ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವಿಧಾನಸಭೆ ಚುನಾವಣೆಗೆ ಜಿಲ್ಲಾಡಳಿತ, ಚುನಾವಣಾ ಆಯೋಗದಿಂದ ಸಕಲ ಸಿದ್ದತೆ: ಡಿ.ಸಿ ಎಲ್.ಚಂದ್ರಶೇಖರ ನಾಯಕ

Advertisement
ರಾಯಚೂರು,ಏ.12(ಕ.ವಾ):- ವಿಧಾನಸಭೆ ಚುನಾವಣೆ-2023ರ
ಹಿನ್ನಲೆಯಲ್ಲಿ ಏ.13ರಿಂದ ಚುನಾವಣೆಗೆ ನಾಮಪತ್ರ ಸಲ್ಲಿಕೆ
ಆರಂಭವಾಗಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ, ಮತದಾನ
ಹಾಗೂ ಎಣಿಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ
ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ
ಎಲ್.ಚಂದ್ರಶೇಖರ ನಾಯಕ ಅವರು ಹೇಳಿದರು.
ಅವರುಏ.12ರ(ಬುಧವಾರ) ನಗರದ ಜಿಲ್ಲಾಧಿಕಾರಿ ಕಚೇರಿ
ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ,
ಏ.13ರಿಂದ ಏ.20ರ ವರೆಗೆ ಚುನಾವಣೆಯ ನಾಮಪತ್ರ ಸಲ್ಲಿಕೆ
ಪ್ರಕ್ರಿಯೆ ನಡೆಯಲಿದ್ದು, ಏ.21ರಂದು ನಾಮಪತ್ರ ಪರಿಶೀಲನೆ
ನಡೆಯಲಿದೆ. ಏ.24ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ
ದಿನಾಂಕವಾಗಿರುತ್ತದೆ. ಎಂದರು.

ಉಳಿದಂತೆ ಮೇ.10ರಂದು ಮತದಾನ ಪ್ರಕ್ರಿಯೆ
ನಡೆಯಲಿದ್ದು, ಮೇ.13ಕ್ಕೆ ಎಣಿಕೆ ಪ್ರಕ್ರಿಯೆ ಮತ್ತು
ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಈ ಎಲ್ಲಾ ಚುನಾವಣೆ
ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ, ಚುನಾವಣಾ
ಆಯೋಗದಿಂದ ಎಲ್ಲಾ ರೀತಿಯ ಸಿದ್ದತೆಗಳನ್ನು
ಮಾಡಿಕೊಳ್ಳಲಾಗಿದೆ. ಎಂದರು.



ಜಿಲ್ಲೆಯಲ್ಲಿ ಈಗಾಗಲೇ ಚೆಕ್‍ಪೋಸ್ಟ್‍ಗಳನ್ನು ನಿರ್ಮಾಣ
ಮಾಡಲಾಗಿದ್ದು, ಇವುಗಳಲ್ಲಿ ಎಫ್.ಎಸ್.ಟಿ, ಎಸ್.ಎಸ್.ಟಿ ಹಾಗೂ ವಿ.ಎಸ್.ಟಿ ತಂಡಗಳು ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿವೆ. ಮತ್ತು
ಇಲ್ಲಿಯವರೆಗೂ ಒಟ್ಟು 53 ಲಕ್ಷ ರೂ. ದಾಖಲೆಯಿಲ್ಲದ ಹಣವನ್ನು
ಜಪ್ತಿ ಮಾಡಲಾಗಿದ್ದು, ಅಬಕಾರಿ ಇಲಾಖೆಯಿಂದ 3300 ಲೀಟರ್ ಮದ್ಯ ಸೇರಿದಂತೆ ಪೊಲೀಸ್ ಇಲಾಖೆಯಿಂದ ಒಂದು ಸಾವಿರ ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.



ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು ಮೂರು
ವೆಚ್ಚಗಳ ವೀಕ್ಷಕರು ಮತ್ತು ನಾಲ್ಕು ಸಾಮಾನ್ಯ ವೀಕ್ಷಕರು
ಆಗಮಿಸಲಿದ್ದು, ಈ ಅಧಿಕಾರಿಗಳು ಜಿಲ್ಲೆಯಲ್ಲಿ ಚನಾವಣೆಗೆ
ಸಂಬಂಧಿಸಿದಂತೆ ಕಾರ್ಯ ನಿರ್ವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ
ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್