ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ

Advertisement
ರಾಯಚೂರು.ಅ.೦೧(ಕ.ವಾ):- ೨೦೨೩-೨೪ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಎಕರಿಗೆ ೩.೦೦ ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ ೧೫ ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಾಲ್‌ಗೆ ರೂ.೬೭೬೦/- ರಂತೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ತಿಳಿಸಿದ್ದಾರೆ.

ಸೆ.೦೬ರಿಂದ ರೈತರ ನೊಂದಣಿ ಕಾಲಾವಧಿಯನ್ನು ೪೫ ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು ೯೦ ದಿನಗಳವರೆಗೆ ನಿಗಧಿಪಡಿಸಿದೆ. ರೈತರಿಂದ ಸೂರ್ಯಕಾಂತಿಯನ್ನು ಖರೀದಿಸುವ ಸಂಬಂಧ ಖರಿದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರ ಬಾಂಧವರು ಫ್ರೂಟ್ಸ್ ಐ.ಡಿ ಯೊಂದಿಗೆ ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೊಂದಾಯಿಸಿ ಸೂರ್ಯಕಾಂತಿ ಮಾರಾಟ ಮಾಡಿ ಸರ್ಕಾರದ ಯೋಜನೆಯ ಸದುಪಯೋಗ ಪರಿಡಿಸಕೊಳ್ಳುವಂತೆ ರೈತ ಬಾಂಧವರಲ್ಲಿ ಕೋರಲಾಗಿದೆ ಹಾಗೂ ರೈತರ ಬಾಂಧವರು ಕೋವಿಡ್-೧೯ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೋವಿಡ್ ನಿಯಮಗಳಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖರಿದಿ ಕೇಂದ್ರಗಳ ವಿವಿರ: ರಾಯಚೂರು ತಾಲೂಕಿನ )ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ, ಹೈದ್ರಬಾದ್ ರಸ್ತೆ, ರಾಯಚೂರು(೯೯೮೬೯೨೦೩೧೩). ಹಾಗೂ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಹುಣಸಿಹಾಳಹುಡಾ(೯೭೩೧೩೬೨೦೫೦), ದೇವದುರ್ಗ ತಾಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಜಾಲಹಳ್ಳಿ(೭೮೯೯೩೧೨೯೮೯), ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಗಬ್ಬೂರು(೯೯೭೨೦೭೫೦೦೭), ಲಿಂಗಸುಗೂರು ತಾಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಮಟ್ಟೂರು(೯೧೧೩೬೪೯೮೩೬), ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ನಾಗರಹಾಳ(೭೪೮೩೬೮೫೭೨೦), ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಮೆದಿಕನಹಾಳ(೯೬೬೩೭೦೪೯೨೧), ಸಿಂಧನೂರು ತಾಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಜವಳಗೇರಾ(೯೮೮೦೯೬೩೧೮೬), ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಹುಡಾ(೯೯೬೪೩೧೫೮೬೮), ಮಾನವಿ ತಾಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ತೋರಣದಿನ್ನಿ(೯೯೦೨೩೮೭೩೧೬), ಹಾಗೂ ಸಿರವಾರ ತಾಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಸಿರವಾರ(೯೮೮೦೮೯೧೯೧೯)ಖರೀದಿ ಕೇಂದ್ರಗಳನ್ನು ಸಂಪರ್ಕಿಸಬಹುದೆಂದು ಅವರು ಪ್ರಕಟೆಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್