ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮೊಹರಂ ಹಬ್ಬವನ್ನು ಶಾಂತಿಯುವಾಗಿ ಆಚರಿಸಿ: ಎಸ್.ಪಿ ನಿಖಿಲ್

Advertisement
ರಾಯಚೂರು,ಜು.೨೪ ಜಿಲ್ಲೆಯಾದ್ಯಂತ ಭಾವೈಕ್ಯತೆಯನ್ನು ಸಾರುವ ಮೊಹರಂ ಹಬ್ಬವನ್ನು ಜು.೧೯ ರಿಂದ ೨೯ ರವರಿಗೆ ಒಟ್ಟು ೧೦ ದಿನಗಳ ಕಾಲ ಅತಿ ವಿಜೃಂಭಣೆಯಿಂದ ಆಚರಿಸುತ್ತಿದ್ದು, ಒಟ್ಟು ೦೭ ತಾಲೂಕುಗಳ ವಿವಿಧ ನಗರ, ಪಟ್ಟಣ, ಗ್ರಾಮಗಳು ಸೇರಿದಂತೆ ಒಟ್ಟು ೬೪೪ ಸ್ಥಳಗಳಲ್ಲಿ ಪಂಜಾಗಳನ್ನು ಪ್ರತಿಷ್ಠಾಪನೆ ಮಾಡಿದ್ದು, ಜು.೨೮ ರಂದು ಖತ್ತಲ್ ರಾತ್ರಿ ಆಲಂ ಪಂಚಾಗಳ ಸವಾರಿ, ಜು.೨೯ರಂದು ಮೊಹರಂ ಹಬ್ಬದ ಕೊನೆಯ ದಿನದ ದಫನ್ ಮೆರವಣಿಗೆಗಳು ನಡೆಯಲಿದ್ದು ಸಾರ್ವಜನಿಕರು ಈ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ರಾಯಚೂರು ಜಿಲ್ಲೆಯ ಸಿಂಧನೂರು, ಮಸ್ಕಿ, ಲಿಂಗಸೂಗೂರು ತಾಲೂಕುಗಳ ಒಟ್ಟು ೧೯ ಗ್ರಾಮಗಳಲ್ಲಿ ಈ ಹಿಂದೆ ಮೊಹರಂ ಹಬ್ಬದ ಸಂಧರ್ಭದಲ್ಲಿ ಅಹಿತಕರ ಘಟನೆಗಳು ನಡೆದು ಪ್ರಕರಣಗಳು ದಾಖಲಾದ ಹಾಗೂ ಪ್ರಸ್ತುತ ವರ್ಷವು ಸಹ ಮೊಹರಂ ಹಬ್ಬ ನಡೆದ್ದಲ್ಲಿ ಗಲಾಟೆಗಳು ನಡೆದು ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗಬಹುದಾದ ೧೮ ಹಳ್ಳಿಗಳು ಹಾಗೂ ಸಿರವಾರ ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮುಂಜಾಗ್ರತ ಕ್ರಮವಾಗಿ ಜಿಲ್ಲಾಧಿಕಾರಿಗಳು ಸಾರ್ವಜನಿಕವಾಗಿ ಜನರು ಗುಂಪು ಗುಂಪಾಗಿ ಸೇರಿ ಮೊಹರಂ ಹಬ್ಬವನ್ನು ಆಚರಿಸುವುದನ್ನು ಹಾಗೂ ಮೆರವಣಿಗೆ ಮಾಡುವುದನ್ನು ನಿಷೇಧಿಸಿ ಆದೇಶವನ್ನು ಹೊರಡಿಸಿರುತ್ತಾರೆ.

ಮೊಹರಂ ಹಬ್ಬದ ಸಮಯದಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದಜು.೨೮ ರಂದು ಬೆಳಿಗ್ಗೆ ೦೬.೦೦ ಗಂಟೆಯಿಂದ ಜು.೩೦ರ ಬೆಳಿಗ್ಗೆ ೦೬.೦೦ ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ, ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿರುತ್ತಾರೆ.

ರಾಯಚೂರು ಜಿಲ್ಲೆಯಲ್ಲಿ ಮೊಹರಂ ಹಬ್ಬದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಮೊಹರಂ ಬಂದೋಬಸ್ತ್ ಕುರಿತು ಎ.ಎಸ್.ಪಿ-೦೧, ಡಿ.ಎಸ್.ಪಿ-೦೪, ಪಿಐ/ಸಿ.ಪಿ.ಐ-೧೪, ಪಿ.ಎಸ್.ಐ-೪೧, ಎ.ಎಸ್.ಐ-೧೦೦, ಹೆಚ್.ಸಿ/ಪಿಸಿ-೯೦೦ ಹಾಗೂ ೧೦೦ ಜನ ಗೃಹ ರಕ್ಷಕ ಸಿಬ್ಬಂದಿ, ೯೯ ಡಿ.ಎ.ಆರ್.ಪಾರ್ಟಿ ಹಾಗೂ ೦೪ ಕೆ.ಎಸ್.ಆರ್.ಪಿ. ತುಕಡಿಗಳನ್ನು ನಿಯೋಜನೆ ಮಾಡಿದ್ದು ಇರುತ್ತದೆ. ಸಾರ್ವಜನಿಕರು ಶಾಂತಿಯುತವಾಗಿ ಮೊಹರಂ ಹಬ್ಬವನ್ನು ಆಚರಿಸುವ ಮೂಲಕ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಅವರು ಪತ್ರಿಕಾ ಹೇಳಿಕೆಯಲ್ಲಿ ಕೋರಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್