ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸತತ ಪ್ರಯತ್ನವೇ ಸಾಧನೆಯ ಮಾರ್ಗ : ಶ್ರೀಮತಿ ಗೌರಿ ವಾಲಿಕಾರ

Advertisement
ಜು.17.ಇಂದು ನಗರದ ಪ್ರತಿಷ್ಠಿತ ವಿದ್ಯಾ ಸಂಸ್ಥೆ ಶ್ರೀ ಆದಿತ್ಯ ಪದವಿ ಮತ್ತು ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಕದಂಬ KAS ಅಕಾಡಮಿಯ 5ನೇ ಬ್ಯಾಚಿನ ಉದ್ಘಾಟನಾ ಸಮಾರಂಭ ನಡೆಯಿತು. ಈ ಸಮಾರಂಭದ ಉದ್ಘಾಟನೆಯನ್ನು ಶ್ರೀ ಕನಕದಾಸ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಗೌರಿ ವಾಲಿಕಾರ ಅವರು ಸ್ಪರ್ಧಾರ್ಥಿಗಳಿಗೆ ಸ್ಪೂರ್ತಿದಾಯಕ ವಾಕ್ಯವನ್ನು ಕಪ್ಪು ಹಲಗೆ ಮೇಲೆ ಬರೆಯುವ ಮೂಲಕ ಉದ್ಘಾಟಿಸಿದರು.ನಂತರ ಅವರು ಮಾತನಾಡಿ ವಿದ್ಯಾರ್ಥಿಗಳ ಸತತ ಪ್ರಯತ್ನವೇ ಯಶಸ್ಸಿನ ಗುಟ್ಟು ತಂದೆ ತಾಯಿಗಳ ಶ್ರಮದ ಬೆವರಿನ ಫಲವೇ ಸಾಧನೆ ಮಾಡಲು ಸ್ಪೂರ್ತಿ .ಸ್ಪರ್ಧಾರ್ಥಿಗಳು ಸೋತರೂ ಕೂಡ ಎದೆಗುಂದದೆ ಸತತ ಪ್ರಯತ್ನದ ಮೂಲಕ ಯಶಸ್ಸನ್ನ ಪಡೆಯಬೇಕು ಹಾಗೂ ಜೀವನದಲ್ಲಿ ಮಹತ್ವದ ಕಾರ್ಯವನ್ನ ಸಾಧನೆಯ ರೂಪದಲ್ಲಿ ಕಾಣಬೇಕು ಹಿಂದಿನ ಎಲ್ಲಾ ನೋವುಗಳನ್ನು ಮರಿಯಬೇಕು ಬಡತನ ಸಾಧನೆಗೆ ಎಂದೂ ಅಡ್ಡ ಬಾರದು ಎಂಬ ಸ್ಪೂರ್ತಿದಾಯಕ ಮಾತುಗಳನ್ನು ವಿದ್ಯಾರ್ಥಿಗಳೊಂದಿಗೆ, ಹಂಚಿಕೊಂಡರು.



ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಕದಂಬ ಅಕಾಡೆಮಿಯ ನಿರ್ದೇಶಕರೊಬ್ಬರಾದ ಶ್ರೀ ರಮೇಶ್ ಹಲಗೆಯವರು ಹುಟ್ಟುವಾಗ ನಮ್ಮ ಹಣೆಯಲ್ಲಿ ಏನನ್ನು ಬರೆದಿಲ್ಲ ನಾವು ಹೀಗೆ ಬದುಕಬೇಕು ಇಂಥದ್ದೇ ಉನ್ನತ ಜೀವನವನ್ನು ನಡೆಸಬೇಕು ಸಮಾಜದಲ್ಲಿ ನಾವು ಒಬ್ಬ ಪ್ರತಿಷ್ಠಿತ ವ್ಯಕ್ತಿಯಾಗಬೇಕು ಎಂಬುದು ನಮ್ಮ ಕೈಯಲ್ಲೇ ಇದೆ ನಮ್ಮ ತಾಳ್ಮೆ, ಆತ್ಮಸ್ಥೈರ್ಯ, ಸತತ ಪ್ರಯತ್ನ ಇವೆಲ್ಲವೂ ನಮ್ಮನ್ನು ಉತ್ತುಂಗ ಸ್ಥಾನಕ್ಕೆ ಒಯ್ಯುತ್ತವೆ ಎಂದು ತಿಳಿಸಿದರು. ಹಾಗೆ ಈ ಕಾರ್ಯಕ್ರಮದಲ್ಲಿ ಕದಂಬ ಅಕಾಡೆಮಿಯ ಪ್ರಧಾನ ನಿರ್ದೇಶಕರಾದ, ಶಂಕರ್ ವಾಲಿಕಾರ್, ಮಾರುತಿ ಸೋಮಲಾಪುರ್, ತಾಯಪ್ಪ ತಿಡಿಗೋಳ ಮತ್ತು ಸ್ಪರ್ಧಾರ್ಥಿಗಳು ಉಪಸ್ಥಿತರಿದ್ದರು. ಶರಣಕುಮಾರ್ ಹಲಗಿ ಪ್ರಾಸ್ತವಿಕ ನುಡಿಗಳಾಡಿದರು ಶ್ರೀಮತಿ ಶಶಿಕಲಾ ಪಾಟೀಲ್ ಕಾರ್ಯಕ್ರಮವನ್ನು ನಿರ್ವಹಿಸಿದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ