ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸಣ್ಣ ಪುಟ್ಟ ವ್ಯಾಪಾರಿಗಳ ಮೇಲೆ ನಗರಸಭೆ ಪೊಲೀಸ್ ಇಲಾಖೆ ದಬ್ಬಾಳಿಕೆ ಖಂಡಿಸುತ್ತೇವೆ ಟಿಯುಸಿಐ

Advertisement
ಸಿಂಧನೂರು ಜುಲೈ 15.ನಗರದಲ್ಲಿ ಪುಟ್ ಪಾತಿನಲ್ಲಿ ಸಣ್ಣ-ಪುಟ್ಟ ವ್ಯಾಪಾರ ಮಾಡಿ ತಮ್ಮ ಜೀವನವನ್ನು ನಡೆಸುತ್ತಿರುವ ಬೀದಿ ವ್ಯಾಪಾರಿಗಳ ಮೇಲೆ ನಗರಸಭೆಯವರು ಹಾಗೂ ಪೋಲಿಸ್ ದಬ್ಬಾಳಿಕೆಯನ್ನು ನಮ್ಮ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಶ್ರಮಜೀವಿ ಬೀದಿಬದಿ ವ್ಯಾಪಾರಿಗಳ ಸಂಘ-ಟಿಯುಸಿಐ(ನೊಂ.) ತಾಲೂಕು ಸಮಿತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚರಂಡಿ ಹಿಂದೆ ಹಾಗೂ ಮುಖ್ಯರಸ್ತೆಯ ಪಕ್ಕದಲ್ಲಿ ಗೂಡಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುವವರ ತಗಡಿನ ಬಂಡಿಗಳನ್ನು ನಗರಸಭೆಯವರು ಹಾಗೂ ಪೋಲಿಸ್ ಸಿಬ್ಬಂದಿಗಳು ಜಖಂ ಗೊಳಿಸಿ ! ಎತ್ತಂಗಂಡಿ ಮಾಡುತ್ತಿರುವುದು ಖಂಡನಾರ್ಹವಾಗಿದೆ. ಮೊದಲು ನಗರಸಭೆಯವರು ಹಾಗೂ ಪೋಲಿಸ್ ಸಿಬ್ಬಂದಿಗಳು ದೊಡ್ಡ ದೊಡ್ಡ ಅಂಗಡಿಕಾರರು ಪುಟ್ ಪಾತ್ ಹಾಗೂ ಚರಂಡಿಯನ್ನು ಅತಿಕ್ರಮಣ ಮಾಡಿ ತಮ್ಮ ಸಾಮಾನು ಸರಂಜಾಮುಗಳನ್ನು ರಸ್ತೆ ಪಕ್ಕದಲ್ಲಿಟ್ಟು ವ್ಯವಹಾರ ನಡೆಸುತ್ತಿದ್ದಾರೆ. ಮೊದಲು ಅವರು ಅತಿಕ್ರಮಣ ಮಾಡಿರುವ ಪುಟ್ ಪಾತ್ ನ್ನು ತೆರವುಗೊಳಿಸಲಿ ! ಅಥವಾ ನಾವೇನಾದರೂ ಸಂಚಾರಕ್ಕೆ ತೊಂದರೆ ಮಾಡಿ ರಸ್ತೆಯಲ್ಲಿ ವ್ಯಾಪಾರ ಮಾಡಿದ್ರೆ ನಮ್ಮ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲಿ ! ಅಥವಾ ಸ್ಥಳ ಅತಿಕ್ರಮಿಸಿ ಬೇರೆಯವರಿಗೆ ಬಾಡಿಗೆ ಕೊಟ್ಟಿದ್ದರೆ ನಮ್ಮ ಮೇಲೆ ಕ್ರಮ ತೆಗೆದುಕೊಳ್ಳಲಿ ! ಅದು ಬಿಟ್ಟು ಮುಂಗಡ ನೋಟಿಸ್ ನೀಡದೆ ಗೂಂಡಾಗೊರಿಯ ಮೂಲಕ ದಬ್ಬಾಳಿಕೆಯ ಮೂಲಕ ನಮ್ಮ ಗೂಡಂಗಡಿಗಳಣು ತೆರವುಗೊಳಿಸಲಿಕ್ಕೆ ಮುಂದಾಗಬಾರದೆಂದು ನಮ್ಮ ಆಗ್ರಹವಾಗಿದೆ.

ಈ ಕುರಿತು ಬೀದಿ ಬದಿ ವ್ಯಾಪಾರಿಗಳ ಹಾಗೂ ವ್ಯಾಪಾರಿಗಳ ಸಂಘದ ಮುಖಂಡರ ಸಭೆ ಕರೆದು ನಗರದ ಎಲ್ಲಾ ರಸ್ತೆಗಳ ಪಕ್ಕದಲ್ಲಿ ವ್ಯಾಪಾರ ಮಾಡುವವರ ಸಮೀಕ್ಷೆ ನಡೆಸಿ, ಸೂಕ್ತ ಪರಿಹಾರವನ್ನು ನಗರಸಭೆಯವರು ಕಂಡುಕೊಳ್ಳಬೇಕೆಂದು ನಮ್ಮ ಒತ್ತಾಯವಾಗಿದೆ. ಅಲ್ಲಿಯವರೆಗೆ ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯವನ್ನು ನಿಲ್ಲಿಸಿ, ಯತಾಸ್ಥಿತಿ ಕಾಪಾಡಲು ಕೋರಿಕೆ.

ಈ ಸಂದರ್ಭದಲ್ಲಿ ಎಂ.ಗಂಗಾಧರ ಗೌರವಾಧ್ಯಕ್ಷರು ದುರುಗಪ್ಪ ಕಾರಲಕುಂಟಿ ಅಧ್ಯಕ್ಷರು ಹುಸೇನಭಾಷಾ ಉಪಾಧ್ಯಕ್ಷರು ಭಾಷಾಸಾಬ ಉಪಾಧ್ಯಕ್ಷರು ಶ್ರಮಜೀವಿ ಬೀದಿಬದಿ ವ್ಯಾಪಾರಿಗಳ ಸಂಘ-ಟಿಯುಸಿಐ ಸಿಂಧನೂರು ಇತರರು ಇದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್