ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಶ್ರೀ ಶಂಭುಲಿಂಗೇಶ್ವರ ಸ್ವಾಮಿಯ ವಿಜೃಂಭಣೆಯ ರಥೋತ್ಸವ

Advertisement
ಏಪ್ರಿಲ್ 07. ಸಿರುಗುಪ್ಪ ನಗರದ ದೇಶನೂರು ರಸ್ತೆಯಲ್ಲಿ ತುಂಗಾಭದ್ರ ನದಿ ತೀರದಲ್ಲಿರುವ ಐತಿಹಾಸಿಕ ಶ್ರೀ ಶಂಭುಲಿಂಗೇಶ್ವರ ಸ್ವಾಮಿಯ ರಥೋತ್ಸವ ಅಪಾರ ಭಕ್ತಸಾಗರದ ಸಮ್ಮುಖದಲ್ಲಿ ಗುರುವಾರ ಸಾಯಂಕಾಲ ವಿಜೃಂಭಣೆಯಿಂದ ಜರುಗಿತು.

ಪ್ರತಿ ವರ್ಷದಂತೆ ಜಾತ್ರೋತ್ಸವದ ನಿಮಿತ್ತ ಕಳೆದೆರಡು ದಿನಗಳಿಂದ ದೇಗುಲದಲ್ಲಿ ಅಗ್ನಿಪ್ರವೇಶ, ಪಲ್ಲಕ್ಕಿಸೇವೆ, ಮಹಾ ಪಂಚಾಮೃತಾಭಿಷೇಕ, ವೀಳ್ಯದೆಲೆ, ವಿವಿಧ ಫಲ ಪುಷ್ಪಗಳು, ಆಭರಣಗಳಿಂದ ಶ್ರೀ ಶಂಭುಲಿಂಗೇಶ್ವರ ಸ್ವಾಮಿಗೆ ಅಲಂಕಾರ, ಭಕ್ತರಿಂದ ಕಾಯಿ ಕರ್ಪೂರ, ಎಡೆಯ ನೈವೇದ್ಯ, ಮಹಾಮಂಗಳಾರತಿ ಸೇರಿದಂತೆ ಇನ್ನಿತರ ಧಾರ್ಮಿಕ ವಿಧಿವಿಧಾನಗಳು ಜರುಗಿದವು.

ರಥೋತ್ಸವದ ಹಿನ್ನಲೆ ನಗರ ಹಾಗೂ ಗ್ರಾಮೀಣ ಭಾಗದ ಭಕ್ತರು ತಂಡೋಪ ತಂಡವಾಗಿ ವಾದ್ಯಗಳೊಂದಿಗೆ ಬೃಹದಾಕಾರದ ಪೇಪರ್ ಹಾಗೂ ಪುಷ್ಪ ಮಾಲೆಗಳನ್ನು ಮೆರವಣಿಗೆಯ ಮೂಲಕ ತಂದು ರಥಕ್ಕೆ ಅರ್ಪಿಸಿದರು.

ನಂತರ ಸಾಯಂಕಾಲ ವಿವಿಧ ವಾದ್ಯಗಳೊಂದಿಗೆ ಜರುಗಿದ ರಥೋತ್ಸವದಲ್ಲಿ ಭಾಗವಹಿಸಿದ್ದ ಅಪಾರ ಭಕ್ತರು ಹೂಹಣ್ಣು ಎಸೆದು ಭಕ್ತಿಯಿಂದ ನಮಿಸಿದರು ಸುತ್ತಮುತ್ತಲಿನ ಗ್ರಾಮಗಳಾದ ದೇಶನೂರು, ಗಡ್ಡೆ ವಿರುಪಾಪುರ, ಕೆಂಚನಗುಡ್ಡ, ದೇವಲಾಪುರ, ಬಾಗೇವಾಡಿ, ಗಜಗಿನಾಳ್, ಅರಳಿಗನೂರು, ಪಪ್ಪನಾಳ್, ಹಳೆಕೋಟೆ ಹಾಗೂ ಇನ್ನಿತರ ಗ್ರಾಮಗಳ ಭಕ್ತರು ಆಗಮಿಸಿ ಭಕ್ತಿಯಿಂದ ತಮ್ಮ ಹರಕೆಗಳನ್ನು ಸಲ್ಲಿಸಿದರು

 

ವರದಿ.ಸಿ.ಖಾಜಾಮೋಹಿದ್ದೀನ್. ಸಿರುಗುಪ್ಪ
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್