ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸರಳ ರೀತಿಯಲ್ಲಿ ಡಾ.ಬಿಆರ್ ಅಂಬೇಡ್ಕರ್ ಜಯಂತಿ ಆಚರಣೆ

ಏಪ್ರಿಲ್ 14 ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ಮಾದಿಗ ಸಮಾಜದ ವತಿಯಿಂದ ಡಾ.ಬಾಬಾ.ಸಾಹೇಬ್ ಅಂಬೇಡ್ಕರ್ ರವರ 132ನೇ ಜಯಂತ್ಯೋತ್ಸವ ಆಚರಿಸಲಾಯಿತು.

ನಂತರ ಮಾತನಾಡಿದ ಬಾಲಸ್ವಾಮಿ ತಿಡಿಗೋಳ ಡಾ. ಭೀಮರಾವ್ ಅಂಬೇಡ್ಕರ್ ಅವರು ಮಧ್ಯಪ್ರದೇಶದ ಮೋವ್‌ನಲ್ಲಿ 1891 ರ ಏಪ್ರಿಲ್ 14 ರಂದು ಜನಿಸಿದರು. ಅವರು 1908ರಲ್ಲಿ ಎಲ್ಫಿನ್ ಸ್ಟೋನ್ ಹೈಸ್ಕೂಲ್‌ನಿಂದ ಮೆಟ್ರಿಕ್ಯೂಲೇಶನ್ ಪಾಸ್ ಮಾಡಿದರು. ಉನ್ನತ ಶಿಕ್ಷಣವನ್ನು ನ್ಯೂಯಾರ್ಕ್ ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದರು.

https://youtu.be/h03xkTAfAYg

1927 ರ ಜೂನ್‌ 8 ರಂದು ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದರು. ಅವರು ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆಯ ಬಗ್ಗೆ ಹೋರಾಟವನ್ನು ಪ್ರಬಲವಾಗಿ ಆರಂಭಿಸಿದರು ಶಿಕ್ಷಣ ಎನ್ನುವಂತಹದ್ದು ಪುರುಷರಿಗೆ ಎಷ್ಟು ಮುಖ್ಯವೋ, ಮಹಿಳೆಯರಿಗೂ ಅಷ್ಟೇ ಮುಖ್ಯ ಜ್ಞಾನವು ಪ್ರತಿಯೊಬ್ಬ ವ್ಯಕ್ತಿಯ ಜೀವನಕ್ಕೆ ಆಧಾರವಾಗಿದೆ.



ದೊಡ್ಡ ಪ್ರಯತ್ನಗಳನ್ನು ಹೊರತುಪಡಿಸಿ ಈ ಜಗತ್ತಿನಲ್ಲಿ ಯಾವುದೂ ಮೌಲ್ಯಯುತವಾಗಿಲ್ಲ ನೀವು ಮನಸ್ಸಿನಿಂದ ಮುಕ್ತರಾಗಿದ್ದರೆ ನೀವು ನಿಜವಾಗಿಯೂ ಸ್ವತಂತ್ರರು ಚೆನ್ನಾಗಿ ಕಾಣಬೇಕು ಎಂದು ಬದುಕುವ ಬದಲು ಒಳ್ಳೆಯವರಾಗಿ ಬದಕಲು ಪ್ರಯತ್ನಿಸಿ ಮನಸ್ಸಿನ ಅಭಿವೃದ್ಧಿ ಮಾನವ ಜನಾಂಗದ ಅಂತಿಮ ಗುರಿಯಾಗಿರಬೇಕು ಇತಿಹಾಸವನ್ನು ಮರೆತವರು ಇತಿಹಾಸವನ್ನು ನಿರ್ಮಿಸಲಾರರು ಬದುಕು ಸುದೀರ್ಘವಾಗಿರುವುದಕ್ಕಿಂತ ಶ್ರೇಷ್ಠವಾಗಿರಬೇಕು ಸಂವಿಧಾನ ದುರ್ಬಳಕೆಯಾಗುತ್ತಿದೆ ಎಂದು ಗೊತ್ತಾದರೆ ಅದನ್ನು ಸುಡುವ ಮೊದಲಿಗ ನಾನಾಗಿರುತ್ತೇನೆ ಕಾನೂನು ಮತ್ತು ಸುವ್ಯವಸ್ಥೆ ರಾಜಕೀಯ ದೇಹಕ್ಕೆ ಔಷಧಿ ಇದ್ದಂತೆ ರಾಜಕೀಯ ದೇಹ ಅನಾರೋಗ್ಯಕ್ಕೊಳಗಾದರೆ ಖಂಡಿತವಾಗಿಯೂ ಔಷಧಿ ನೀಡಬೇಕಾಗುತ್ತದೆ ವಿದ್ಯಾವಂತರಾಗಿ,ಸಂಘಟಿತರಾಗಿರಿ ಎಂದು ಸಾರಿದ್ದಾರೆಂದು ಹೇಳಿದರು

ಇದೇ ಸಂದರ್ಭದಲ್ಲಿ ಬಾಲಸ್ವಾಮಿ ತಿಡಿಗೋಳ, ಜಿಲ್ಲಾಧ್ಯಕ್ಷರು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ರಾಯಚೂರು,ಹುಲುಗಪ್ಪ ಗ್ರಾಮ ಪಂಚಾಯಿತಿ ಸದಸ್ಯರು, ಬಸವರಾಜ್ ಹಿರೇಮನಿ ಗ್ರಾಮ ಪಂಚಾಯಿತಿ ಸದಸ್ಯರು, ಗುರುನಾಥ ಗದ್ರಟಗಿ, ದುರುಗೇಶ ಬೇರ್ಗಿ,ದೇವರಾಜ್ ಹುಲಿಯಾರ್ ಶ್ರೀಧರ್ ಉಸ್ಕಿಹಾಳ, ನಾಗರಾಜ್, ಹನುಮಂತ, ಬಸವರಾಜ್ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು,‌ ಹನುಮಂತ ನಾಗಲಾಪುರ, ಪಂಪಣ್ಣ ಕುರುಕುಂದ ಗ್ರಾಮ ಪಂಚಾಯಿತಿ ಸದಸ್ಯರು,ಗುಡದಪ್ಪ ಕುರುಕುಂದ ಗ್ರಾಮ ಪಂಚಾಯಿತಿ ಸದಸ್ಯರು, ಇನ್ನಿತರರು ಉಪಸ್ಥಿತರಿದ್ದರು
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿಗೆ ಅಭಿನಯ ಚಕ್ರವರ್ತಿ ಸುದೀಪ್ ಆಗಮನಬಿಜೆಪಿ ಯುವ ಅಧ್ಯಕ್ಷ ಹತ್ಯೆ: ಆರು ಮಂದಿಗೆ ಗಲ್ಲು!MCH ಆಸ್ಪತ್ರೆಯಲ್ಲಿ ಡಾ. ಶೃತಿ ನಿರ್ಲಕ್ಷ್ಯ? ನವಜಾತ ಶಿಶು ಸಾವುಗಳ ನಡುವೆಯೇ ಗಂಭೀರ ಆರೋಪ ಸಿಂಧನೂರಿನ ಯುವಕ ಕಾಣೆಯಾದ ಪ್ರಕರಣ: ಪೋಷಕರ ಕಣ್ಣೀರಿನ ಮನವಿಸುಳ್ಳು ದೂರುಗಳಿಗೆ ಕಡಿವಾಣ: 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು“50 ವರ್ಷಗಳ ಬದುಕಿಗೆ 15 ದಿನಗಳ ಗಡುವು: ಗಾಂಧಿನಗರದ 80 ಬಡ ಕುಟುಂಬಗಳ ಮೇಲೆ ಜೆಸಿಬಿ ನೆರಳು!”ಪೊಲೀಸ್ ಪೇದೆ ಮದುವೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಮಾನವೀಯತೆಗೆ ಮಾದರಿ ಘಟನೆನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತ!ಬರುವ ದಿನಗಳು ಅಶಾಂತಿ ಸೂಚನೆ – ಅನ್ನ ನೀರಿಗೆ ಆಹಾಕಾರ: ಕೋಡಿಮಠ ಸ್ವಾಮೀಜಿ ಭವಿಷ್ಯಚಲಿಸುತ್ತಿದ್ದ ಬಸ್ ಏಕಾಏಕಿ ಜಮೀನಿಗೆ ನುಗ್ಗಿದ ಘಟನೆ – ನೂರಕ್ಕೂ ಹೆಚ್ಚು ಪ್ರಯಾಣಿಕರು ಪಾರು!ಕಲಮಂಗಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಭರ್ಜರಿ ಸಾಧನೆ“ಬಿಸಿಲಿನ ಅಬ್ಬರ: ಕರ್ನಾಟಕಲ್ಲಿ ಲಾಕ್‌ಡೌನ್ ಬರುತ್ತಾ..?”625ಕ್ಕೆ 625: ರಾಯಚೂರು ಸುಖದೇವ್ ಸಾಧನೆ