ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸಿಂಧನೂರು ಜಿಲ್ಲಾ ಕೇಂದ್ರವನ್ನಾಗಿಸಲು ಸರ್ವ ಸಂಘಟನೆಗಳ ಒಕ್ಕೂಟ ಸಭೆ

Advertisement
ಜೂನ್ 25.ಸಿಂಧನೂರು ಜಿಲ್ಲಾ ಕೇಂದ್ರ ಸ್ಥಾಪನ ಕೇಂದ್ರ ಸಮಿತಿ ವತಿಯಿಂದ ಸಿಂಧನೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಸರ್ವ ಸಂಘಟನೆಗಳ ಒಕ್ಕೂಟಗಳ ಸಭೆ ಯನ್ನೂ ಕರೆದು ಸಿಂಧನೂರು ಜಿಲ್ಲಾ ಕೇಂದ್ರವಾಗಿಸಲು ಸರ್ವಾನುಮತದಿಂದ ನಿರ್ಣಯಿಸಲಾಯಿತು.

ಈ ಸಂದರ್ಭದಲ್ಲಿ ಸಿಂಧನೂರು ತಾಲೂಕಿನ ಕನ್ನಡಪರ, ರೈತಪರ, ಮಹಿಳಾಪರ, ವಿದ್ಯಾರ್ಥಿಗಳ , ಕಾರ್ಮಿಕ ಪರ,ಶೈಕ್ಷಣಿಕ ಸಂಘಟನೆಗಳ ಮುಖಂಡರುಗಳು ಹಾಗೂ ಪದಾಧಿಕಾರಿಗಳು ಭಾಗಿಯಾಗಿ ಸಿಂಧನೂರು ಜಿಲ್ಲಾ ಕೇಂದ್ರವನ್ನಾಗಿಸಲು ಮುಂದಿನ ಹೋರಾಟದ ರೂಪರೇಷೆಗಳು ಹಾಗೂ ಸಿದ್ಧತೆಗಳು ಕುರಿತು ಚರ್ಚಿಸಲಾಯಿತು .



ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಮಿತಿಯ ಉಪಾಧ್ಯಕ್ಷರಾದ ಶಿವರಾಜ ಗೌಡ ಹಂಚಿನಾಳ ರವರು ಶೈಕ್ಷಣಿಕವಾಗಿ ಸಾಮಾಜಿಕವಾಗಿ ಸಿಂಧನೂರು ಹಿಂದುಳಿದಿದ್ದು ಹಾಗೂ ಸಿಂಧನೂರು ಸುತ್ತಮುತ್ತಲಿನ ತಾಲೂಕುಗಳಾದ ಮಸ್ಕಿ, ಸಿರಗುಪ್ಪ,ಮಾನ್ವಿ ,ಕಾರಟಗಿ, ಲಿಂಗಸುಗೂರು ಹಾಗೂ ತಾವರಗೇರಾ ಸೇರಿದಂತೆ ಈ ತಾಲೂಕುಗಳ ಸಹ ಆಡಳಿತಾತ್ಮಕ ಕಾರಣಗಳಿಂದ ತೀರ ಹಿಂದುಳಿದಿದ್ದು ಈ ನಿಟ್ಟಿನಲ್ಲಿ ತಾಲೂಕುಗಳ ಅಭಿವೃದ್ಧಿಗಾಗಿ ಸಿಂಧನೂರು ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಿ ಕಲ್ಯಾಣ ಕರ್ನಾಟಕದ ಹಿಂದುಳಿದ ತಾಲೂಕುಗಳನ್ನು ಮೇಲೆತ್ತುವ ಕೆಲಸ ರಾಜ್ಯ ಸರ್ಕಾರ ಮಾಡಬೇಕೆಂದು ಒತ್ತಾಯಿಸಿದರು,



ಈ ಸಂದರ್ಭದಲ್ಲಿ ವಿರೇಶ ನೆಟಕಲ್ಲು ಮಾತನಾಡಿ ಸಿಂಧನೂರು ಹಾಗೂ ಸುತ್ತಮುತ್ತಲಿನ ತಾಲೂಕಿನ ಸರ್ವ ಸಂಘ ಸಂಸ್ಥೆಗಳು ಒಗ್ಗೂಡಿ ಹಾಗೂ ರಾಜಕೀಯ ಜನ ಪ್ರತಿನಿಧಿಗಳು ಸಿಂಧನೂರು ಜಿಲ್ಲಾ ಕೇಂದ್ರವಾಗಿ ನಿರ್ಮಿಸಲು ಕೈಗೊಡಿಸಬೇಕು ಎಂದು ತಿಳಿಸಿದರು.

ತಾಲೂಕಿನ ವಿವಿಧ ಸಂಘಟನೆಗಳು ಮುಖಂಡರಾದ ಈ ಸಂದರ್ಭದಲ್ಲಿ ನರೇಂದ್ರನಾಥ್, ದೇವೇಂದ್ರ ಗೌಡ ,ನಿರುಪಾದಿ ಕೆ ಗೋಮರ್ಶಿ ಅವಿನಾಶ್ ದೇಸಾಯಿ ,ಲಕ್ಷ್ಮಣ ಬೋವಿ ,ದವಲ ಸಾಬ್ ದೊಡ್ಮನಿ ಉಮೇಶ್ ಗೌಡ, ಮಲ್ಲಿಕಾರ್ಜುನ ಸ್ವಾಮಿ ,ಇಂದ್ರಮ್ಮ ಶಾಂತಗೌಡರ್, ವೀರೇಶ್ ಅಗ್ನಿ, ಚನ್ನಪ್ಪ ಪಂಪಾಪತಿ ಸೇರಿದಂತೆ ಇನ್ನಿತರರು ಉಪಸ್ಥಿತಿಯಲ್ಲಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ