ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಶೇ.100 ಪ್ರತಿಶತ ಮತದಾನವಾಗಬೇಕು: ಸಿಇಒ

Advertisement
ರಾಯಚೂರು,ಏ.30(ಕವಾ):- ಮೇ.10ರಂದು ವಿಧಾನಸಭಾ ಚುನಾವಣೆಯ ಮತದಾನ ಇರುವುದರಿಂದ ಜಿಲ್ಲೆಯ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಶೇ.100 ಪ್ರತಿಶತ ಮತದಾನ ಮಾಡಬೇಕು ಆದ್ದರಿಂದ ಸ್ವೀಪ್ ಸಮಿತಿಯಿಂದ ನಮ್ಮ ನಡೆ ಮತಗಟ್ಟೆಯ ಕಡೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಹೇಳಿದರು.



ಅವರು ಏ.30ರ(ಭಾನುವಾರ) ನಗರಸಭೆ ಕಾರ್ಯಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿ ಮತಗಟ್ಟೆಗೆ ಚುನಾವಣೆ ಧ್ವಜಾರೋಹಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಮತದಾನವೆಂಬುವುದು ಪ್ರಜಾಪ್ರಭುತ್ವದಲ್ಲಿ ಅತಿದೊಡ್ಡ ಹಬ್ಬವಿದ್ದಂತೆ ಪ್ರತಿಯೊಬ್ಬ ಪ್ರಜೆ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಿದಾಗ ಮಾತ್ರ ಹಬ್ಬಕ್ಕೆ ಕಳೆ ಸಿಕ್ಕಂತಾಗುತ್ತದೆ ಆದ್ದರಿಂದ ಪ್ರತಿಯೊಬ್ಬರು ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಿ ಪ್ರಜಾಪ್ರಭುತ್ವದ ಹಬ್ಬವನ್ನು ಸಡಗರದಿಂದ ಆಚರಣೆ ಮಾಡಬೇಕೆಂದು ತಿಳಿಸಿದರು.



ಇದೇ ವೇಳೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಮಾತನಾಡಿ, ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಲ್ಲೆಯ ಪ್ರತಿಯೊಂದು ಮತಗಟ್ಟೆಯಲ್ಲೂ ಚುನಾವಣೆಯ ಧ್ವಜರೋಹಣ ಮಾಡಲಾಗಿದ್ದು, ಇದರಿಂದ ಮತಗಟ್ಟೆಗಳ ಮಾಃಇತಿ ಜನರಿಗೆ ಸುಲಭವಾಗಿ ತಿಳಿಸಿದಂತಾಗುತ್ತದೆ ಜೊತೆಗೆ ಯಾವುದೇ ವ್ಯಕ್ತಿ ಯಾವುದೇ ಕಾರಣಕ್ಕೂ ಮತದಾನದಿಂದ ಹಿಂದುಳಿಯಬಾರದೆಂಬುವುದು ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ ಎಂದರು.

ಇದೇ ವೇಳೆ ಹಲಗಿ ಮೇಳ, ಡೊಳ್ಳುಕುಣಿತ, ನಾಟ್ಯಮೇಳ ಸೇರಿದಂತೆ ಇನ್ನಿತರ ಕಲಾತಂಡಗಳಿಂದ ಹಾಗೂ ಸೈಕಲ್ ಜಾಥ, ಹಾಗೂ ಪಾದಯಾತ್ರೆ ಮೂಲಕ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು. ನಂತರ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಮತದಾರರ ಪ್ರತಿಜ್ಞಾವಿಧಿಯನ್ನು ಭೊಧಿಸಿದರು.

 

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಗೂ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಶಿಕಾಂತ ಶಿವಪುರೆ, ಸಹಾಯಕ ಆಯುಕ್ತ ಹಾಗೂ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ರಜನಿಕಾಂತ ಚೌಹಾಣ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಆಶಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ನಗರಸಭೆ ಪೌರಾಯುಕ್ತ ಕೆ.ಗುರುಲಿಂಗಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಾ ತಜ್ಞ ಡಾ.ವಿಜಯಶಂಕರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಈರೇಶ ನಾಯಕ ಸೇರಿದಂತೆ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್