ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮಾರ್ಚ್ 12ರಂದು ಉದ್ಯೋಗ ಮೇಳ – ನಿರುದ್ಯೋಗ ಯುವಕ ಯುವತಿಯರಿಗೆ ಅವಕಾಶ

Advertisement
BB NEWS KANNADA

ಸಿಂಧನೂರು, ಮಾ.9: ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಮಾರ್ಚ್ 12 ರಂದು ಸಿಂಧನೂರಿನಲ್ಲಿ ವಿಶೇಷ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಬಳ್ಳಾರಿಯ ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ನೋಬಲ್ ಡಿಗ್ರಿ ಕಾಲೇಜು ಸಿಂಧನೂರು ಸಂಯುಕ್ತ ಆಶ್ರಯದಲ್ಲಿ ಈ ಉದ್ಯೋಗ ಮೇಳ ನಡೆಯಲಿದೆ. ಆದರ್ಶ ಕಾಲೋನಿಯ ರೇಣುಕ ಆಸ್ಪತ್ರೆ ಎದುರುಗಡೆಯಲ್ಲಿರುವ ನೋಬಲ್ ಡಿಗ್ರಿ ಕಾಲೇಜು ಆವರಣದಲ್ಲಿ ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 2:00 ಗಂಟೆಯವರೆಗೆ ಮೇಳ ನಡೆಯಲಿದೆ.



18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದು. SSLC, PUC, ITI, ಡಿಪ್ಲೊಮಾ, BA, B.Com, BBA, BCA, BSc, ನರ್ಸಿಂಗ್, ಫಾರ್ಮಸಿ, B.Ed ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶಗಳು ಲಭ್ಯವಾಗಲಿವೆ. ಈ ಉದ್ಯೋಗ ಮೇಳದಲ್ಲಿ 20 ಕ್ಕೂ ಹೆಚ್ಚು ಉದ್ಯೋಗದಾತರು ಭಾಗವಹಿಸುವ ನಿರೀಕ್ಷೆ ಇದೆ.

ವಿಶೇಷವಾಗಿ ವಿಶೇಷಚೇತನರಿಗೆ ಸಹ ಈ ಮೇಳದಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸಲಾಗಿದ್ದು, ಎಲ್ಲಾ ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳು ಹಾಗೂ ಸ್ವವಿವರಗಳೊಂದಿಗೆ ಮೇಳಕ್ಕೆ ಆಗಮಿಸಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಆಯೋಜಕರು ಮನವಿ ಮಾಡಿದ್ದಾರೆ.



ಈ ಕುರಿತು ಮಾಹಿತಿ ನೀಡಿದ ಸಮರ್ಥನಂ ಅಂಗವಿಕಲರ ಸಂಸ್ಥೆಯ ಶಾಖೆಯ ಮುಖ್ಯಸ್ಥ ಭೀಮ ರೆಡ್ಡಿ, ನಿರುದ್ಯೋಗಿ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ

📞 9480812138 / 7676534241 / 9916758739 ಸಂಪರ್ಕಿಸಬಹುದು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್