯ್ಯಪ್ಪ ಮೇಟಿ ಮಾತನಾಡಿ, ಗ್ರಾಮದಿಂದ ನಗರದ ಆಸ್ಪತ್ರೆಗೆ ಚಿಕಿತ್ಸೆಗೆ ಹೋಗುವವರು, ಗರ್ಭಿಣಿಯರು, ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಕಾಲ್ನಡಿಗೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಬಸ್ ಸಂಚಾರ ಸೌಲಭ್ಯ ಇತ್ತು. ಆದರೆ ನಂತರ ವಿನಾಃಕಾರಣ ಸ್ಥಗಿತಗೊಳಿಸಲಾಗಿದ್ದು, ಗ್ರಾಮಸ್ಥರು ಪಟ್ಟಣ, ನಗರಗಳಿಗೆ ಹೋಗಲು ತೊಂದರೆಯಾಗಿದೆ. ಸಾರಿಗೆ ಬಸ್ ಸಂಚಾರ ಸೌಕರ್ಯ ಕಲ್ಪಿಸುವಂತೆ ಈಗಾಗಲೇ ಹಲವು ಬಾರಿ ಮನವಿ ಮಾಡಿದಾಗ್ಯೂ ಬಸ್ ಸಂಚಾರ ಆರಂಭಿಸಿರುವುದಿಲ್ಲ. ಶಾಲಾ-ಕಾಲೇಜು ವಿದ್ಯಾರ್ಥಿಗಳ ಶಿಕ್ಷಣದ ದೃಷ್ಟಿಯಿಂದ, ಗ್ರಾಮಸ್ಥರ/ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು ಕೂಡಲೇ ಈ ಮಾರ್ಗದಲ್ಲಿ ಸಾರಿಗೆ ಸಂಸ್ಥೆ ಬಸ್ ಓಡಿಸಬೇಕು ಎಂದು ಆಗ್ರಹಿಸಿದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್