ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮೆದಿಕಿನಾಳ ಗ್ರಾಮದ ಬಾಲಕರ ವಸತಿ ನಿಲಯದಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ಮಾಹಿತಿ

Advertisement


ಬಡವರ ಬಾರುಕೋಲು ಸುದ್ದಿ
ಮಸ್ಕಿ :
ತಾಲೂಕಿನ ಮೆದಿಕಿನಾಳ ಗ್ರಾಮದ ಡಿ.ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಏರ್ಪಡಿಸಿದ್ದ ಆರೋಗ್ಯ ಮತ್ತು ಸ್ವಚ್ಛತೆ ಕಾರ್ಯಕ್ರಮದ ಅಡಿಯಲ್ಲಿ ಕ್ಯಾನ್ಸರ್ ರೋಗದ ಮಾಹಿತಿ ಕುರಿತು ಬಳ್ಳಾರಿ ಧರ್ಮ ಪ್ರಾಂತ ಅಭಿವೃದ್ಧಿ ಸಂಸ್ಥೆಯ ಸ್ಪರ್ಶ ಯೋಜನಾ ಸಂಯೋಜಕರಾದ MD ಅರಳಪ್ಪ ನವರು ಮಾತನಾಡಿ ಪ್ರತಿಯೊಬ್ಬ ವ್ಯಕ್ತಿ ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಿಕೊಳ್ಳಬೇಕು ಎಂದು ಕರೆ ನೀಡಿದರು ಹಾಗೂ ಪ್ರತಿಯೊಬ್ಬರು ಜೀವನ ಶೈಲಿಯನ್ನು ಬದಲಾಯಿಸಿಕೊಂಡು ಕ್ಯಾನ್ಸರ್ ರೋಗದಿಂದ ದೂರವಿರಿ ಎಂದು ನುಡಿದರು.

ಇನ್ನೂ ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದ ಸಾವಯವ ಕೃಷಿಯ ಉಜ್ಜೀವನ ಯೋಜನೆಯ ಸಂಯೋಜಕರಾದ ಶಾಂತಪ್ಪ ಸೋಮನಮರಡಿ ಯವರು ಮಾತನಾಡಿ ಕ್ಯಾನ್ಸರ್ ರೋಗದ ಉಗಮ,ಲಕ್ಷಣಗಳು,ಇದರಿಂದ ನಮ್ಮ ಕುಟುಂಬದ ಮೇಲಾಗುವ ಆರ್ಥಿಕ ಸಮಸ್ಯೆಯ ಬಗ್ಗೆ,ಹಾಗೂ ಇದನ್ನು ತಡೆಗಟ್ಟುವ ಕಾರ್ಯತಂತ್ರಗಳು ಹೇಗೆ ಎನ್ನುವುದರ ಕುರಿತು ಮಾಹಿತಿ ನೀಡಿ ನಾವು ಪ್ರತಿದಿನ ಬೇಳೆ ಕಾಳುಗಳು,ತರಕಾರಿ ಸೇವನೆಯ ಆಹಾರ ಮಾಡಿದರೆ ಒಳ್ಳೆಯದು ಎಂದು ಮಾಹಿತಿ ನೀಡಿದರು.

ಹಾಗೂ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಸತಿ ನಿಲಯದ ಮೇಲ್ವಿಚಾರಕರಾದ ಉದಯಕುಮಾರ ರವರು ಆರೋಗ್ಯ ಮತ್ತು ಸ್ವಚ್ಛತೆಯ ಕುರಿತು ಮಾತನಾಡಿ ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ಕಾಪಾಡಿಕೊಂಡು ಉತ್ತಮವಾದ ಆಹಾರವನ್ನು ಸೇವಿಸಿದಾಗ ಮಾತ್ರ ನಮ್ಮ ಆರೋಗ್ಯ ಚೆನ್ನಾಗಿರಲು ಸಾಧ್ಯ ಹಾಗೂ ಇದರಿಂದ ನಮ್ಮ ಕುಟುಂಬ ಎಲ್ಲ ರಂಗಗಳಲ್ಲಿ ಮುಂದೆ ಬರಲು ಸಾಧ್ಯ ಎಂದು ಸಲಹೆ ನೀಡಿದರು.

ಇದೇ ಸಂದರ್ಭದ ಈ ಕಾರ್ಯಕ್ರಮದಲ್ಲಿ ವಸತಿ ನಿಲಯದ ಸಿಬ್ಬಂದಿಗಳಾದ ಚನ್ನಪ್ಪ,ಮಹಾಂತೇಶ,ಶಿವಶರಣ,ರೇಣುಕಮ್ಮ,ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ : ಎಚ್.ಕೆ.ಬಡಿಗೇರ್
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಕೆಲ ಕಪ್ಪು ಕುರಿಗಳಿಂದ ಪೊಲೀಸ್ ಇಲಾಖೆಗೆ ಕಳಂಕ!ತುಂಗಭದ್ರಾ ನೂತನ ಗೇಟ್‌ಗಳ ಉದ್ಘಾಟನೆ: ಆಂಧ್ರ-ತೆಲಂಗಾಣ ಮುಖ್ಯಮಂತ್ರಿಗಳಿಗೆ ಖುದ್ದು ಆಹ್ವಾನ ನೀಡಲು ಶಾಸಕರ ನಿಯೋಗ ರಚನೆಕುಡಿಯುವ ನೀರಿನ ಸಮಸ್ಯೆ ಎದುರಾಗುವ ಪ್ರದೇಶಗಳ ಮಾಹಿತಿ ನೀಡಿ DC ಪೂವಿತಾ ಎಸ್. ಸೂಚನೆಮ.ಕ.ಸಂಸ್ಥೆಗಳ ಪರಿಶೀಲನೆ ನಡೆಸಿದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಸತ್ಯ ನಾರಾಯಣ ಶೆಟ್ಟಿನವಲಿ ಸಮಾನಾಂತರ ಜಲಾಶಯಕ್ಕೆ ಡಿಕೆಶಿ ಗ್ರೀನ್ ಸಿಗ್ನಲ್..! ಬಸನಗೌಡ ಬಾದರ್ಲಿರಾಯಚೂರಿನಲ್ಲಿ ಲೋಕಾಯುಕ್ತ ದಿಡೀರ್ ದಾಳಿ: DDPI ಕಚೇರಿಯಲ್ಲಿ ಪರಿಶೀಲನೆ12 ವರ್ಷದ ಬಾಲಕನನ್ನು ಕಸಿದ ರೇಬೀಸ್: ಆರೋಗ್ಯ ಇಲಾಖೆಗೆ ನಾಚಿಕೆ ಆಗಬೇಕು!ಮೊಹರಂ ಹಬ್ಬ: ಜಿಲ್ಲೆಯ 29 ಗ್ರಾಮಗಳಲ್ಲಿ ಸಾರ್ವಜನಿಕ ಆಚರಣೆ, ಮೆರವಣಿಗೆ ನಿಷೇಧ‘ಕರ್ತವ್ಯ’ ಎಐ ವ್ಯವಸ್ಥೆಗೆ ಭಾರಿ ಸ್ಪಂದನೆ: ವಾರದಲ್ಲೇ 55 ಸಾವಿರಕ್ಕೂ ಹೆಚ್ಚು ಹೊಸ ನೋಂದಣಿರಕ್ತದಾನದ ಮಹತ್ವ ತಿಳಿಸುವ ಕಾರ್ಯವಾಗಲಿ: ಎಸ್ಪಿ ಅರುಣಾಂಗ್ಷು ಗಿರಿಮಾನ್ಯ ಜಿಲ್ಲಾಧಿಕಾರಿಗಳೇ... ಅಧಿಕಾರಿಗಳ ವರದಿಗಿಂತ ರೋಗಿಗಳ ಕಣ್ಣೀರು ಹೆಚ್ಚು ಸತ್ಯ ಹೇಳುತ್ತದೆ!ಮಹತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಗ್ರಾ.ಪಂ.ಲಕ್ಷಾಂತರ ರೂಪಾಯಿ ದುಬ್ಬಳಕ್ಕೆ ಆರೋಪ ಸಮಗ್ರ ತನಿಖೆಗೆ ದಲಿತ ಸಂಘಟನೆ ಆಗ್ರಹ ಮನೆಯೊಳಗೇ ಮರಣದ ನರ್ತನ!"ರೆಫರಲ್ ರಾಜಕಾರಣಕ್ಕೆ ಬಲಿಯಾಗುತ್ತಿವೆಯೇ ನವಜಾತ ಶಿಶುಗಳ ಜೀವಗಳು?"