ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ ಸಮವಸ್ತ್ರ ವಿತರಣೆ

Advertisement
ಮೇ 31.ಸಿಂಧನೂರು 2023-24ನೇ ವರ್ಷದ ಶಾಲಾ ಶೈಕ್ಷಣಿಕ ಪ್ರಾರಂಭವನ್ನು ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ ಹಾಗೂ ಸಮವಸ್ತ್ರವನ್ನು ಶಾಲಾ SDMC ಹಾಗೂ ಶಿಕ್ಷಕ ವೃಂದದಿಂದ ವಿತರಿಸಲಾಯಿತು. SSLCಯಲ್ಲಿ ತಾಲೂಕಿಗೆ ಹೆಚ್ಚಿನ ಅಂಕಗಳನ್ನು ಗಳಿಸಿದ ಮಕ್ಕಳಿಗೆ ಶಾಲೆಯ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಎಸ್ ಡಿಎಂಸಿ ಸದಸ್ಯರಾದ, ಎಂ.ಗಂಗಾಧರ ಮಾತನಾಡಿ ಶಾಲೆಯ ಅಭಿವೃದ್ಧಿಗೆ ಸಂಬಂಧಿಸಿ ಮತ್ತು ಶೈಕ್ಷಣಿಕವಾಗಿ ಶಾರೀರಿಕವಾಗಿ, ಭೌದ್ಧಿಕವಾಗಿ ಸಬಲೀಕರಣಗೊಳಿಸಲು ಜೂನ್ 9-2023ರಂದು SDMC ಹಾಗೂ ಶಿಕ್ಷಕ ವೃಂದದವರನ್ನೊಳಗೊಂಡು ಸಭೆ ನಡೆಸಿಯಿಸಿ ಸುಧೀರ್ಘ ಚರ್ಚೆ ಮಾಡುವುದರ ಮೂಲಕ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ಮುಂದಾಗೋಣ. ಶಿಕ್ಷಕರ ಕೊರತೆ, ಕುಡಿಯುವ ನೀರು, ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಶ್ರಮ ಹಾಕೋಣ. ಮತ್ತು ವಿದ್ಯಾರ್ಥಿಗಳು ಚೆನ್ನಾಗಿ ಓದುವುದರ ಜೊತೆಗೆ ಶಾಲೆಗೆ ಮತ್ತು ಪಾಲಕರಿಗೆ ಕೀರ್ತಿ ತರಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ SDMC ಅಧ್ಯಕ್ಷರಾದ, ನೀಲಮ್ಮ ಅಲಬನೂರು ಮತ್ತು ಸದಸ್ಯರಾದ, ಮಂಜುನಾಥ, ಅರ್ಶದ್, ಅವರು ಶಾಲೆಯ ಅಭಿವೃದ್ಧಿ ಕುರಿತಾಗಿ ಎಲ್ಲರೂ ಕೈಜೋಡಿಸೋಣ. ಮಾದರಿ ಶಾಲೆಯನ್ನಾಗಿ ಮಾಡೋಣವೆಂದು ಮಾತನಾಡಿದರು. ಶಾಲೆಯ ಶಿಕ್ಷಕರಾದ, ಮಲ್ಲಪ್ಪ ಅವರು ಮಾತನಾಡಿ, ಶಾಲೆಯ ಗಂಭೀರ ಸಮಸ್ಯೆಗಳನ್ನು ಬಗೆಹರಿಸಲು ಶಾಲಾ ಮೇಲುಸ್ತುವಾರಿ ಸಮಿತಿ ಮುತುವರ್ಜಿ ವಹಿಸಬೇಕೆಂದು ಹೇಳಿದರು.

ಶಾಲೆಯ ಮುಖ್ಯ ಗುರುಗಳಾದ, ಜಂಬಣ್ಣ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಭೀಮರೆಡ್ಡಿ ಶಿಕ್ಷಕರು ಕಾರ್ಯಕ್ರಮದ ನಿರೂಪಣೆ ಮಾಡಿದರು. ಶಿಕ್ಷಕೀಯರಾದ, ಶ್ವೇತಾ, ಗಾಯಿತ್ರಿ, ಶ್ರೀದೇವಿ, ಹಾಗೂ ಶಿಕ್ಷಕರಾದ, ಜಡೇಶ, ಮೌನೇಶ, ಉಮೇಶ ಹಾಗೂ ಪಾಲಕರು ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನೀಯರು ಪಾಲ್ಗೊಂಡಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್