ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮು- ಮೆಹಬೂಬ್ ನಗರ ರೈಲುಮಾರ್ಗ: ಸಿಂಧನೂರಿನಿಂದ- ಮಾನ್ವಿವರೆಗೆ ಭೂಸ್ವಾಧೀನ, ೦೩ ತಿಂಗಳಲ್ಲಿ ಪೂರ್ಣ- ರಾಜಾ ಅಮರೇಶ್ವರ ನಾಯಕ

Advertisement
ರಾಯಚೂರು,ಜೂ.೨೨ ಮುನಿರಾಬಾದ್- ಮಹೆಬೂಬನಗರ ರೈಲು ಮಾರ್ಗ ಯೋಜನೆಯು ಅತ್ಯಂತ ಹಳೆಯದಾಗಿದ್ದುದರಿಂದ ಹಲವು ಬಾರಿ ಕೊಪ್ಪಳ ಸಂಸದರೊಂದಿಗೆ ಖುದ್ದಾಗಿ ಕೇಂದ್ರ ರೈಲ್ವೆ ಸಚಿವರಿಗೆ ಭೇಟಿ ನೀಡಿ ಸದರಿ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ವಿನಂತಿಸಿದ್ದು ಮತ್ತು ಇದಕ್ಕೆ ಬೇಕಾಗುವ ಅನುದಾನವನ್ನು ಬಿಡುಗಡೆ ಮಾಡಲು ಒತ್ತಾಯಿಸಿದ್ದರಿಂದ ಕೇಂದ್ರ ಸರ್ಕಾರವು ಹಣ ಬಿಡುಗಡೆ ಮಾಡಿದೆ, ಇದರ ಪರಿಣಾಮವಾಗಿ ಸಿಂಧನೂರುವರೆಗೆ ಭೂಸ್ವಾಧೀನ, ರೈಲ್ವೆ ಕಾಮಗಾರಿ ಪೂರ್ಣಗೊಂಡು, ರೈಲ್ವೆ ನಿಲ್ದಾಣವು ಉದ್ಘಾಟನೆಗೆ ಸಿದ್ದಗೊಂಡಿದೆ ಎಂದು ಸಂಸದರಾದ ರಾಜಾ ಅಮರೇಶ್ವರ ನಾಯಕ ಅವರು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಸಿಂಧನೂರು ತಾಲ್ಲೂಕಿನ ಸುಲ್ತಾನಪುರದಿಂದ ಮಾನ್ವಿ ತಾಲ್ಲೂಕಿನ ಕಲ್ಲೂರುವರೆಗೆ ಭೂಸ್ವಾಧೀನ ಪ್ರ‍್ರಕ್ರಿಯೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಮಾನ್ವಿ ತಾಲ್ಲೂಕಿನಲ್ಲಿ ಈಗಾಗಲೇ ೪೭೩.೧೫ ಗುಂಟೆ ಸ್ವಾಧೀನಪಡಿಸಿಕೊಳ್ಳಲಾಗಿದೆ. ಅದರಲ್ಲಿ ಮಾನ್ವಿ ತಾಲ್ಲೂಕಿನಲ್ಲಿ ೮೮.೧೪ ಎಕರೆ ಐತೀರ್ಪು ಅನುಮೋದನೆಯಾಗಿದ್ದು, ೩೨.೨೪ ಎಕರೆ ಸರ್ಕಾರಕ್ಕೆ ಅನುಮೋದನೆಗೆ ಸಲ್ಲಿಸಿದೆ.

ಉಳಿದ ೩೫೨.೧೭ ಎಕರೆ ಅಂತಿಮ ಐತೀರ್ಪು ರಚನೆಗೆ ಸಿದ್ದವಾಗಿದ್ದು ಹಾಗೂ ಈ ಸ್ವಾಧೀನಪಡಿಸಿಕೊಂಡ ಜಮೀನುಗಳ ಭೂಪರಿಹಾರ ಬೇಡಿಕೆಗೆ ಇಲಾಖೆಯಿಂದ ಈಗಾಗಲೇ ರೂ.೨೦೪,೫೪,೪೦,೮೮೮ /- (ಎರಡು ನೂರಾ ನಾಲ್ಕು ಕೋಟಿ ಐವತ್ತು ನಾಲ್ಕು ಲಕ್ಷ, ನಲವತ್ತು ಸಾವಿರದ ಎಂಟು ನೂರಾ ಎಂಬತ್ತೆಂಟು ರೂಪಾಯಿಗಳು) ಬಿಡುಗಡೆಯಾಗಿ ಹಣ ಸಿದ್ದವಿರುತ್ತದೆ. ಈ ಎಲ್ಲಾ ಪ್ರಕ್ರಿಯೆಯು ಸುಮಾರು ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಈ ಭಾಗದ ರೈಲ್ವೆ ಕಾಮಗಾರಿಗಾಗಿ ರೈಲ್ವೆ ಇಲಾಖೆಯಿಂದ ಈಗಾಗಲೇ ಹಿರೇಕೊಟ್ನೆಕಲ್ ವರೆಗೆ ಟೆಂಡರ್ ಪ್ರಕ್ರಿಯೆ ನಡೆದಿದ್ದು ಶೀಘ್ರ ಕಾಮಗಾರಿ ಪ್ರಾರಂಭಿಸಲಾಗುವುದೆಂದು ಸಂಸದರಾದ ರಾಜಾ ಅಮರೇಶ್ವರ ನಾಯಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಕೆಲ ಕಪ್ಪು ಕುರಿಗಳಿಂದ ಪೊಲೀಸ್ ಇಲಾಖೆಗೆ ಕಳಂಕ!ತುಂಗಭದ್ರಾ ನೂತನ ಗೇಟ್‌ಗಳ ಉದ್ಘಾಟನೆ: ಆಂಧ್ರ-ತೆಲಂಗಾಣ ಮುಖ್ಯಮಂತ್ರಿಗಳಿಗೆ ಖುದ್ದು ಆಹ್ವಾನ ನೀಡಲು ಶಾಸಕರ ನಿಯೋಗ ರಚನೆಕುಡಿಯುವ ನೀರಿನ ಸಮಸ್ಯೆ ಎದುರಾಗುವ ಪ್ರದೇಶಗಳ ಮಾಹಿತಿ ನೀಡಿ DC ಪೂವಿತಾ ಎಸ್. ಸೂಚನೆಮ.ಕ.ಸಂಸ್ಥೆಗಳ ಪರಿಶೀಲನೆ ನಡೆಸಿದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಸತ್ಯ ನಾರಾಯಣ ಶೆಟ್ಟಿನವಲಿ ಸಮಾನಾಂತರ ಜಲಾಶಯಕ್ಕೆ ಡಿಕೆಶಿ ಗ್ರೀನ್ ಸಿಗ್ನಲ್..! ಬಸನಗೌಡ ಬಾದರ್ಲಿರಾಯಚೂರಿನಲ್ಲಿ ಲೋಕಾಯುಕ್ತ ದಿಡೀರ್ ದಾಳಿ: DDPI ಕಚೇರಿಯಲ್ಲಿ ಪರಿಶೀಲನೆ12 ವರ್ಷದ ಬಾಲಕನನ್ನು ಕಸಿದ ರೇಬೀಸ್: ಆರೋಗ್ಯ ಇಲಾಖೆಗೆ ನಾಚಿಕೆ ಆಗಬೇಕು!ಮೊಹರಂ ಹಬ್ಬ: ಜಿಲ್ಲೆಯ 29 ಗ್ರಾಮಗಳಲ್ಲಿ ಸಾರ್ವಜನಿಕ ಆಚರಣೆ, ಮೆರವಣಿಗೆ ನಿಷೇಧ‘ಕರ್ತವ್ಯ’ ಎಐ ವ್ಯವಸ್ಥೆಗೆ ಭಾರಿ ಸ್ಪಂದನೆ: ವಾರದಲ್ಲೇ 55 ಸಾವಿರಕ್ಕೂ ಹೆಚ್ಚು ಹೊಸ ನೋಂದಣಿರಕ್ತದಾನದ ಮಹತ್ವ ತಿಳಿಸುವ ಕಾರ್ಯವಾಗಲಿ: ಎಸ್ಪಿ ಅರುಣಾಂಗ್ಷು ಗಿರಿಮಾನ್ಯ ಜಿಲ್ಲಾಧಿಕಾರಿಗಳೇ... ಅಧಿಕಾರಿಗಳ ವರದಿಗಿಂತ ರೋಗಿಗಳ ಕಣ್ಣೀರು ಹೆಚ್ಚು ಸತ್ಯ ಹೇಳುತ್ತದೆ!ಮಹತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಗ್ರಾ.ಪಂ.ಲಕ್ಷಾಂತರ ರೂಪಾಯಿ ದುಬ್ಬಳಕ್ಕೆ ಆರೋಪ ಸಮಗ್ರ ತನಿಖೆಗೆ ದಲಿತ ಸಂಘಟನೆ ಆಗ್ರಹ ಮನೆಯೊಳಗೇ ಮರಣದ ನರ್ತನ!"ರೆಫರಲ್ ರಾಜಕಾರಣಕ್ಕೆ ಬಲಿಯಾಗುತ್ತಿವೆಯೇ ನವಜಾತ ಶಿಶುಗಳ ಜೀವಗಳು?"