ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಭೀಮೇಶ ಕವಿತಾಳ ಸೇರಿ ಅನೇಕರು ಕಾಂಗ್ರೆಸ್ ಸೇರ್ಪಡೆ ಸಿಂಧನೂರು

Advertisement
ಏಪ್ರಿಲ್.17.ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಬುಗೌಡ ಬಾದರ್ಲಿ ಹಾಗೂ ನಗರಸಭೆ ಸದಸ್ಯ ಶೇಖರಪ್ಪ ಗಿಣಿವಾರ ಸಮ್ಮುಖದಲ್ಲಿ ಬಹುಜನ ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಭೀಮೇಶ ಕವಿತಾಳ ಮತ್ತು ಕಾಂಗ್ರೆಸ್ ಯುವ ಮುಖಂಡ ಶರಣಪ್ಪ ಗಿಣಿವಾರ ನೇತೃತ್ವದಲ್ಲಿ ಅನೇಕ ಯುವಕರು ಮಂಗಳವಾರ ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಂಡರು.

ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಭೀಮೇಶ ಕವಿತಾಳ ಸೇರಿದಂತೆ ಯುವಕರಾದ ಮೌನೇಶ ಬುದ್ದಿನ್ನಿ, ಸಿದ್ದಪ್ಪ ಎಸ್, ವಿಜಯಕುಮಾರ ಅಂಬಾಮಠ, ಬಾಲಸ್ವಾಮಿ ಆದಿಮನಿ, ನಿಂಗಪ್ಪ ಆದಿಮನಿ, ನಾಗರಾಜ ಸುಕಾಲಪೇಟೆ, ಹನುಮಂತ ಕಟ್ಟಿಮನಿ, ಜಂಬಪ್ಪ ಕಟ್ಟಿಮನಿ, ದೇವಪ್ಪ ಕನ್ನಾಂಪೇಟೆ, ಹುಲುಗಪ್ಪ ಕಿಲ್ಲಾರಟ್ಟಿ, ಹುಸೇನಪ್ಪ ಮಸ್ಕಿ, ನಾಗಮೂರ್ತಿ ಬಡಿಗೇರ್, ಹನುಮಂತ ಆದಿಮನಿ, ಅಮರೇಶ ಕಿಲ್ಲಾರಟ್ಟಿ, ಪ್ರದೀಪ್, ಖಾಸಿಂಸಾಬ ಏಳುರಾಗಿಕ್ಯಾಂಪ್, ಅಮರಪ್ಪ ಕಿಲ್ಲಾರಟ್ಟಿ, ಚೌಡಪ್ಪ ಕನ್ನಾಂಪೇಟೆ, ಅಮರಪ್ಪ ಕಿಲ್ಲಾರಟ್ಟಿ, ಹನುಮಂತ ಯರದಿಹಾಳ, ರಾಮಣ್ಣ ಕನ್ನಾಂಪೇಟೆ, ದುರುಗಪ್ಪ, ಪವಾಡೆಪ್ಪ, ಹುಲುಗಪ್ಪ ಮತ್ತಿತರರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಬುಗೌಡ ಬಾದರ್ಲಿ ಹಾಗೂ ನಗರಸಭೆ ಸದಸ್ಯ ಶೇಖರಪ್ಪ ಗಿಣಿವಾರ ಎಲ್ಲರಿಗೂ ಪಕ್ಷದ ಶಾಲು ಹಾಕಿ ಸ್ವಾಗತಿಸಿಕೊಂಡು, ಪಕ್ಷ ಸಂಘಟನೆಗೆ ಒತ್ತು ಕೊಟ್ಟು ಈ ಬಾರಿ ತಾಲ್ಲೂಕಿನಲ್ಲಿ ಹಂಪನಗೌಡ ಬಾದರ್ಲಿ ಅವರನ್ನು ಗೆಲ್ಲಿಸಬೇಕು ಎಂದು ಹೇಳಿದರು.

ನಂತರ ಯುವ ಮುಖಂಡ ಭೀಮೇಶ ಕವಿತಾಳ ಮಾತನಾಡಿ ಸಿಂಧನೂರು ತಾಲ್ಲೂಕಿನಲ್ಲಿ ಶಾಸಕ ವೆಂಕಟರಾವ್ ನಾಡಗೌಡರು ಅಭಿವೃದ್ಧಿ ಮಾಡಿರುವುದಕ್ಕಿಂತ ಫರ್ಸಂಟೇಜ್ ಪಡೆದು ಕಳಪೆ ಕಾಮಗಾರಿ ಮಾಡಿರುವುದೇ ಹೆಚ್ಚು. ಆದ್ದರಿಂದ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷವನ್ನು ತಿರಸ್ಕರಿಸಿ, ಹಂಪನಗೌಡ ಬಾದರ್ಲಿ ಅವರಿಗೆ ಮತ ಹಾಕಿ ಗೆಲ್ಲಿಸಬೇಕು ಎಂದರು.

ಕಾಂಗ್ರೆಸ್ ಮುಖಂಡರಾದ ಎನ್.ಅಮರೇಶ, ಯುವ ಮುಖಂಡರಾದ ಶರಣಪ್ಪ ಗಿಣಿವಾರ, ಮೌನೇಶ ಶ್ರೀಪುರಂಜಂಕ್ಷನ್, ವಾಗೇಶ ಕೋಟೆ, ಬಸವರಾಜ ಪಾಟೀಲ್ ಇದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್