ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ರೆಡಿಯೋಲಾಜಿಸ್ಟ್, ಸೋನಾಲಾಜಿಸ್ಟನಂತಹ ಪರೀಕ್ಷೆ ಕೈಗೊಳ್ಳಲು ನೊಂದಣಿ ಕಡ್ಡಾಯ: ಡಾ.ಸುರೇಂದ್ರಬಾಬು

ರಾಯಚೂರು,ಮಾ.30,(ಕ.ವಾ):- ವೈದ್ಯಕೀಯ ತಳಿಶಾಸ್ತ್ರಜ್ಞ, ಸ್ತ್ರೀರೋಗ ತಜ್ಞ, ನೋಂದಾಯಿತ ವೈದ್ಯಕೀಯ ವೃತ್ತಿ ನಿರತರು ರೆಡಿಯೋಲಾಜಿಸ್ಟ್, ಸೋನಾಲಾಜಿಸ್ಟ್‍ನಂತಹ ಪರೀಕ್ಷೆ ಕೈಗೊಳ್ಳಲು ನೊಂದಣಿ ಕಡ್ಡಾಯವೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರಬಾಬು ಅವರು ಹೇಳಿದರು.

ಅವರು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಪಿ.ಸಿ.ಪಿ.ಎನ್.ಡಿ.ಟಿ ಜಿಲ್ಲಾ ಸಲಹಾ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ನೋಂದಾಯಿತ ವೈದ್ಯಕೀಯ ವೃತ್ತಿ ನಿರತರು ರೆಡಿಯೋಲಾಜಿಸ್ಟ್, ಸೋನಾಲಾಜಿಸ್ಟ್‍ನಂತಹ ಪರೀಕ್ಷೆ ಕೈಗೊಳ್ಳಲು ನೊಂದಣಿ ಕಡ್ಡಾಯವಾಗಿದ್ದು, ಈ ನಿಟ್ಟಿನಲ್ಲಿ ಒಟ್ಟು 9 ಅರ್ಜಿಗಳು ಬಂದಿದ್ದು, ಅದರಲ್ಲಿ 6 ಅರ್ಜಿಗಳು ನವೀಕರಣಕ್ಕೆ ಅರ್ಜಿಯನ್ನು ಸಲ್ಲಿಸಿವೆ. ಮೂರು ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದರು.

ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆಯನ್ವಯ ಜೆನಿಟಿಕ್ ಸಮಾಲೋಚನಾ ಕೇಂದ್ರಗಳು ಪ್ರಯೋಗಾಲಯಗಳು ಮತ್ತು ಚಿಕಿತ್ಸಾ ಕೇಂದ್ರಗಳನ್ನು ಸಂಬಂಧಿಸಿದ ಸುಕ್ಷಮ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೊಂದಣಿ ಮಾಡಿಸಲಾಬೇಕು ಜೊತೆಗೆ ಯಾವುದೇ ವ್ಯಕ್ತಿ ಯಾವುದೇ ಚಿಕಿತ್ಸಾಲಯಗಳನ್ನು ಅತ್ಯಾಧುನಿಕ ಯಂತ್ರೋಪಕರಣಗಳಾದ ಅಲ್ಟ್ರಾಸೋನೋಗ್ರಾಫಿ, ಇಮೇಜ್ ಮಿಷನ್, ಸ್ಕ್ಯಾನರ್ ಸೇರಿದಂತೆ ಇನ್ನಿತರ ಯಂತ್ರೋಪಕರಣಗಳನ್ನು ಸ್ಥಾಪಿಸಬೇಕಾದರೆ ಕಡ್ಡಾಯವಾಗಿ ನೊಂದಣಿಯಾಗಲೇಬೇಕು ಎಂದು ಹೇಳಿದರು.



ಈ ನಿಯಮಗಳನ್ನು ಮೀರಿ ಯಾವುದೇ ವ್ಯಕ್ತಿಯು ಕಾಯ್ದೆಯ ಆಶಯಗಳ ವಿರುದ್ಧ ನಡೆದುಕೊಂಡಲ್ಲಿ ದಂಡ ವಿಧಿಸಿ ಶಿಕ್ಷೆ ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಲಹಾ ಸಮಿತಿಯ ಅಧ್ಯಕ್ಷ ಡಾ.ಶಿವಪ್ಪ ಮಾಲಿಪಾಟೀಲ್, ಜಿಲ್ಲಾ ಕಾರ್ಯದರ್ಶಿ ಶಿವಗಿರೇಶ, ಸದಸ್ಯರಾದ ಲಲಿತಾ ನಾಲ್ವಾಡೆ, ರಂಗಲಿಂಗನಗೌಡ, ಲಿಂಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
 ಸಿಂಧನೂರಿನ ಯುವಕ ಕಾಣೆಯಾದ ಪ್ರಕರಣ: ಪೋಷಕರ ಕಣ್ಣೀರಿನ ಮನವಿಸುಳ್ಳು ದೂರುಗಳಿಗೆ ಕಡಿವಾಣ: 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು“50 ವರ್ಷಗಳ ಬದುಕಿಗೆ 15 ದಿನಗಳ ಗಡುವು: ಗಾಂಧಿನಗರದ 80 ಬಡ ಕುಟುಂಬಗಳ ಮೇಲೆ ಜೆಸಿಬಿ ನೆರಳು!”ಪೊಲೀಸ್ ಪೇದೆ ಮದುವೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಮಾನವೀಯತೆಗೆ ಮಾದರಿ ಘಟನೆನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತ!ಬರುವ ದಿನಗಳು ಅಶಾಂತಿ ಸೂಚನೆ – ಅನ್ನ ನೀರಿಗೆ ಆಹಾಕಾರ: ಕೋಡಿಮಠ ಸ್ವಾಮೀಜಿ ಭವಿಷ್ಯಚಲಿಸುತ್ತಿದ್ದ ಬಸ್ ಏಕಾಏಕಿ ಜಮೀನಿಗೆ ನುಗ್ಗಿದ ಘಟನೆ – ನೂರಕ್ಕೂ ಹೆಚ್ಚು ಪ್ರಯಾಣಿಕರು ಪಾರು!ಕಲಮಂಗಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಭರ್ಜರಿ ಸಾಧನೆ“ಬಿಸಿಲಿನ ಅಬ್ಬರ: ಕರ್ನಾಟಕಲ್ಲಿ ಲಾಕ್‌ಡೌನ್ ಬರುತ್ತಾ..?”625ಕ್ಕೆ 625: ರಾಯಚೂರು ಸುಖದೇವ್ ಸಾಧನೆಲೋಕಾಯುಕ್ತ ಬಲೆಗೆ ಬಿದ್ದ ಕೆರೂರ ಪಿ.ಎಸ್.ಐ. ಭೀಮಪ್ಪ ರಬಕವಿ80 ಅಡಿ ಕೆಳಗೆ ನೀರು: ಪೈದೊಡ್ಡಿ ವೃದ್ಧನ ಗೋಳು ಕೇಳುವರು ಯಾರು “ಪುರಾಣದ ಬಸವಣ್ಣ ಅಲ್ಲ — ಸಮಾಜ ಬದಲಿಸಿದ ಮನುಷ್ಯ ಬಸವಣ್ಣ”