ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸಚಿವ ಸ್ಥಾನ ನೀಡಬೇಕೆಂದು 101 ತೆಂಗಿನ ಕಾಯಿ ಆಂಜನೇಯನಿಗೆ ಅರ್ಪಿಸಿದ ಅಭಿಮಾನಿಗಳು

Advertisement
ಮೇ 20. ಸಿಂಧನೂರು ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ನೀಡಲು ಹೊಸಳ್ಳಿ ಇಜೆ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ 101 ಕಾಯಿ ಒಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು.

https://youtube.com/shorts/m_xROQoCu7Y?feature=share4

ರಾಜ್ಯದಲ್ಲಿ ಸರ್ಕಾರ ಒಂದು ಪಕ್ಷವಾದರೆ ಕ್ಷೇತ್ರದಲ್ಲಿ ಒಂದು ಪಕ್ಷದ ಶಾಸಕರು ಇರುತ್ತಿದ್ದರು ಹೀಗಾಗಿ ಈ ಭಾಗದ ಶಾಸಕರಿಗೆ ಇಲ್ಲಿಯವರೆಗೆ ಕೂಡ ಯಾವುದೇ ರೀತಿ ಸಚಿವ ಸ್ಥಾನ ನೀಡದೆ ಅನ್ಯಾಯವಾಗುತ್ತಿತ್ತು ಆದರೆ ಈಗ ರಾಜ್ಯದಲ್ಲಿ ಸರಕಾರ ಮತ್ತು ತಮ್ಮ ಕ್ಷೇತ್ರದಲ್ಲಿ ಶಾಸಕರು ಒಂದೇ ಪಕ್ಷವಾಗಿದ್ದು ಐದನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಈ ಭಾಗದ ಮೆಚ್ಚಿನ ನಾಯಕರಾದ ಶ್ರೀ ಹಂಪನಗೌಡ ಬಾದರ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಹೈಕಮಾಂಡಿಗೆ ಒತ್ತಾಯಿಸಿ ಜೊತೆಗೆ ಸಿಂಧನೂರು ತಾಲೂಕಿನ ಹೊಸಹಳ್ಳಿ ಇಜೆ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಹಂಪನಗೌಡ ಬಾದರ್ಲಿ ಅಭಿಮಾನಿ ಬಳಗದಿಂದ 101 ಕಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿದರು.

ನಮ್ಮ ಸಿಂಧನೂರನ್ನು ಜಿಲ್ಲಾ ಕೇಂದ್ರ ಮಾಡಲು ಮುಂದಾಗಿರುವ ಶಾಸಕರು ಸಚಿವ ಸಂಪುಟದಲ್ಲಿ ಸ್ಥಾನ ಪಡೆದರೆ, ಆಡಳಿತಾತ್ಮಕವಾಗಿ ನಮ್ಮ ಸಿಂಧನೂರು ಜಿಲ್ಲಾ ಕೇಂದ್ರ ಆಗಲು ಸಹಕಾರಿ ಆಗುತ್ತದೆ. ಅದೇ ರೀತಿ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ, ತಾಲೂಕಿಗೆ ಹೆಚ್ಚಿನ ಅನುದಾನ ತರುವಲ್ಲಿ ಸಫಲರಾಗುತ್ತಾರೆ ಎಂಬ ನಂಬಿಕೆಯಿದೆ ಎಂದು ಈ ಸಂದರ್ಭದಲ್ಲಿ ಹೊಸಳ್ಳಿ ಇಜೆ ಗ್ರಾಮದ ಹಂಪನಗೌಡ ಬಾದರ್ಲಿ ಅಭಿಮಾನಿ ಬಳಗದಿಂದ ವಿಶೇಷ ಪೂಜೆ ಸಲ್ಲಿಸಿ, ಸಚಿವ ಸ್ಥಾನ ನೀಡಲು ಅಭಿಮಾನಿಗಳು ಒತ್ತಾಯಿಸಿದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ