ಅವರು ಏ.12ರ ಬುಧವಾರ ಜಿಲ್ಲೆಯ ಮಾನವಿ ತಾಲೂಕಿನ ಹಿರೆಕೊಟ್ನೆಕಲ್ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಸಂಜೀವಿನಿ- ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಯೋಜನೆಯಡಿ ಸ್ವ ಸಹಾಯ ಗುಂಪಿನ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಅಂಗವಾಗಿ ಮತದಾರರಿಗೆ ಮತದಾನದ ಮಹತ್ವವನ್ನು ಅರಿಯಲು ಸ್ವಿಪ್ ಚಟುವಟಿಕೆಯಡಿ ಮತದಾರರ ಪ್ರತಿಜ್ಞೆ ವಿಧಿ ಬೋಧಿಸಲಾಯಿತು.
ದೇಶದ ಸುಭದ್ರ ಭವಿಷ್ಯಕ್ಕಾಗಿ ಪ್ರತಿಯೊಬ್ಬರು ತಪ್ಪದೇ ಮತದಾನ ಚಲಾಯಿಸಿ, ಪ್ರಜಾಪ್ರಭುತ್ವ ಗೆಲ್ಲಿಸಬೇಕು. ಮತದಾನ ದೇಶದ ಉತ್ತಮ ಭವಿಷ್ಯಕ್ಕೆ ಬುನಾದಿ. ಮತದಾನ ಮಾಡುವ ಮೂಲಕ ಆ ಬುನಾದಿಯನ್ನು ಸದೃಢಗೊಳಿಸಿ ಎಂದರು.

18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಪ್ರಜೆಯು ಕಡ್ಡಾಯವಾಗಿ ಮತದಾನ ಮಾಡಬೇಕು. ವಿಶೇಷ ಚೇತನರು, ಹಿರಿಯ ನಾಗರಿಕರು ಮತದಾನ ಮಾಡುವಂತೆ ಕರೆ ನೀಡಿದರು.
ವಲಯ ಮೇಲ್ವಿಚಾರಕ ಸೂರತ್ ಪ್ರಸಾದ್ ಗಟ್ಟು ಅವರು ಮಾತನಾಡಿ ಈ ವರ್ಷ ಚುನಾವಣಾ ಆಯೋಗವು ಮನೆಯಲ್ಲಿಯೇ ಇದ್ದು ಮತದಾನ ಮಾಡುವ ಅವಕಾಶವನ್ನು ವಿಶೇಷ ಚೇತನರಿಗೆ ಹಾಗೂ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು. ಎಲ್ಲಾ ಸ್ವ ಸಹಾಯ ಗುಂಪಿನ ಮಹಿಳೆಯರು ಮತದಾರರ ಪ್ರತಿಜ್ಞಾವಿಧಿಯನ್ನು ಪಾಲಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚೌಡಯ್ಯ, ಅನ್ನಪೂರ್ಣೇಶ್ವರಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಅಧ್ಯಕ್ಷ ಲಕ್ಷ್ಮೀದೇವಿ , ಕಾರ್ಯದರ್ಶಿ ಪುಷ್ಪಲತಾ, ಮುಖ್ಯ ಪುಸ್ತಕ ಬರಹಗಾರರು ಸುಮಾ, ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿ ಸಾವಿತ್ರಿ ಸೇರಿದಂತೆ ಮಹಿಳಾ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.













