ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವಿಶ್ವಾಸಾರ್ಹವಾಗಿ ಬೆಳೆಯುತ್ತಿರುವ ಸುಕೋ ಬ್ಯಾಂಕ್ 7.87 ಕೋಟಿ ರೂಪಾಯಿ ಲಾಭ

ಬಳ್ಳಾರಿ, ಏ. 02 ಸಹಕಾರಿ ಕ್ಷೇತ್ರದಲ್ಲಿ ವಿಶ್ವಾಸಾರ್ಹವಾಗಿ ಬೆಳೆಯುತ್ತಿರುವ ಸುಕೋ ಬ್ಯಾಂಕ್' 2022-23ರ ಆರ್ಥಿಕ ಸಾಲಿನಲ್ಲಿ ಒಟ್ಟು 1560 ಕೋಟಿ ರೂಪಾಯಿ ವಹಿವಾಟು ನಡೆಸಿ, ಶೇ.23.43% ರಷ್ಟು ಪ್ರಗತಿ ಸಾಧಿಸಿ 7.87 ಕೋಟಿ ರೂಪಾಯಿ ಲಾಭಗಳಿಸಿದ್ದು, ಬ್ಯಾಂಕ್‌ನ ಎನ್‌ಪಿಎ ಶೂನ್ಯವಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಮೋಹಿತ್ ಮಸ್ಕಿ ಅವರು ತಿಳಿಸಿದ್ದಾರೆ.

ಸುಕೋ ಬ್ಯಾಂಕ್ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿ, ಒಟ್ಟು ಲಾಭ 18.65 ಕೋಟಿ ರೂಪಾಯಿ ಆಗಿದ್ದು, ತೆರಿಗೆ ಪಾವತಿಯ ನಂತರ ನಿವ್ವಳ ಲಾಭ 7.87 ಕೋಟಿ ರೂಪಾಯಿ ಆಗಿದೆ. ಬ್ಯಾಂಕ್‌ನ ಎನ್‌ಪಿಎ (ನಿವ್ವಳ ಅನುತ್ಪಾದಕ ಆಸ್ತಿ) ಶೇ. 0% ರಷ್ಟಿದೆ ಎಂದರು.

ಸುಕೋ ಬ್ಯಾಂಕ್ ಕರ್ನಾಟಕದಾದ್ಯಂತ ಕಾರ್ಯಕ್ಷೇತ್ರ ವ್ಯಾಪ್ತಿಯನ್ನು ಹೊಂದಿದ್ದು 29 ಶಾಖೆಗಳಲ್ಲಿ ತನ್ನ ವ್ಯವಹಾರವನ್ನು ನಡೆಸಿದೆ. ಒಟ್ಟು 940 ಕೋಟಿ ರೂಪಾಯಿ ಠೇವಣಿ ಹೊಂದಿ, 620 ಕೋಟಿ ರೂಪಾಯಿ ಸಾಲ ವಿತರಣೆ ಮಾಡಿದೆ. ಒಟ್ಟು ಸಾಲದಲ್ಲಿ 25 ಲಕ್ಷದೊಳಗಿನ ಕಿರು ಸಾಲಗಳು 252 ಕೋಟಿ ಇದ್ದು, ಇದು ಒಟ್ಟು ಸಾಲದ ಶೇ.41 ರಷ್ಟು ಇರುತ್ತದೆ. ಸುಕೋ ಬ್ಯಾಂಕ್ ಎಂ.ಎಸ್.ಎA.ಇ ವಲಯಕ್ಕೆ ನೀಡುತ್ತಿರುವ ಮಹತ್ವವನ್ನು ಇದು ಸಾಬೀತು ಮಾಡುತ್ತದೆ ಎಂದರು.

ಸುಕೋ ಬ್ಯಾಂಕ್ ಕೇಂದ್ರ ಸರ್ಕಾರದ ಯುಪಿಐ ಹಣ ಪಾವತಿ ತಂತ್ರಜ್ಞಾನದ ವ್ಯವಸ್ಥೆಗೆ ಒಳಪಟ್ಟಿದೆ. ಹೊಸ ತಂತ್ರಜ್ಞಾನವನ್ನು ದೈನಂದಿನ ವ್ಯವಹಾರದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅನೇಕ ಪ್ರಥಮಗಳ ಗೌರವಕ್ಕೆ ಪ್ರಾಪ್ತಿಯಾಗಿದೆ ಎಂದರು.



ರೆಪೋ ರಿಲೇಟೆಡ್ ರೇಟ್' ಠೇವಣಿ ಯೋಜನೆ ಅಡಿಯಲ್ಲಿ ನಮ್ಮ ಗ್ರಾಹಕರ ಉಳಿತಾಯಕ್ಕೆ ಹಣದುಬ್ಬರಕ್ಕಿಂತ ಹೆಚ್ಚಿನ ಬಡ್ದಿ ನೀಡಿ ಅವರ ಉಳಿತಾಯಕ್ಕೆ ಗೌರವ ನೀಡುವ ನಿಟ್ಟಿನಲ್ಲಿ ಕಳೆದ ವರ್ಷ ಹೊಸ ಹಾಗೂ ವಿನೂತನ ಠೇವಣಿ ಯೋಜನೆಯನ್ನು ಜಾರಿ ತಂದಿದ್ದೇವೆ. ರೆಪೋ ರೇಟ್‌ಗಿಂತ ಶೇ.2.20% ಹೆಚ್ಚು ಬಡ್ಡಿಯನ್ನು ಈ ಯೋಜನೆಯಲ್ಲಿ ನೀಡುತ್ತಿದ್ದು 3 ವರ್ಷಗಳ ಠೇವಣಿ ಯೋಜನೆ ಇದಾಗಿದೆ. ಪ್ರತೀ ಆರು ತಿಂಗಳಿಗೊಮ್ಮೆ ರಿಜರ್ವ್ ಬ್ಯಾಂಕಿನ ರೆಪೋ ರೇಟ್ ಅನುಸಾರ ಬಡ್ಡಿದರ ಬದಲಾಗುತ್ತದೆ. ಇದು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಒಂದು ವಿನೂತನ ಠೇವಣಿ ಯೋಜನೆಯಾಗಿದೆ ಎಂದು ಹೇಳಿದರು.

ನವೆಂಬರ್ ತಿಂಗಳಿನಲ್ಲಿ ಈ ಯೋಜನೆಗೆ ಚಾಲನೆ ನೀಡಿದ್ದು, ಶೇ. 8.10 ಬಡ್ಡಿ ನೀಡುತ್ತಿದ್ದು ಏಪ್ರೀಲ್ 1 ರ ನಂತರ ಶೇ. 8.70 ಬಡ್ಡಿದರ ನೀಡಲಾಗುತ್ತಿದೆ. ಹಣದುಬ್ಬರ ನಿರ್ವಹಿಸಲು ಇದು ಉತ್ತಮ ಠೇವಣಿ ಯೋಜನೆಯಾಗಿದ್ದು ಗ್ರಾಹಕರು ಈ ಯೋಜನೆಯ ಸದವಕಾಶ ಪಡೆಯಬಹುದಾಗಿದೆ ಎಂದರು.



ನಮ್ಮ ಭಾಗದಲ್ಲಿರುವ ಶೈತ್ಯಾಗಾರ ಗೋದಾಮುಗಳ ಜೊತೆ ಒಪ್ಪಂದ ಮಾಡಿಕೊಂಡು ರೈತರು ಸಂಗ್ರಹಿಸಿದ ಕೃಷಿ ಉತ್ಪನ್ನಗಳ ಮೇಲೆ ಕಡಿಮೆ ಬಡ್ಡಿ ದರದಲ್ಲಿ ರೂ. 36 ಕೋಟಿ ಸಾಲವನ್ನು ವಿತರಿಸಿ ರೈತರ ಹಿತಾಸಕ್ತಿ ಕಾಪಾಡುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.

ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಎಂ.ಆರ್. ಗಿರೀಶ್, ಆಡಳಿತ ಮಂಡಳಿಯ ಕಾರ್ಯದರ್ಶಿ ವೆಂಕಟೇಶ್‌ರಾವ್ ಅವರು ಈ ಸಂದರ್ಭದಲ್ಲಿ

ಉಪಸ್ಥಿತರಿದ್ದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
 ಸಿಂಧನೂರಿನ ಯುವಕ ಕಾಣೆಯಾದ ಪ್ರಕರಣ: ಪೋಷಕರ ಕಣ್ಣೀರಿನ ಮನವಿಸುಳ್ಳು ದೂರುಗಳಿಗೆ ಕಡಿವಾಣ: 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು“50 ವರ್ಷಗಳ ಬದುಕಿಗೆ 15 ದಿನಗಳ ಗಡುವು: ಗಾಂಧಿನಗರದ 80 ಬಡ ಕುಟುಂಬಗಳ ಮೇಲೆ ಜೆಸಿಬಿ ನೆರಳು!”ಪೊಲೀಸ್ ಪೇದೆ ಮದುವೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಮಾನವೀಯತೆಗೆ ಮಾದರಿ ಘಟನೆನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತ!ಬರುವ ದಿನಗಳು ಅಶಾಂತಿ ಸೂಚನೆ – ಅನ್ನ ನೀರಿಗೆ ಆಹಾಕಾರ: ಕೋಡಿಮಠ ಸ್ವಾಮೀಜಿ ಭವಿಷ್ಯಚಲಿಸುತ್ತಿದ್ದ ಬಸ್ ಏಕಾಏಕಿ ಜಮೀನಿಗೆ ನುಗ್ಗಿದ ಘಟನೆ – ನೂರಕ್ಕೂ ಹೆಚ್ಚು ಪ್ರಯಾಣಿಕರು ಪಾರು!ಕಲಮಂಗಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಭರ್ಜರಿ ಸಾಧನೆ“ಬಿಸಿಲಿನ ಅಬ್ಬರ: ಕರ್ನಾಟಕಲ್ಲಿ ಲಾಕ್‌ಡೌನ್ ಬರುತ್ತಾ..?”625ಕ್ಕೆ 625: ರಾಯಚೂರು ಸುಖದೇವ್ ಸಾಧನೆಲೋಕಾಯುಕ್ತ ಬಲೆಗೆ ಬಿದ್ದ ಕೆರೂರ ಪಿ.ಎಸ್.ಐ. ಭೀಮಪ್ಪ ರಬಕವಿ80 ಅಡಿ ಕೆಳಗೆ ನೀರು: ಪೈದೊಡ್ಡಿ ವೃದ್ಧನ ಗೋಳು ಕೇಳುವರು ಯಾರು “ಪುರಾಣದ ಬಸವಣ್ಣ ಅಲ್ಲ — ಸಮಾಜ ಬದಲಿಸಿದ ಮನುಷ್ಯ ಬಸವಣ್ಣ”