ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮು- ಮೆಹಬೂಬ್ ನಗರ ರೈಲುಮಾರ್ಗ: ಸಿಂಧನೂರಿನಿಂದ- ಮಾನ್ವಿವರೆಗೆ ಭೂಸ್ವಾಧೀನ, ೦೩ ತಿಂಗಳಲ್ಲಿ ಪೂರ್ಣ- ರಾಜಾ ಅಮರೇಶ್ವರ ನಾಯಕ

Advertisement
ರಾಯಚೂರು,ಜೂ.೨೨ ಮುನಿರಾಬಾದ್- ಮಹೆಬೂಬನಗರ ರೈಲು ಮಾರ್ಗ ಯೋಜನೆಯು ಅತ್ಯಂತ ಹಳೆಯದಾಗಿದ್ದುದರಿಂದ ಹಲವು ಬಾರಿ ಕೊಪ್ಪಳ ಸಂಸದರೊಂದಿಗೆ ಖುದ್ದಾಗಿ ಕೇಂದ್ರ ರೈಲ್ವೆ ಸಚಿವರಿಗೆ ಭೇಟಿ ನೀಡಿ ಸದರಿ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ವಿನಂತಿಸಿದ್ದು ಮತ್ತು ಇದಕ್ಕೆ ಬೇಕಾಗುವ ಅನುದಾನವನ್ನು ಬಿಡುಗಡೆ ಮಾಡಲು ಒತ್ತಾಯಿಸಿದ್ದರಿಂದ ಕೇಂದ್ರ ಸರ್ಕಾರವು ಹಣ ಬಿಡುಗಡೆ ಮಾಡಿದೆ, ಇದರ ಪರಿಣಾಮವಾಗಿ ಸಿಂಧನೂರುವರೆಗೆ ಭೂಸ್ವಾಧೀನ, ರೈಲ್ವೆ ಕಾಮಗಾರಿ ಪೂರ್ಣಗೊಂಡು, ರೈಲ್ವೆ ನಿಲ್ದಾಣವು ಉದ್ಘಾಟನೆಗೆ ಸಿದ್ದಗೊಂಡಿದೆ ಎಂದು ಸಂಸದರಾದ ರಾಜಾ ಅಮರೇಶ್ವರ ನಾಯಕ ಅವರು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಸಿಂಧನೂರು ತಾಲ್ಲೂಕಿನ ಸುಲ್ತಾನಪುರದಿಂದ ಮಾನ್ವಿ ತಾಲ್ಲೂಕಿನ ಕಲ್ಲೂರುವರೆಗೆ ಭೂಸ್ವಾಧೀನ ಪ್ರ‍್ರಕ್ರಿಯೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಮಾನ್ವಿ ತಾಲ್ಲೂಕಿನಲ್ಲಿ ಈಗಾಗಲೇ ೪೭೩.೧೫ ಗುಂಟೆ ಸ್ವಾಧೀನಪಡಿಸಿಕೊಳ್ಳಲಾಗಿದೆ. ಅದರಲ್ಲಿ ಮಾನ್ವಿ ತಾಲ್ಲೂಕಿನಲ್ಲಿ ೮೮.೧೪ ಎಕರೆ ಐತೀರ್ಪು ಅನುಮೋದನೆಯಾಗಿದ್ದು, ೩೨.೨೪ ಎಕರೆ ಸರ್ಕಾರಕ್ಕೆ ಅನುಮೋದನೆಗೆ ಸಲ್ಲಿಸಿದೆ.

ಉಳಿದ ೩೫೨.೧೭ ಎಕರೆ ಅಂತಿಮ ಐತೀರ್ಪು ರಚನೆಗೆ ಸಿದ್ದವಾಗಿದ್ದು ಹಾಗೂ ಈ ಸ್ವಾಧೀನಪಡಿಸಿಕೊಂಡ ಜಮೀನುಗಳ ಭೂಪರಿಹಾರ ಬೇಡಿಕೆಗೆ ಇಲಾಖೆಯಿಂದ ಈಗಾಗಲೇ ರೂ.೨೦೪,೫೪,೪೦,೮೮೮ /- (ಎರಡು ನೂರಾ ನಾಲ್ಕು ಕೋಟಿ ಐವತ್ತು ನಾಲ್ಕು ಲಕ್ಷ, ನಲವತ್ತು ಸಾವಿರದ ಎಂಟು ನೂರಾ ಎಂಬತ್ತೆಂಟು ರೂಪಾಯಿಗಳು) ಬಿಡುಗಡೆಯಾಗಿ ಹಣ ಸಿದ್ದವಿರುತ್ತದೆ. ಈ ಎಲ್ಲಾ ಪ್ರಕ್ರಿಯೆಯು ಸುಮಾರು ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಈ ಭಾಗದ ರೈಲ್ವೆ ಕಾಮಗಾರಿಗಾಗಿ ರೈಲ್ವೆ ಇಲಾಖೆಯಿಂದ ಈಗಾಗಲೇ ಹಿರೇಕೊಟ್ನೆಕಲ್ ವರೆಗೆ ಟೆಂಡರ್ ಪ್ರಕ್ರಿಯೆ ನಡೆದಿದ್ದು ಶೀಘ್ರ ಕಾಮಗಾರಿ ಪ್ರಾರಂಭಿಸಲಾಗುವುದೆಂದು ಸಂಸದರಾದ ರಾಜಾ ಅಮರೇಶ್ವರ ನಾಯಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್