ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವನಸಿರಿ ಫೌಂಡೇಶನ್ ವತಿಯಿಂದ ಶರಣಬಸವ ಕಾನಿಹಾಳ ಹುಟ್ಟು ಹಬ್ಬದ ಅಂಗವಾಗಿ 101ಸಸಿಗಳು ವಿತರಣೆ

Advertisement
ಏ 06.ಸಿಂಧನೂರು ತಾಲೂಕಿನ ಕಾನಿಹಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಶರಣಬಸವ ಕಾನಿಹಾಳ ಅವರ ಹುಟ್ಟು ಹಬ್ಬದ ಅಂಗವಾಗಿ 101 ಸಸಿಗಳ ವಿತರಣೆ ಮತ್ತು ನೋಟ್ ಬುಕ್ ಕಿಟ್ಟುಗಳನ್ನು ಶಾಲಾ ಮಕ್ಕಳಿಗೆ ವಿತರಿಸಲಾಯಿತು.



ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ತಾಲೂಕ ಅದ್ಯಕ್ಷ ರಮೇಶ ಕುನ್ನಟಗಿ ಅವರು ಮಾತನಾಡಿ ಈ ಅಧುನಿಕ ದಿನಗಳಲ್ಲಿ ಶುದ್ಧಗಾಳಿ ಪಡೆದುಕೊಳ್ಳಬೇಕಾದರೆ ಪ್ರತಿಯೊಬ್ಬ ವ್ಯಕ್ತಿಯೂ ತಮ್ಮ ಹುಟ್ಟುಹಬ್ಬವನ್ನು ಒಂದೊಂದು ಸಸಿ ನೆಡುವ ಮೂಲಕ ಆಚರಿಸಿಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ಪೀಳಿಗೆಗೆ ಗಾಳಿಯನ್ನು ಹಣದಿಂದ ಖರೀದಿಸುವ ದಿನಗಳು ಸಮೀಪಿಸಬಹುದು ಎಂದು ಕಳವಳ ವ್ಯಕ್ತಪಡಿಸಿ ಇಂದು ಇದೇ ಊರಿನ ಯುವಕರಾದ ಶರಣಬಸವ ಅವರು ತಮ್ಮ ಹುಟ್ಟು ಹಬ್ಬವನ್ನು ಸರಕಾರಿ ಶಾಲಾ ಮಕ್ಕಳಿಗೆ ಓದುವ ಹವ್ಯಾಸ ಮೂಡಿಸುವ ಕಿಟ್ಟುಗಳನ್ನು ಮತ್ತು ಒಂದೊಂದು ಸಸಿಗಳನ್ನು ವಿತರಿಸಿ ಆಚರಿಸಿಕೊಳ್ಳುವುದು ಸಮಾಜಕ್ಕೆ ಒಂದು ಉತ್ತಮ ಕೊಡುಗೆಯಾಗಿದೆ ಎಂದರು.



ಈ ಸಂದರ್ಭದಲ್ಲಿ ಯಮನಪ್ಪ ಮತ್ತು ಗ್ರಾಮಸ್ಥರಿಂದ ಶಾಲೆಗೆ ಟೇಬಲ್ ಮತ್ತು ಇತರ ಸಾಮಾಗ್ರಿಗಳನ್ನು ಮಾಡಿಸಿಕೊಡುವುದಾಗಿ ಭರವಸೆ ನೀಡಿದರು.



ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ರೂವಾರಿಗಳಾದ ಮಹಾಂತೇಶ ರೌಡಕುಂದ SDMC ಅದ್ಯಕ್ಷರು ಬಸವರಾಜ, ಶಾಲೆಯ ಮುಖ್ಯಗುರುಗಳಾದ ಕೃಷ್ಣಚಾರ್ಯ ವನಸಿರಿ ಫೌಂಡೇಶನ್ ಸದಸ್ಯರಾದ ಮಹಾಂತೇಶ ರೌಡಕುಂದ ಊರಿನ ಹಿರಿಯರು ಯಮನಪ್ಪ, ಹುಚ್ಚಪ್ಪ, ಗಂಗಪ್ಪ,ಶರಣಪ್ಪ ಕುರಲಿ, ಬಡಿಯಪ್ಪ ಕುರಕುಂದಿ, ವನಸಿರಿ ಫೌಂಡೇಶನ್ ಸದಸ್ಯರಾದ ವೆಂಕನಗೌಡ,ಬಸವರಾಜ, ನಾಗರಾಜ ಉಪ್ಪಲದೊಡ್ಡಿ, ಮೈಹೆಬೂಬ್ ರಮೇಶ ನಾಗಲಾಪೂರ ಹಾಗೂ ಶಾಲೆಯ ಶಿಕ್ಷಕರು,SDMCಸದಸ್ಯರು, ಊರಿನ ಹಿರಿಯರು,ಯುವಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್