ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವಿಧಾನಸಭಾ ಚುನಾವಣೆ: ಜಿಲ್ಲೆಯಾದ್ಯಂತ 23 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Advertisement
ರಾಯಚೂರು,ಏ.17(ಕವಾ):- ವಿಧಾನಸಭೆ ಚುನಾವಣೆ-2023ರ ಹಿನ್ನಲೆಯಲ್ಲಿ ಏ.17ರ(ಸೋಮವಾರ)ದಂದು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 23 ಅಭ್ಯರ್ಥಿಗಳಿಂದ ನಾಮಪತ್ರಗಳು ಸಲ್ಲಿಕೆಯಾಗಿವೆ.

ರಾಯಚೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಶಿವರಾಜ್ ಪಾಟೀಲ್(ಭಾರತೀಯ ಜನತಾ ಪಾರ್ಟಿ)(ಎರಡು ಪ್ರತಿಗಳು) ಹಾಗೂ ಜಯಭೀಮ(ಬಹುಜನ ಸಮಾಜ ಪಾರ್ಟಿ) ಅವರು ನಾಮಪತ್ರ ಸಲ್ಲಿಸಿದರು.

ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಸುಭಾಷಚಂದ್ರ ಸಾಂಬಾಜಿ(ಆಮ್ ಆದ್ಮಿ ಪಾರ್ಟಿ), ಅವರು ನಾಮಪತ್ರ ಸಲ್ಲಿಸಿದರು.

ದೇವದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕೆ.ಶಿವನಗೌಡ ನಾಯಕ(ಭಾರತೀಯ ಜನತಾ ಪಾರ್ಟಿ)(ನಾಲ್ಕು ಪ್ರತಿಗಳು), ಶ್ರೀದೇವಿ ನಾಯಕ(ಭಾರತೀಯ ರಾಷ್ಟ್ರೀಯ ಕಾಂಗ್ರೆಸ್) ಹಾಗೂ ರೂಪಾ(ಪಕ್ಷೇತರ) ಅವರು ನಾಮಪತ್ರ ಸಲ್ಲಿಸಿದ್ದಾರೆ.

ಲಿಂಗಸುಗೂರು ವಿಧಾನಸಭಾ ಕ್ಷೇತ್ರದಲ್ಲಿ ಶಿದ್ದಪ್ಪ ಬಂಡಿ (ಜಾತ್ಯಾತೀತ ಜನತಾ ದಳ) (ಎರಡು ಪ್ರತಿಗಳು), ಅನಿಲ್ ಕುಮಾರ(ಬಹುಜನ ಸಮಾಜ ಪಕ್ಷ), ಮಾನಪ್ಪ ದೇವಪ್ಪ ವಜ್ಜಲ್(ಭಾರತೀಯ ಜನತಾ ಪಾರ್ಟಿ), ದುರುಗಪ್ಪ ಸಂಗಪ್ಪ ಹೂಲಗೇರಿ( ಭಾರತೀಯ ರಾಷ್ಟ್ರೀಯ ಕಾಂಗ್ರೆಸ್) ಹಾಗೂ ಗಂಗಾ ಬಂಡಿ (ಜಾತ್ಯಾತೀತ ಜನತಾ ದಳ) ( ಎರಡು ಪ್ರತಿಗಳು) ಅವರು ನಾಮಪತ್ರ ಸಲ್ಲಿಸಿದರು.

ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಹಂಪನಗೌಡ (ಭಾರತೀಯ ರಾಷ್ಟ್ರೀಯ ಕಾಂಗ್ರೆಸ್), ಎನ್.ಮಲ್ಲಿಕಾರ್ಜುನ ( ಕಲ್ಯಾಣ ರಾಜ್ಯ ಪ್ರಗತಿ ಪಕ್ಷ), ಎನ್.ರಮ್ಯ(ಪಕ್ಷೇತರ), ವೆಂಕಟರಾವ್ ನಾಡಗೌಡ( ಜನತಾದಳ (ಜಾತ್ಯಾತೀತ)), ನಿರುಪಾದಿ(ಕರ್ನಾಟಕ ರಾಷ್ಟ್ರ ಸಮಿತಿ), ಬಸನಗೌಡ ಬಾದರ್ಲಿ(ಪಕ್ಷೇತರ), ಕರಿಯಪ್ಪ ಕೆ( ಭಾರತೀಯ ಜನತಾ ಪಾರ್ಟಿ) ಹಾಗೂ ನಿಜಗುಣಯ್ಯ(ಉತ್ತಮ ಪ್ರಜಾಕೀಯ ಪಾರ್ಟಿ) ಅವರು ನಾಮಪತ್ರ ಸಲ್ಲಿಸಿದ್ದಾರೆ.

ಮಾನವಿ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಮಾನಪ್ಪ ನಾಯಕ( ಭಾರತೀಯ ಜನತಾ ಪಾರ್ಟಿ), ಮುದುಕಪ್ಪ ನಾಯಕ(ಬಹುಜನ ಸಮಾಜ ಪಾರ್ಟಿ) ರಾಜಾ ವೆಂಕಟಪ್ಪ ನಾಯಕ( ಜನತಾದಳ( ಜಾತ್ಯಾತೀತ) ಅವರು ನಾಮಪತ್ರ ಸಲ್ಲಿಸಿದ್ದಾರೆ.

ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಬಸನಗೌಡ ತುರ್ವಿಹಾಳ(ಭಾರತೀಯ ರಾಷ್ಟ್ರೀಯ ಕಾಂಗ್ರೆಸ್) ಅವರು ನಾಮಪತ್ರವನ್ನು ಸಲ್ಲಿಸಿದ್ದಾರೆ.

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್